ಉಗ್ರ ಅಫ್ಜಲ್ ಗುರು ಮಗನಿಂದ ಸಕತ್ ಮಾರ್ಕ್ಸ್ ಗಳಿಕೆ
ಶ್ರೀನಗರ, ಜ. 11: ಭಾರತದ ಸಂಸತ್ತಿನ ಮೇಲೆ ದಾಳಿ ನಡೆಸಿದ ನೇಣುಗಂಬ ಏರಿದ ಉಗ್ರ ಅಫ್ಜಲ್ ಗುರುವಿನ ಮಗ ವಿದ್ಯಾಭ್ಯಾಸದಲ್ಲಿ ಸಕತ್ ಚೂಟಿಯಾಗಿದ್ದಾನೆ. ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ 95ರಷ್ಟು ಅಂಕ ಪಡೆದಿದ್ದಾನೆ ಎಂಬ ಸುದ್ದಿ ಬಂದಿದೆ.
ಜಮ್ಮು ಮತ್ತು ಕಾಶ್ಮೀರ ಪರೀಕ್ಷಾ ಶಿಕ್ಷಣ ಮಂಡಳಿ ನಡೆಸಿದ ಹತ್ತನೇ ತರಗತಿಯ ಪರೀಕ್ಷೆ ಫಲಿತಾಂಶ ಭಾನುವಾರ (ಜನವರಿ 10) ಹೊರ ಬಂದಿದೆ. ಅಫ್ಜಲ್ ಗುರುವಿನ ಮಗ ಗಾಲೀಬ್ ಗುರು 500 ಅಂಕಗಳಿಗೆ 475 (ಶೇ.95)ರಷ್ಟು ಅಂಕ ಪಡೆಯುವುದರ ಮೂಲಕ ಎಲ್ಲರ ಗಮನ ಸೆಳೆದಿದ್ದಾನೆ. [ಉಂಡ ಮನೆಗೆ 2 ಬಗೆದಿದ್ದ ಅಫ್ಜಲ್ ಗುರು ಟೈಂ ಲೈನ್]
ಗಾಲೀಬ್ 5 ವಿಷಯಗಳಲ್ಲಿ 90ಕ್ಕಿಂತಲೂ ಹೆಚ್ಚು ಅಂಕ ಪಡೆದು A1 ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾನೆಂದು ಪರೀಕ್ಷಾ ಮಂಡಳಿ ತಿಳಿಸಿದೆ. ಈತನ ಈ ಸಾಧನೆಗೆ ಸ್ಥಳೀಯ ಸರ್ಕಾರ, ಸಂಘ ಸಂಸ್ಥೆಗಳು ಹಾಗೂ ಕುಟುಂಬ ವರ್ಗದವರು ತೀವ್ರ ಹರ್ಷ ವ್ಯಕ್ತಪಡಿಸಿದ್ದಾರೆ.

ಆವಂತಿಪುರ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಗಾಲೀಬ್ ಗುರು, ಇಡೀ ಶಾಲೆಯಲ್ಲೇ ಅತಿ ಹೆಚ್ಚು ಅಂಕ ಪಡೆದ ಮೊದಲ ವಿದ್ಯಾರ್ಥಿ. ವಿಶೇಷವೆಂದರೆ ಈ ವರೆಗೂ ಈ ಶಾಲೆಯಲ್ಲಿ ಬಾಲಕಿಯರೇ ಪ್ರತೀ ಪರೀಕ್ಷೆಯಲ್ಲೂ ಮೇಲುಗೈ ಸಾಧಿಸುತ್ತಿದ್ದರು. ಆದರೆ ಈ ಬಾರಿ ಈ ದಾಖಲೆಯನ್ನು ಮೀರಿ ಗಾಲೀಬ್ ಗುರು ಹೆಚ್ಚು ಅಂಕ ಪಡೆದು ದಾಖಲೆ ಬರೆದಿದ್ದಾರೆ.
ಉಳಿದಂತೆ, ಪುಲ್ವಾಮಾ ಜಿಲ್ಲಾ ಮಟ್ಟದಲ್ಲಿ ತಬೀಷ್ ಮಂಜೂರ್ ಖಾನ್ 500 ಅಂಕಗಳಿಗೆ 498 ಅಂಕ ಪಡೆದು ಮೊದಲ ಸ್ಥಾನದಲ್ಲಿದ್ದರೆ, ಅನೀಷಾ ಹಲೀಮ್ ಮತ್ತು ಹೀಬಾ ಇಂತಿಕಾಬ್ ಎರಡು ಮತ್ತು ಮೂರನೇ ಸ್ಥಾನದಲ್ಲಿದ್ದಾರೆ. 475 ಅಂಕ ಪಡೆದಿರುವ ಗಾಲೀಬ್ ಗುರು 4ನೇ ಸ್ಥಾನ ಪಡೆದಿದ್ದಾನೆ.
ಸಂಸತ್ತಿನ ಮೇಲೆ ಪಾಕಿಸ್ಥಾನ ಮೂಲದ ಜೈಷ್-ಎ-ಮೊಹಮದ್ ಉಗ್ರರು ದಾಳಿ ನಡೆಸಿದ್ದರು. ಈ ದಾಳಿಯ ಸೂತ್ರದಾರನೇ ಅಫ್ಜಲ್ ಗುರು ಎಂಬುದು ತನಿಖೆಯಿಂದ ತಿಳಿದು ಬಂದಿತ್ತು. ನಂತರ ಪೊಲೀಸರು ಈತನನ್ನು ಬಂಧಿಸಿದ್ದರು. ಸುದೀರ್ಘ ವಿಚಾರಣೆಯ ನಂತರ ಅಫ್ಜಲ್ ಗುರು ಸಂಸತ್ ದಾಳಿಗೆ ಪ್ರಮುಖ ರೂವಾರಿ ಎಂಬುದು ಸಾಬೀತಾಗಿತ್ತು. 2013 ಫೆ.9 ರಂದು ಆತನಿಗೆ ಮರಣ ದಂಡನೆಯನ್ನು ಜಾರಿ ಮಾಡಲಾಗಿತ್ತು. (ಪಿಟಿಐ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications