ಆಗ್ರಾ: ಅಂತ್ಯಕ್ರಿಯೆ ವೇಳೆ ಕಣ್ಣು ತೆರೆದ ಬಿಜೆಪಿ ನಾಯಕ, ಕುಟುಂಬಸ್ಥರು ಶಾಕ್
ಆಗ್ರಾ ಆಗಸ್ಟ್ 8: ಸಾವನ್ನಪ್ಪಿದ್ದಾರೆ ಎಂದು ಭಾವಿಸಲಾಗಿದ್ದ ವ್ಯಕ್ತಿ ಅಂತ್ಯಕ್ರಿಯೆ ವೇಳೆ ಎಚ್ಚರಗೊಂಡ ವಿಚಿತ್ರ ಘಟನೆಯೊಂದು ಆಗ್ರಾದಲ್ಲಿ ನಡೆದಿದೆ. ಆಗ್ರಾದ ಬಿಜೆಪಿ ಮಾಜಿ ಅಧ್ಯಕ್ಷ ಮಹೇಶ್ ಬಾಘೇಲ್ (65) ಇವರ ಅಂತ್ಯಕ್ರಿಯೆಗೆ ಸಕಲ ತಯಾರಿ ಮಾಡಿಕೊಳ್ಳಲಾಗಿತ್ತು.
ನಗರದ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರು ಮಹೇಶ್ ಬಾಘೇಲ್ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದರು. ಬಳಿಕವಷ್ಟೇ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಪವಾಡ ಎಂಬಂತೆ ಅವರಿಗೆ ಅಂತ್ಯಕ್ರಿಯೆಗೆ ಸಂಬಂಧಿಕರು ಸಿದ್ಧತೆ ನಡೆಸುತ್ತಿದ್ದಾಗ ಪ್ರಜ್ಞೆ ಮರಳಿ ಬಂದಿದೆ.

ಭಾನುವಾರ ರಾತ್ರಿ ಬಾಘೇಲ್ ಅವರ ಆರೋಗ್ಯ ಹದಗೆಟ್ಟಿದ್ದು, ಕುಟುಂಬಸ್ಥರು ಪುಷ್ಪಾಂಜಲಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೊದೊಯ್ದಿದ್ದರು. ಆಸ್ಪತ್ರೆಯಲ್ಲಿ ಬಾಘೆಲ್ನ ಅಂಗಾಂಗಗಳು ವಿಫಲವಾಗಿವೆ ಎಂದು ವೈದ್ಯರು ಹೇಳಿದ್ದರು. ಪ್ರಾಥಮಿಕ ತನಿಖೆಯ ನಂತರ ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದರು.
ಸೋಮವಾರ ಅವರ ಕುಟುಂಬವು ಅವರನ್ನು ಅಂತಿಮ ವಿಧಿವಿಧಾನಗಳಿಗಾಗಿ ಸರೈ ಖ್ವಾಜಾ ಪ್ರದೇಶದಲ್ಲಿನ ಅವರ ನಿವಾಸಕ್ಕೆ ಕರೆತಂದರು. ಮನೆಯಲ್ಲಿಯೇ ಅವರ ಕೆಲವು ಸಂಬಂಧಿಕರು ಬಘೇಲ್ ಅವರ ದೇಹದಲ್ಲಿ 'ಚಲನೆ' ಗಮನಿಸಿದರು. ಅವರು ಬಿಜೆಪಿ ನಾಯಕನ ಮಕ್ಕಳಾದ ಅಭಿಷೇಕ್ ಮತ್ತು ಅಂಕಿತ್ ಮನೆಗೆ ತಲುಪಿದ ನಂತರ ಅವರ ತಂದೆಗೆ ಪ್ರಜ್ಞೆ ಬಂದಿದೆ. ಕಣ್ಣು ತೆರೆಯುವ ಮೂಲಕ ಅವರು ಎಲ್ಲರನ್ನೂ ಆಶ್ಚರ್ಯಗೊಳಿಸಿದ್ದಾರೆ.
"ವೈದ್ಯರು ಸತ್ತರು ಎಂದು ಘೋಷಿಸಿದ 30 ನಿಮಿಷಗಳ ನಂತರ ನನ್ನ ಸಹೋದರನಲ್ಲಿ ಜೀವವಿರುವ ಎಲ್ಲಾ ಲಕ್ಷಣಗಳು ಕಂಡು ಬಂದವು. ಅವರು ಬದುಕಿರುವುದು ಪವಾಡ,'' ಎಂದು ಬಘೇಲ್ ಸಹೋದರ ಲಖನ್ ಸಿಂಗ್ ಹೇಳಿದ್ದಾರೆ. ಬಾಘೆಲ್ ಅವರನ್ನು ತಕ್ಷಣವೇ ನ್ಯೂ ಆಗ್ರಾದ ಮತ್ತೊಂದು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಅವರ ಎದೆಯಲ್ಲಿ ಸೋಂಕನ್ನು ವೈದ್ಯರು ಗುರುತಿಸಿದ್ದು, ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ.
ಮತ್ತೊಂದು ಘಟನೆ
ಅನಾರೋಗ್ಯದಿಂದಾಗಿ ಮಹಿಳೆ ಮೃತಪಟ್ಟಿದ್ದಾರೆಂದು ಭಾವಿಸಿ ಅಂತ್ಯಕ್ರಿಯೆ ಮಾಡುವ ವೇಳೆ ಕಣ್ಣು ಬಿಟ್ಟು ಅಚ್ಚರಿಗೆ ಕಾರಣವಾಗಿದ್ದ ಮೈಸೂರು ಮೂಲದ ಮಹಿಳೆ ಮೃತಪಟ್ಟಿದ್ದರು.
ಬಸವೇಶ್ವರ ರಸ್ತೆಯ ನಿವಾಸಿಯಾಗಿರುವ ಪದ್ಮಬಾಯಿ (59) ಮೃತಪಟ್ಟ ಮಹಿಳೆ. ಪದ್ಮಬಾಯಿ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆಯುಂಟಾದ ಕಾರಣ ಅವರನ್ನು 2021 ಮೇ.15 ರಂದು ಲಕ್ಷ್ಮೀಪುರಂನ ನರ್ಸಿಂಗ್ ಹೋಂನಲ್ಲಿ ದಾಖಲು ಮಾಡಲಾಗಿತ್ತು. ಪದ್ಮ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರಿಗೆ ವೆಂಟಿಲೇಟರ್ ನ್ನು ನೀಡಲಾಗಿತ್ತು. ಚಿಕಿತ್ಸೆ ನೀಡುತ್ತಿದ್ದ ವೈದ್ಯರು ಪದ್ಮ ಅವರು ಬದುಕುಳಿಯುವ ಸಾಧ್ಯತೆ ಬಹಳ ಕಡಿಮೆ ಎಂದು ಹೇಳಿದ್ದರು.
ಇದರಂತೆ ಕುಟುಂಬಸ್ಥರ ಒಪ್ಪಿಗೆ ಮೇರೆಗೆ ವೆಂಟಿಲೇಟರ್ ನ್ನು ತೆಗೆಯಲಾಗಿದೆ. ನಂತರ ಆಸ್ಪತ್ರೆಯಿಂದ ಪದ್ಮ ಅವರನ್ನು ಬಿಡುಗಡೆ ಮಾಡಿದ್ದಾರೆ. ವೈದ್ಯರು ನೀಡಿದ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಿದ ಕುಟುಂಬಸ್ಥರು ಪದ್ಮ ಅವರು ಸಾವನ್ನಪ್ಪಿದ್ದಾರೆಂದು ತಿಳಿದು ಅಂತಿಮ ಸಂಸ್ಕಾರಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಇದರಂತೆ ಪದ್ಮ ಅವರು ಸಾವನ್ನಪ್ಪಿದ್ದಾರೆಂದು ಪತ್ರಿಕೆಗಳಲ್ಲಿ ಜಾಹೀರಾತನ್ನು ಪ್ರಕಟಿಸಿದ್ದರು. ಇನ್ನೇನು ಪದ್ಮ ಅವರ ಅಂತಿಮ ಸಂಸ್ಕಾರ ನಡೆಸಬೇಕೆನ್ನುವಷ್ಟರಲ್ಲಿ ಪದ್ಮ ಅವರು ಉಸಿರಾಡುತ್ತಿರುವುದು ಸಂಬಂಧಿಕರಿಗೆ ತಿಳಿದಿದೆ. ನಂತರ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದ್ದರು. ಮತ್ತೆ ಅವರಿಗೆ ವೆಂಟಿಲೇಟರ್ ನೀಡಲಾಗಿತ್ತು.
ಇದಾದ ಎರಡು ದಿನಗಳ ನಂತರವೂ ಪದ್ಮ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ಹೇಳಿದ್ದಾರೆ. ಇದರಂತೆ ಚಿಕಿತ್ಸೆ ಫಲಕಾರಿಯಾಗದೇ ಪದ್ಮ ಆವರು ಸಾವನ್ನಪ್ಪಿದ್ದರು.
-
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ












Click it and Unblock the Notifications