ಅಗಸ್ಟಾವೆಸ್ಟ್ಲ್ಯಾಂಡ್ಗೂ ಗಾಂಧಿ ಕುಟುಂಬಕ್ಕೂ ಸಂಬಂಧವಿಲ್ಲ: ಆಂಟನಿ
ನವದೆಹಲಿ, ಜುಲೈ 19: ಅಗಸ್ಟಾವೆಸ್ಟ್ಲ್ಯಾಂಡ್ ಪ್ರಕರಣದ ತನಿಖೆಗೆ ಮೊದಲು ಆದೇಶಿಸಿದ್ದೇ ಕಾಂಗ್ರೆಸ್ ಪಕ್ಷ. ಈ ಪ್ರಕರಣಕ್ಕೂ ಗಾಂಧಿ ಕುಟುಂಬಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ರಕ್ಷಣಾ ಸಚಿವ ಎ.ಕೆ. ಆಂಟನಿ ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯರಾಗಿರುವ ಆಂಟನಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯು ಸುಳ್ಳು ಮಾಹಿತಿಯನ್ನು ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಅಗಸ್ಟಾವೆಸ್ಟ್ಲ್ಯಾಂಡ್ ಪ್ರಕರಣದ ತನಿಖೆ ನಡೆಸುವ ನಿರ್ಧಾರವನ್ನು ನಾವು ತೆಗೆದುಕೊಂಡಿದ್ದೆವು. ತನಿಖೆ ನಮ್ಮ ಆದೇಶವಾಗಿತ್ತು. ಈ ಪ್ರಕರಣಕ್ಕೂ ಗಾಂಧಿ ಕುಟುಂಬಕ್ಕೂ ಸಂಬಂಧವಿಲ್ಲ. ಬಿಜೆಪಿ ಸುಳ್ಳು ಪ್ರಚಾರ ಮಾಡುತ್ತಿದೆ' ಎಂದಿದ್ದಾರೆ.

ಅಗಸ್ಟಾವೆಸ್ಟ್ಲ್ಯಾಂಡ್ ಮತ್ತು ಫಿನ್ಮೆಕ್ಕಾನಿಕಾ ಮಾಜಿ ನಿರ್ದೇಶಕರಾದ ಜಿಸೆಪ್ ಒರ್ಸಿ ಮತ್ತು ಬ್ರುನೊ ಸ್ಪಾಗ್ನೋಲಿನಿ ಹಾಗೂ ಐಎಎಫ್ ಮಾಜಿ ಮುಖ್ಯಸ್ಥ ಎಸ್ಪಿ ತ್ಯಾಗಿ ಅವರು ವಿವಿಐಪಿ ಹೆಲಿಕಾಪ್ಟರ್ ಖರೀದಿ ವೇಳೆ ಲಂಚ ವ್ಯವಹಾರ ನಡೆಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ನ್ಯಾಯಾಲಯಕ್ಕೆ ಬುಧವಾರ ಹೊಸದಾಗಿ ದೋಷಾರೋಪ ಸಲ್ಲಿಸಿದೆ.
ಪಟಿಯಾಲ ಹೌಸ್ ಕೋರ್ಟ್ನ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರಿಗೆ ಸಲ್ಲಿಸಿರುವ ದೋಷಾರೋಪವನ್ನು ಜುಲೈ 20ರಂದು ಪರಿಗಣನೆಗೆ ತೆಗೆದುಕೊಳ್ಳಲಿದೆ.

ಬಿಜೆಪಿ ವಿರುದ್ಧ ಆರೋಪ:
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಪ್ರಕರಣದಲ್ಲಿ ಸಿಲುಕಿಸುವ ಸಲುವಾಗಿ ಹಗರಣದಲ್ಲಿನ ಮಧ್ಯವರ್ತಿಗಳ ಮೇಲೆ ಒತ್ತಡ ಹೇರಲಾಗುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಎರಡು ದಿನಗಳ ಹಿಂದೆ ದುಬೈನಲ್ಲಿ ಬಂಧನಕ್ಕೆ ಒಳಗಾದ ಕ್ರಿಶ್ಚಿಯನ್ ಮೈಕಲ್ ಅವರ ವಕೀಲರು ಕೇಂದ್ರ ಸರ್ಕಾರ ಹಾಗೂ ಅದರ ಸಂಸ್ಥೆಗಳು ಸೋನಿಯಾ ಗಾಂಧಿ ಅವರ ವಿರುದ್ಧ ಆರೋಪ ಮಾಡುವ ತಪ್ಪೊಪ್ಪಿಗೆ ಹೇಳಿಕೆ ನೀಡುವಂತೆ ಒತ್ತಡ ಹೇರುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
-
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು?












Click it and Unblock the Notifications