ಕಾಂಗ್ರೆಸ್ ಖಜಾಂಚಿಯಾಗಿ ಅಹ್ಮದ್ ಪಟೇಲ್ ರನ್ನು ನೇಮಿಸಿದ ರಾಹುಲ್
ನವದೆಹಲಿ, ಆಗಸ್ಟ್ 21: ಲೋಕಸಭೆ ಚುನಾವಣೆಗೆ ಇನ್ನು ಒಂದು ವರ್ಷಕ್ಕಿಂತ ಕಡಿಮೆ ಅವಧಿ ಬಾಕಿ ಇರುವಂತೆ ಬದಲಾವಣೆ ಆರಂಭವಾಗಿದೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮಂಗಳವಾರ ಅಹ್ಮದ್ ಪಟೇಲ್ ರನ್ನು ಪಕ್ಷದ ಖಜಾಂಚಿಯಾಗಿ ನೇಮಕ ಮಾಡಿದ್ದಾರೆ. ಅಹ್ಮದ್ ಪಟೇಲ್ ಒಂದು ಕಾಲಕ್ಕೆ ಸೋನಿಯಾ ಗಾಂಧಿ ಅವರ ರಾಜಕೀಯ ಕಾರ್ಯದರ್ಶಿಯಾಗಿ ತುಂಬಾ ಪ್ರಭಾವಿಯಾದವರು.
ಸದ್ಯಕ್ಕೆ ಮೋತಿಲಾಲ್ ವೋರಾ ಖಜಾಂಚಿಯಾಗಿದ್ದರು. ಅವರನ್ನು ಪಕ್ಷದ ಆಡಳಿತ ನಿರ್ವಹಣೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಪಕ್ಷದ ವಿದೇಶಿ ಘಟಕದ ಹೊಸ ಮುಖ್ಯಸ್ಥರಾಗಿ ಆನಂದ್ ಶರ್ಮಾ ಅವರನ್ನು ನಿಯೋಜಿಸಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಿಂದ ದಿಗ್ವಿಜಯ್ ಸಿಂಗ್, ಸುಶೀಲ್ ಕುಮಾರ್ ಶಿಂಧೆ, ಜನಾರ್ದನ್ ದ್ವಿವೇದಿಯಂಥ ಕೆಲವು ಹಿರಿಯ ನಾಯಕರನ್ನು ಕೈ ಬಿಟ್ಟ ಮೇಲೆ ಹೊಸಬರ ನೇಮಕ ಮಾಡಲಾಗಿದೆ. ಇನ್ನೇನು ಬರುವ ಲೋಕಸಭೆ ಚುನಾವಣೆ ಇದ್ದು, ಆ ಹಿನ್ನೆಲೆಯಲ್ಲಿ ಅನುಭವಿಗಳು ಹಾಗೂ ಹೊಸಬರ ತಂಡವೊಂದನ್ನು ಕಟ್ಟಲು ರಾಹುಲ್ ಮುಂದಾಗಿದ್ದಾರೆ ಎಂಬ ಸೂಚನೆ ಸಿಕ್ಕಿದೆ.

ಕಳೆದ ಜುಲೈನಲ್ಲಿ ರಾಹುಲ್ ಗಾಂಧಿ ಕಾಂಗ್ರೆಸ್ ನ ಕಾರ್ಯಕಾರಿ ಸಮಿತಿಗೆ ಸದಸ್ಯರನ್ನು ನೇಮಿಸಿದ್ದರು. ಅದರಲ್ಲಿ ಎ.ಕೆ.ಆಂಟನಿ, ಅಹ್ಮದ್ ಪಟೇಲ್, ಅಂಬಿಕಾ ಸೋನಿ, ಮೋತಿಲಾಲ್ ವೋರಾ, ಗುಲಾಬ್ ನಬಿ ಆಜಾದ್, ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಆನಂದ್ ಶರ್ಮ ಮತ್ತಿತರರು ಸಮಿತಿಯಲ್ಲಿ ಇದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಒಟ್ಟು ಇಪ್ಪತ್ಮೂರು ಸದಸ್ಯರಿದ್ದು, ಹತ್ತೊಂಬತ್ತು ಶಾಶ್ವತ ಆಹ್ವಾನಿತರು ಹಾಗೂ ಒಂಬತ್ತು ವಿಶೇಷ ಆಹ್ವಾನಿತರಿದ್ದಾರೆ.
-
ರಾಜ್ಯದ 5000ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಲುಷಿತ ನೀರು: ಗ್ಯಾರಂಟಿ ಗುಂಗಿನಲ್ಲಿರುವ ಕಾಂಗ್ರೆಸ್ ವಿರುದ್ಧ ಆರ್. ಅಶೋಕ್ ಕಿಡಿ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು












Click it and Unblock the Notifications