Vijay Rupani: ಅಹಮದಬಾದ್ ವಿಮಾನ ದುರಂತ; ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ
Ahmedabad Plane Crash: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ AI-171 ಏರ್ ಇಂಡಿಯಾ ವಿಮಾನ ಗುಜರಾತ್ನ ಅಹಮದಾಬಾದ್ನಲ್ಲಿ ಗುರುವಾರ (ಜೂನ್ 12) ಪತನವಾಗಿತ್ತು. ಈ ವೇಳೆ 242ಕ್ಕೂ ಅಧಿಕ ಜನ ಸಾವನ್ನಪ್ಪಿದ್ದು, ಈ ದುರಂತ ಇಡೀ ದೇಶವನ್ನು ಬೆಚ್ಚಿ ಬೀಳುವಂತೆ ಮಾಡಿತ್ತು. ಇನ್ನೂ ಸಾವನ್ನಪ್ಪಿದವರ ಪೈಕಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರ ಡಿಎನ್ಎ ಹೋಲಿಕೆಯಾಗಿದೆ ಎಂದು ರಾಜ್ಯದ ಗೃಹ ಸಚಿವ ಹರ್ಷ ಸಾಂಘವಿ ಭಾನುವಾರ ಜೂನ್ 15) ದೃಢಪಡಿಸಿದರು.
ಜೂನ್ 12ರಂದು ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಗುಜರಾತ್ನ ಮಾಜಿ ಸಿಎಂ ವಿಜಯ್ ರೂಪಾನಿ ಅವರು ಸಹ ಸಾವನ್ನಪ್ಪಿದ್ದರು. ಇದೀಗ ಇಂದು (ಜೂನ್ 15) ಬೆಳಗ್ಗೆ 11:10ರ ಸುಮಾರಿಗೆ ಅವರ ಡಿಎನ್ಎ ಹೊಂದಾಣಿಕೆ ಆಗಿದೆ. ಅಲ್ಲದೆ, ಅವರು ಹಲವು ವರ್ಷಗಳ ಕಾಲ ರಾಜ್ಯದ ಜನರಿಗಾಗಿ ಕೆಲಸ ಮಾಡಿದರು ಎಂದು ಗುಜರಾತ್ ಗೃಹ ಸಚಿವ ಹರ್ಷ್ ಸಾಂಘ್ವಿ ಹೇಳಿದ್ದಾರೆ.

ಅವರ ಪಾರ್ಥಿವ ಶರೀರದ ಸಾಗಣೆ ಮಾಡಲು ಮಾಜಿ ಸಿಎಂ ವಿಜಯ್ ರೂಪಾನಿ ಕುಟುಂಬಸ್ಥರು ಆಸ್ಪತ್ರೆಯ ಬಳಿ ನೆರೆದಿದ್ದು, ಇಂದೇ ಅಂತ್ಯಕ್ರಿಯೆ ನೆರವೇರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಒಟ್ಟಾರೆಯಾಗಿ ಈ ದುತರಂತದಲ್ಲಿ ಸಾವನ್ನಪ್ಪಿದ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹವನ್ನು ಕೆಲವು ದಿನಗಳ ನಂತರ ಗುರುತಿಸಲಾಗಿದೆ. ದುರಂತದ ಸಮಯದಲ್ಲಿ ಪ್ರಯಾಣಿಕರೆಲ್ಲ ಮೃತಪಟ್ಟಿದ್ದು, ಅವರ ಮೃತದೇಹಗಳು ಗುರುತಿಸದಂತೆ ಆಗಿದ್ದವು. ಆದ್ದರಿಂದ ಡಿಎನ್ಎ ಅನ್ನು ನಡೆಸಲಾಗುತ್ತಿದ್ದು, ಇದರಿಂದ ಗುರುತು ಪತ್ತೆ ಮಾಡುವ ಕೆಲಸ ನಡೆಯುತ್ತಿದೆ.
ವಿಜಯ್ ರೂಪಾನಿ ಯಾರು?: ವಿಜಯ್ ರೂಪಾನಿ ಒಬ್ಬ ಭಾರತೀಯ ರಾಜಕಾರಣಿ ಆಗಿದ್ದು, ಅವರು ಆಗಸ್ಟ್ 2016ರಿಂದ ಸೆಪ್ಟೆಂಬರ್ 2021ರ ವರೆಗೆ ಗುಜರಾತ್ನ 16ನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. ಅವರು 1996-1997ರ ವರೆಗೆ ರಾಜ್ಕೋಟ್ನ ಮೇಯರ್, ರಾಜ್ಯಸಭೆಯಲ್ಲಿ ಸಂಸತ್ ಸದಸ್ಯ (2006-2012) ಹಾಗೂ ಹಲವು ಖಾತೆಗಳ ಸಚಿವರಾಗಿಯೂ ಕಾರ್ಯ ನಿರ್ವಹಿಸಿದವರಾಗಿದ್ದಾರೆ. ಗುಜರಾತ್ ವಿಧಾನಸಭೆಯಲ್ಲಿ ರಾಜ್ಕೋಟ್ ಪಶ್ಚಿಮ ಕ್ಷೇತ್ರವನ್ನು ಪ್ರತಿನಿಧಿಸಿದ್ದರು ಮತ್ತು ಮುಖ್ಯಮಂತ್ರಿ ಆಗುವ ಮೊದಲು ಗುಜರಾತ್ ಬಿಜೆಪಿಯ ಅಧ್ಯಕ್ಷರೂ ಆಗಿದ್ದರು.
ವಿಮಾನವು ಮೇಘನಿ ನಗರ ಬಳಿ ಪತನ ಆಗಿದ್ದು, ಆ ಪ್ರದೇಶದಲ್ಲಿ ಭೀತಿಯನ್ನುಂಟು ಮಾಡಿದೆ. ಇನ್ನು ವಿಮಾನ ಪತನವಾದ ಪ್ರದೇಶದ ಸುತ್ತಮುತ್ತ ದಟ್ಟವಾದ ಕಪ್ಪು ಹೊಗೆ ಆವರಿಸಿರುವ ದೃಶ್ಯಗಳು ಎಲ್ಲೆಡೆ ವೈರಲ್ ಆಗಿದ್ದವು. ಇದು ವಿಮಾನ ನಿಲ್ದಾಣದ ಆವರಣದ ಸಮೀಪದಲ್ಲಿ ಸಂಭವಿಸಿದ್ದು, ಅಲ್ಲಿನ ಸ್ಥಳೀಯರ ಮಾಹಿತಿ ಮೇರೆ ಘಟನಾ ಸ್ಥಳಕ್ಕೆ ಆಗಮನಿಸಿ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕೆಲಸವನ್ನು ಮಾಡಿತ್ತು.
-
LPG Price: ಎಲ್ಪಿಜಿ ಗ್ಯಾಸ್ ಸಿಲಿಂಡರ್ ದರದಲ್ಲಿ ಭಾರೀ ಏರಿಕೆ: ಇಲ್ಲಿದೆ ಮಾರ್ಚ್ 1ರ ದರಪಟ್ಟಿ -
Gold Rate Today: ಆಭರಣ ಪ್ರಿಯರ ಗಮನಕ್ಕೆ: ಬೆಂಗಳೂರಿನಲ್ಲಿ ಇಂದು ಚಿನ್ನ-ಬೆಳ್ಳಿ ದರ ಹೇಗಿದೆ? ಇಲ್ಲಿದೆ ಮಾಹಿತಿ -
National Highway: ರಾಜ್ಯದಲ್ಲಿ ಹೊಸ ರಾಷ್ಟ್ರೀಯ ಹೆದ್ದಾರಿಯ ಮಹತ್ವದ ಅಪ್ಡೇಟ್ -
ಬೇರೆ ದೇಶಗಳಂತೆ ಭಾರತೀಯರಿಗೆ ಭಯದಿಂದ ನಿದ್ರಿಸುವ ಪರಿಸ್ಥಿತಿ ಅಲ್ಲ: ನಿವೃತ್ತ ಸೇನಾಧಿಕಾರಿ ಸುನೀಲ್ ಕುಮಾರ್ ಶಾಸ್ತ್ರಿ -
ಇರಾನ್ ಸುಪ್ರೀಂ ಯತೊಲ್ಲಾ ಅಲಿ ಖಮೇನಿ ಅಂತ್ಯ: ವಿಶ್ವದ ಮೇಲೆ 5 ಪರಿಣಾಮ ಸಾಧ್ಯತೆ: ಆಶಿಶ್ ಸಾರಡ್ಕ ಬರಹ -
Thalapathy Vijay: 400 ಕೋಟಿ ಆಸ್ತಿಗೆ ಒಡತಿ, ಲಂಡನ್ ಬೆಡಗಿ: ಯಾವ ಸಿನಿಮಾಗೂ ಕಡಿಮೆ ಇಲ್ಲ ದಳಪತಿ ವಿಜಯ್-ಸಂಗೀತಾ ಲವ್ ಸ್ಟೋರಿ -
Karnataka Weather: ಕರ್ನಾಟಕದ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಬಿಸಿಲೂ ಹೆಚ್ಚು -
ಮಾರ್ಚ್ 3, 2026 – ಪೂರ್ವ ಫಲ್ಗುಣಿ ನಕ್ಷತ್ರದಲ್ಲಿ ಕೇತುಗ್ರಸ್ತ ಮಹಾ ಚಂದ್ರಗ್ರಹಣ: ದ್ವಾದಶ ರಾಶಿಗಳ ಫಲಿತಾಂಶ -
ಕರ್ನಾಟಕದ 4 ರೈಲು ನಿಲ್ದಾಣ ಸೇರಿ 76 ಕಡೆ ಪ್ರಯಾಣಿಕರ ನಿಲುಗಡೆ ತಾಣ ನಿರ್ಮಾಣ, ಏನಿದರ ಪ್ರಯೋಜನ? -
ಅಮೆರಿಕಕ್ಕೆ ಸೆಡ್ಡು ಹೊಡೆದು 16,800 ಕೋಟಿ ರೂ ಒಪ್ಪಂದ ಕಡಿದುಕೊಂಡ ಆಂತ್ರೋಪಿಕ್: ಬೆಂಗಳೂರು ಟೆಕ್ಕಿ ಮೆಚ್ಚುಗೆ -
ಬೆಂಗಳೂರಿನ ಎಂ.ಎಸ್.ರಾಮಯ್ಯ ಕಾಲೇಜಿನಲ್ಲಿ ಹೇಗಿದ್ರು ನೋಡಿ ರಶ್ಮಿಕಾ ಮಂದಣ್ಣ, ವಿಡಿಯೋ ವೈರಲ್ -
ಹರ್ಮೂಜ್ ಜಲಸಂಧಿ ಬಂದ್: ಭಾರತಕ್ಕೆ ತಟ್ಟಲಿದೆ ತೈಲ ದರದ ಬಿಸಿ, ಆರ್ಥಿಕತೆಗೂ ಭಾರಿ ಹೊಡೆತ












Click it and Unblock the Notifications