Plane Crash: ಅಹಮದಾಬಾದ್ ವಿಮಾನ ದುರಂತ: ಏಕಕಾಲಕ್ಕೆ ಎರಡು ದುರಂತ! ಈ ಕಾರಣಕ್ಕೆ ಸಾವಿನ ಸಂಖ್ಯೆ ಹೆಚ್ಚಳ!
ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಭಾರೀ ಭೀಕರ ವಿಮಾನ ಪತನ ಗುಜರಾತ್ನಲ್ಲಿ ಸಂಭವಿಸಿದೆ. ವಿಮಾನ ಅತ್ಯಂತ ಭೀಕರವಾಗಿ ಅಪಘಾತಕ್ಕೆ ಒಳಗಾಗಿದ್ದು ಈ ವಿಮಾನದಲ್ಲಿ 242 ಜನ ಪ್ರಯಾಣಿಸುತ್ತಿದ್ದರು. ವಿಮಾನ ಪತನವು ಜನನಿಬಿಡ ಪ್ರದೇಶದಲ್ಲಿ ಆಗಿರುವುದರಿಂದ ಸಾವು - ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇನ್ನು ಮತ್ತೊಂದು ಕಾರಣಕ್ಕೆ ಇಲ್ಲಿ ರಕ್ಷಣಾ ಕಾರ್ಯಾಚರಣೆ ಕಷ್ಟವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕಟ್ಟಡದ ಮೇಲೆ ವಿಮಾನ ಪತನವಾಗಿರುವುದರಿಂದ ವಿಮಾನದಲ್ಲಿ ಇದ್ದವರು ಮಾತ್ರವಲ್ಲ. ಕಟ್ಟಡಗಳಲ್ಲಿ ಇದ್ದವರೂ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ. ಈ ಬಗ್ಗೆ ಇನ್ನಷ್ಟೇ ನಿಖರ ಮಾಹಿತಿ ಲಭ್ಯವಾಗಬೇಕಿದೆ. ಆದರೆ, ವಿಮಾನ ಪತನದಲ್ಲಿ ಮೃತಪಟ್ಟವರ ರಕ್ಷಣೆ ಸವಾಲಾಗಿ ಬದಲಾಗಿದೆ. ಸದ್ಯ ಅಲ್ಲೇನು ನಡೆಯುತ್ತಿದೆ ಎನ್ನುವ ಮಾಹಿತಿ ಇಲ್ಲಿದೆ.
ಗುಜರಾತ್ನಲ್ಲಿ ಭಾರೀ ವಿಮಾನ ದುರಂತ ಸಂಭವಿಸಿದ್ದು. ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಬಹುದೊಡ್ಡ ದುರಂತ ಇದಾಗಿದೆ. ಈ ವಿಮಾನ ದುರಂತವು ಜನ ನಿಬಿಡ ಪ್ರದೇಶದಲ್ಲಿ ನಡೆದಿರುವುದರಿಂದ ಕಾರ್ಯಾಚರಣೆಗೆ ಸಮಸ್ಯೆ ಎದುರಾಗಿದೆ. ಅಹಮದಾಬಾದ್ನಲ್ಲಿ ಜೂನ್12ರಂದು ಮಧ್ಯಾಹ್ನ ಅಹಮದಾಬಾದ್ನಿಂದ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದೆ. ಅಹಮದಾಬಾದ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕಾಫ್ ಮಾಡಿದ ಕೆಲವೇ ಕ್ಷಣಗಳಲ್ಲಿ ಈ ದುರಂತ ಸಂಭವಿಸಿದೆ. ಆದರೆ, ಇದು ನಿರ್ಜನ ಪ್ರದೇಶದಲ್ಲಿ ಪತನವಾಗಿಲ್ಲ. ಜನನಿಬಿಡ ಪ್ರದೇಶವಾದ ಗುಜರಾತ್ ಜಿಲ್ಲೆಯ ಅಹಮದಾಬಾದ್ನ ಮೇಘಾನಿ ನಗರದ ಸಂಭವಿಸಿದೆ. ಮೇಘಾನಿ ನಗರ್ನ ಕಟ್ಟಡದ ಮೇಲೆ ಈ ಪತನ ಸಂಭವಿಸಿದೆ. ಇನ್ನು ಈ ವಿಮಾನ ಭೀಕರವಾಗಿ ಅಪಘಾತಕ್ಕೆ ಒಳಗಾಗಿದ್ದು. ಯಾರು ಸಹ ಬದುಕುಳಿದಿರುವ ಸಾಧ್ಯತೆ ಇಲ್ಲ ಅಂತಲೇ ಹೇಳಲಾಗುತ್ತಿದೆ.

ಕಾರ್ಯಾಚರಣೆ ಸಂಕಷ್ಟ: ಇನ್ನು ಜನನಿಬಿಡ ಪ್ರದೇಶದಲ್ಲಿ ದುರಂತ ಸಂಭವಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆಯನ್ನು ಮುಂದುವರಿಸುವುದಕ್ಕೆ ಸಮಯ ಹಿಡಿಸುತ್ತಿದೆ. ವಿಮಾನ ದುರಂತ ಮಾತ್ರವಲ್ಲದೇ ಈ ನಗರದ ಜನರೂ ಸಹ ಈ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಗರವು ಕಿರಿದಾದ ಪ್ರದೇಶದಲ್ಲಿದ್ದು ಜನರನ್ನು ರಕ್ಷಿಸಲು ಸ್ಥಳೀಯ ಆಡಳಿತವು ಹರಸಾಹಸ ಮುಂದುವರಿದಿಸಿದೆ.
ನಿಖಿಲ್ ಕುಮಾರಸ್ವಾಮಿ ಸಂತಾಪ: ಇನ್ನು ಈ ವಿಮಾನ ದುರಂತದ ಬಗ್ಗೆ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ ಅವರು, ಗುಜರಾತ ರಾಜ್ಯದ ಅಹಮದಾಬಾದ್ ನಿಂದ ಲಂಡನ್ ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ತಾಂತ್ರಿಕ ದೋಷದಿಂದ ಪತನವಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ.
ವಿಮಾನದಲ್ಲಿ 242 ಪ್ರಯಾಣಿಕರು ಇದ್ದ ಬಗ್ಗೆ ಪ್ರಾಥಮಿಕವಾಗಿ ತಿಳಿದು ಬಂದಿದ್ದು, ಈ ದುರಂತದಲ್ಲಿ ಸಾವೀಗಿಡಾದವರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಗಾಯಗೊಂಡವರು ಶೀಘ್ರವಾಗಿ ಗುಣಮುಖರಾಗಲಿ ಎಂದು ತಾಯಿ ಚಾಮುಂಡೇಶ್ವರಿಯಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications