ಕಾಮಿಡಿಯನ್ ಕಪಿಲ್ ಶರ್ಮ ಮೇಲೆ ಏರ್ ಇಂಡಿಯಾ ಕೆಂಗಣ್ಣು
ಶಿವಸೇನಾ ಶಾಸಕ ಗಾಯಕ್ವಾಡ್ ಅವರ ವಿಮಾನಯಾನ ವಿವಾದ ಸುದ್ದಿಯಲ್ಲಿರುವ ಹೊತ್ತಿನಲ್ಲೇ ಕಾಮಿಡಿಯನ್ ಕಪಿಲ್ ಶರ್ಮ ಅವರು ವಿಮಾನದಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ.
ಮುಂಬೈ, ಮಾರ್ಚ್ 27: ಶಿವಸೇನಾ ಶಾಸಕ ರವೀಂದ್ರ ಗಾಯಕ್ವಾಡ್ ಅವರ ವಿಮಾನಯಾನ ವಿವಾದ ಸುದ್ದಿಯಲ್ಲಿರುವ ಹೊತ್ತಿನಲ್ಲೇ ಕಾಮಿಡಿಯನ್ ಕಪಿಲ್ ಶರ್ಮ ಅವರು ವಿಮಾನದಲ್ಲಿ ಕಿರಿಕ್ ಮಾಡಿಕೊಂಡಿದ್ದಾರೆ. ಕಪಿಲ್ ಶರ್ಮ ವಿರುದ್ಧ ದೂರು ನೀಡಲು ಏರ್ ಇಂಡಿಯಾ ಸಿದ್ಧವಾಗುತ್ತಿದೆ. ಇಷ್ಟಕ್ಕೂ ಕಪಿಲ್ ಶರ್ಮ ಮಾಡಿದ್ದೇನು? ಮುಂದೆ ಓದಿ...
ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ಅವರಿಗೆ ಭಾರತದ ವಿಮಾನಗಳನ್ನೇರದಂತೆ ದಿಗ್ಭಂಧನ ವಿಧಿಸಿದ ಬಳಿಕ ಈಗ ಕಾಮಿಡಿಯನ್, ನಟ ಕಪಿಲ್ ಶರ್ಮ ಅವರ ಮೇಲೆ ಏರ್ ಇಂಡಿಯಾ ಕಣ್ಣು ಬಿದ್ದಿದೆ. ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಮಾನದಲ್ಲಿ ಕಪಿಲ್ ಶರ್ಮ ಅವರು ನಡೆದುಕೊಂಡ ರೀತಿ ಆಕ್ಷೇಪಾರ್ಹವಾಗಿತ್ತು ಎಂದು ಏರ್ ಇಂಡಿಯಾ ಅಭಿಪ್ರಾಯಪಟ್ಟಿದೆ.

ಮಾರ್ಚ್ 16ರಂದು ಈ ಘಟನೆ ನಡೆದಿದ್ದು, ದೆಹಲಿ ಹಾಗೂ ಮೇಲ್ಬೋರ್ನ್ ನಡುವಿನ ವಿಮಾನದಲ್ಲಿ ಕಪಿಲ್ ಶರ್ಮ ಅವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ ಎಂಬ ವರದಿ ಬಂದಿದೆ. ಈ ಬಗ್ಗೆ ಪರಿಶೀಲಿಸಿ ಪೂರ್ತಿ ವರದಿ ತರೆಸಿಕೊಳ್ಳಲಾಗುವುದು ನಂತರ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಏರ್ ಇಂಡಿಯಾ ಮುಖ್ಯಸ್ಥ ಅಶ್ವನಿ ಲೋಹಾನಿ ಹೇಳಿದ್ದಾರೆ.
ಮೊದಲಿಗೆ ಈ ಬಗ್ಗೆ ವಿವರಣೆ ನೀಡುವಂತೆ ಕಪಿಲ್ ಶರ್ಮ ಅವರಿಗೂ ನೋಟಿಸ್ ಜಾರಿ ಮಾಡಲಾಗುವುದು ಎಂದು ಹೇಳಿದರು.
ಮಾರ್ಚ್ 16ರಂದು ವಿಮಾನಯಾನದ ಸಂದರ್ಭದಲ್ಲಿ ಹೆಚ್ಚು ಮದ್ಯ ಸೇವಿಸಿ, ಸಿಬ್ಬಂದಿ ಜತೆ ಅನುಚಿತವಾಗಿ ವರ್ತಿಸಿದರು ಹಾಗು ಅವಾಚ್ಯ ಶಬ್ದ ಪ್ರಯೋಗಿಸಿದರು ಎಂಬ ಆರೋಪ ಕೇಳಿ ಬಂದಿದೆ. ಸಿಬ್ಬಂದಿಗಳ ಮಾತು ಕೇಳದ ಕಪಿಲ್ ಅವರನ್ನು ತಹಬಂದಿಗೆ ತರಲು ಒಬ್ಬ ಪೈಲಟ್ ಬರಬೇಕಾಯಿತು ಎಂಬ ಮಾಹಿತಿ ಸಿಕ್ಕಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications