Get Updates
Get notified of breaking news, exclusive insights, and must-see stories!

ಎಐಎಡಿಎಂಕೆ & ಬಿಜೆಪಿ ಮೈತ್ರಿ ಪೀಸ್.. ಪೀಸ್..!

ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸುವ ಸಂದರ್ಭದಲ್ಲೇ ಎಐಎಡಿಎಂಕೆ ಇದೀಗ ಶಾಕ್ ಕೊಟ್ಟಿದೆ. ಎನ್‌ಡಿಎ ಮೈತ್ರಿಕೂಟವನ್ನು ಬಿಟ್ಟು ಹೋಗುವ ಜೊತೆಗೆ ಬಿಜೆಪಿ ಜೊತೆ ಇದ್ದ ಮೈತ್ರಿಯನ್ನ ಕಡಿದುಕೊಂಡಿದ್ದಾರೆ ಎಐಎಡಿಎಂಕೆ ನಾಯಕರು. ಈಗ ಅಧಿಕೃತವಾಗಿ ಎಐಎಡಿಎಂಕೆ ನಾಯಕರು ಈ ತೀರ್ಮಾನ ಪ್ರಕಟಿಸಿದ್ದು, ಆ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಂಡಿರುವ ಅಣ್ಣಾಮಲೈ ಮತ್ತು ಎಐಎಡಿಎಂಕೆ ನಾಯಕರ ನಡುವೆ ನೇರ ಯುದ್ಧ ಆರಂಭವಾಗಿತ್ತು. ಹೀಗೆ ಎಐಎಡಿಎಂಕೆ ನಾಯಕರು ಬಿಜೆಪಿ ಜೊತೆಗಿನ ಸಂಬಂಧ ಕಡಿದುಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿತ್ತು. ಈ ಬಗ್ಗೆ ಇದೀಗ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ (ಎಐಎಡಿಎಂಕೆ) ಪಕ್ಷವು ಬಿಜೆಪಿ ಪಕ್ಷದ ಜೊತೆಗಿನ ಇಷ್ಟು ವರ್ಷಗಳ ಸುದೀರ್ಘ ಸ್ನೇಹಕ್ಕೆ ಗುಡ್‌ಬೈ ಹೇಳಿದೆ.

aiadmk-bjp-alliance-dissolves

ತೀರ್ಮಾನದ ಹಿಂದಿನ ಕಾರಣ ಏನು?

ಎಐಎಡಿಎಂಕೆ ನಾಯಕರು ತಮ್ಮ ಪಕ್ಷದ ಸಂಸದರು, ಶಾಸಕರು ಹಾಗೂ ನಾಯಕರ ಜೊತೆಗೆ ಜಿಲ್ಲಾ ಮಟ್ಟದ ಸಭೆ ನಡೆಸಿ ಇಂತಹ ಮಹತ್ವದ ತೀರ್ಮಾನ ಘೋಷಿಸಿದ್ದಾರೆ. ಈ ಬೆಳವಣಿಗೆ ದಕ್ಷಿಣದಲ್ಲಿ ಹೆಚ್ಚಿನ ಲೋಕಸಭಾ ಸ್ಥಾನ ಗೆಲ್ಲುವ ಗುರಿ ಹೊಂದಿರುವ ಬಿಜೆಪಿ ನೇತೃತ್ವದ ಎನ್‌ಡಿಎಗೆ ಭಾರಿ ಹಿನ್ನಡೆ ತಂದಿದೆ. ಎಐಎಡಿಎಂಕೆ ನಾಯಕ ಕೆ.ಪಿ. ಮುನುಸ್ವಾಮಿ ಅವರು ಬಿಜೆಪಿ ಜೊತೆಗಿನ ಮೈತ್ರಿ ಮುರಿದುಕೊಂಡ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಪ್ರಮುಖವಾಗಿ ಅಣ್ಣಾಮಲೈ ನಡವಳಿಕೆಯ ಬಗ್ಗೆಯೇ ಎಐಎಡಿಎಂಕೆ ನಾಯಕರು ಪ್ರಸ್ತಾಪ ಮಾಡಿದ್ದಾರೆ. ಈ ಮೂಲಕ ಬಿಜೆಪಿ ಮತ್ತು ಎಐಎಡಿಎಂಕೆ ನಾಯಕರು ನಾನೊಂದು ತೀರ, ನೀನೊಂದು ತೀರ ಅಂತಿದ್ದಾರೆ.

ಪಕ್ಷದ ಕಚೇರಿ ಎದುರು ಪಟಾಕಿ, ಸಂಭ್ರಮ!

ಚೆನ್ನೈನ ಎಐಎಡಿಎಂಕೆ ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಸಂಸದರು, ಶಾಸಕರು ಹಾಗೂ ಜಿಲ್ಲಾ ಪ್ರಮುಖರ ಸಭೆ ನಡೆಯಿತು. ಸಭೆಯಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು, ಎನ್‌ಡಿಎ ಮೈತ್ರಿಕೂಟದಿಂದ ಹೊರ ಬರುವ ಬಗ್ಗೆ ಸರ್ವಾನುಮತದ ನಿರ್ಣಯ ಅಂಗೀಕಾರ ಆಯ್ತು ಎಂದು ಎಐಎಡಿಎಂಕೆ ಉಪ ಪ್ರಧಾನ ಕಾರ್ಯದರ್ಶಿ ಕೆ. ಪಿ. ಮುನುಸ್ವಾಮಿ ಅವರು ತಿಳಿಸಿದ್ದಾರೆ. ಹಾಗೇ ಬಿಜೆಪಿ ಜೊತೆ ಮೈತ್ರಿ ಕಡಿದುಕೊಂಡ ನಂತರ ಪಕ್ಷದ ಕಚೇರಿ ಹೊರಗೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕಿರಿಕ್ ಶುರುವಾಗಿದ್ದು ಎಲ್ಲಿಂದ?

ಎಐಎಡಿಎಂಕೆ, ಬಿಜೆಪಿ ನಾಯಕರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ವಿರುದ್ಧ ಗುಡುಗಲು ಸಿದ್ಧವಾಗಿದ್ದರು. ಆದ್ರೆ ತಮಿಳುನಾಡು ರಾಜಕೀಯದಲ್ಲಿ ಅಣ್ಣಾಮಲೈ ಆಗಮನದ ಬಳಿಕ ಕಿರಿಕ್ ಶುರುವಾಗಿತ್ತು. ಅದರಲ್ಲೂ ಎಐಎಡಿಎಂಕೆ ಸಂಸ್ಥಾಪಕ ಹಾಗೂ ಚಿತ್ರ ನಟ ಎಂ.ಜಿ.ರಾಮಚಂದ್ರನ್ ಅವರಿಗೆ ಸಿ.ಎನ್.ಅಣ್ಣಾದುರೈ ಅವರು ಮಾರ್ಗದರ್ಶಕರು. ಹೀಗಾಗಿ ಅಣ್ಣಾದುರೈ ಅವರ ಬಗ್ಗೆ ಎಐಎಡಿಎಂಕೆ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಗೌರವ ಹೊಂದಿದ್ದಾರೆ. ಇಷ್ಟೆಲ್ಲಾ ಗೊತ್ತಿದ್ದರೂ ತಮಿಳುನಾಡಿನ ಬಿಜೆಪಿ ರಾಜ್ಯಾಧ್ಯಕ್ಷರಾದ ಕೆ. ಅಣ್ಣಾಮಲೈ ನೀಡುತ್ತಿದ್ದ ಹೇಳಿಕೆಗಳು ಕಿಡಿ ಹೊತ್ತಿಸಿದ್ದವು.

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಅವರು, ಅಣ್ಣಾದುರೈ ಬಗ್ಗೆ ವಿವಾದ ಸೃಷ್ಟಿಸುವ ರೀತಿ ಮಾತನಾಡಿದ್ದರು. ಇದು ಎರಡೂ ಪಕ್ಷಗಳ ನಡುವೆ ಕಿಡಿ ಹೊತ್ತಿಸಿತ್ತು. ಈ ಕಿಡಿ ತಣ್ಣಗಾಗಿಸುವ ಬದಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿತ್ತು. ಹೀಗೆ ಸಣ್ಣ ಕಿಡಿಯೇ ಜ್ವಾಲೆಯಾಗಿ ಇದೀಗ ಎಐಎಡಿಎಂಕೆ ಹಾಗೂ ಬಿಜೆಪಿ ಸಂಬಂಧವೇ ಕಡಿದು ಹೋಗುವಂತೆ ಮಾಡಿದೆ. ಈ ಮೂಲಕ ಲೋಕಸಭೆ ಚುನಾವಣೆಗೆ ಮೊದಲು ಬಿಜೆಪಿಗೆ ಶಾಕ್ ಸಿಕ್ಕಿದೆ. ಈ ಬೆಳವಣಿಗೆ ತಮಿಳುನಾಡಿನಲ್ಲಿ ಡಿಎಂಕೆಗೆ ಸಹಾಯವಾಗುವ ಸಾಧ್ಯತೆ ಇದೆ. ಹಾಗೂ ಬಿಜೆಪಿ ನಾಯಕರಿಗೆ ಇಕ್ಕಟ್ಟಿನ ಪರಿಸ್ಥಿತಿ ಉಂಟಾಗಿದೆ. ಎಐಎಡಿಎಂಕೆ ನಾಯಕರನ್ನು ಸಮಾಧಾನ ಮಾಡುವ ತಂತ್ರಗಳೆಲ್ಲಾ ಕೈಕೊಟ್ಟು ಹೋಗಿವೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+