ಅಣ್ಣಾಮಲೈ ತುಂಬಾ ಕಿರಿಕ್ ಮಾಡ್ತಿದ್ದಾರೆ, ಅವರನ್ನು ಉಚ್ಚಾಟಿಸಿ: ಮನನೊಂದ ಎಐಎಡಿಎಂಕೆ ನಾಯಕರಿಂದ ಬಿಜೆಪಿ ಹೈಕಮಾಂಡ್ಗೆ ಕಂಪ್ಲೇಂಟ್
ನವದೆಹಲಿ, ಸೆಪ್ಟೆಂಬರ್ 23: ಬಿಜೆಪಿ ಜೊತೆಗಿನ ಎಐಎಡಿಎಂಕೆ ಮೈತ್ರಿಯಲ್ಲಿ ವಿರಸ ಕಾಣಿಸಿಕೊಂಡಿದೆ. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಕಿರಿಕ್ನಿಂದ ಎಐಎಡಿಎಂಕೆ ನಾಯಕರು ಮನನೊಂದಿದ್ದಾರೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಬೀಡುಬಿಟ್ಟಿರುವ ಎಐಎಡಿಎಂಕೆ ಮುಖಂಡರು ಬಿಜೆಪಿ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಅಳಲು ತೋಡಿಕೊಳ್ಳುತ್ತಿರುವುದು ಗೊತ್ತಾಗಿದೆ.
ಬಿಜೆಪಿಯೊಂದಿಗೆ ತಮ್ಮ ಪಕ್ಷ ಮೈತ್ರಿ ಹೊಂದಿಲ್ಲವೆಂದು ಕಳೆದ ವಾರ ಎಐಡಿಎಂಕೆ ನಾಯಕರು ಹೇಳಿಕೆ ನೀಡಿದ್ದರು. ಇದಾದ ಕೆಲ ದಿನಗಳ ಬಳಿಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ತಮ್ಮ ನೋವನ್ನು ಹೇಳಿಕೊಂಡಿದ್ದಾರೆ.

ಹಿರಿಯ ನಾಯಕ ಎಸ್ಪಿ ವೇಲುಮಣಿ ನೇತೃತ್ವದ ಎಐಎಡಿಎಂಕೆಯ ಉನ್ನತ ನಾಯಕರ ನಿಯೋಗವು ನಡ್ಡಾ ಮತ್ತು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪಿಯೂಷ್ ಗೋಯಲ್ ಅವರನ್ನು ಸೆಪ್ಟೆಂಬರ್ 22ರ ಸಂಜೆ ದೆಹಲಿಯಲ್ಲಿ ಭೇಟಿ ಮಾಡಿದೆ. ಈ ವೇಳೆ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ವಿರುದ್ಧ ಹಲವು ದೂರಗಳನ್ನು ನೀಡಿದೆ.
ಪಿ ತಂಗಮಣಿ, ಸಿವಿ ಷಣ್ಮುಗಂ, ಆರ್ ವಿಶ್ವನಾಥನ್ ಅವರನ್ನೊಳಗೊಂಡ ನಿಯೋಗವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲು ಸಮಯ ಕೋರಿದೆ ಎಂದು ತಿಳಿದುಬಂದಿದೆ.

ಈ ನಿಯೋಗವು ಚೆನ್ನೈನಿಂದ ನೇರವಾಗಿ ದೆಹಲಿಗೆ ತೆರಳಿಲ್ಲ. ಮೊದಲು ಕೊಚ್ಚಿನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗಿ, ಅಲ್ಲಿಂದ ದೆಹಲಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದು ಮತ್ತಷ್ಟು ಕುತೂಹಲವನ್ನು ಕೆರಳಿಸಿದೆ.
ಅಣ್ಣಾಮಲೈ ವಿರುದ್ಧ ದೂರು
ಅಣ್ಣಾಮಲೈ ಅವರು ತಮ್ಮ ಪಕ್ಷದ ಹಿರಿಯ ಹಾಗೂ ದಿವಂಗತ ನಾಯಕರ ವಿರುದ್ಧ ಇಲ್ಲಸಲ್ಲದ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇದು ನಮಗೆ ಸರಿಬರುತ್ತಿಲ್ಲವೆಂದು ನಡ್ಡಾ ಮುಂದೆ ಎಐಎಡಿಎಂಕೆ ನಾಯಕರು ಹೇಳಿಕೊಂಡಿದ್ದಾರೆ.
ಇದೇ ವೇಳೆ, ಪಕ್ಷದ ಪ್ರಧಾನ ಕಾರ್ಯದರ್ಶಿ ಕೆ ಪಳನಿಸ್ವಾಮಿ ( ಇಪಿಎಸ್ ) ಅವರ ಪತ್ರವನ್ನು ನಡ್ಡಾ ಅವರಿಗೆ ತಲುಪಿಸಿದ್ದಾರೆ. ಈ ಪತ್ರದಲ್ಲಿ ಅಣ್ಣಾಮಲೈ ಅವರ ನಡವಳಿಕೆಯು ಎಐಎಡಿಎಂಕೆ-ಬಿಜೆಪಿ ಸಂಬಂಧವನ್ನು ಹದಗೆಡಿಸುತ್ತಿದೆ ಎಂದು ವಿವರಿಸಲಾಗಿದೆ.
ತಮ್ಮ ಪಕ್ಷದ ಅತ್ಯುನ್ನತ ನಾಯಕರನ್ನು ಅಣ್ಣಾಮಲೈ ತೆಗಳುತ್ತಿದ್ದಾರೆ. ಎಐಎಡಿಎಂ ಪಕ್ಷದ ನಾಯಕರ ಬಗ್ಗೆ ಅವರಲ್ಲಿ ಕಿಂಚಿತ್ತೂ ಗೌರವವಿಲ್ಲ. ಇದನ್ನು ನಾವು ಸಹಿಸುವುದಿಲ್ಲ. ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ, ಇಲ್ಲದಿದ್ದರೆ ಮೈತ್ರಿಗೆ ಧಕ್ಕೆಯಾಗುತ್ತದೆ ಎಂದು ಎಐಎಡಿಎಂ ಹೇಳಿದೆ.
ಇದೇ ಸಂದರ್ಭದಲ್ಲಿ ಅಮಿತ್ ಶಾ ಭೇಟಿಗೆ ಎಐಡಿಎಂಕೆ ನಾಯಕರಿಗೆ ಅವಕಾಶ ನೀಡಿಲ್ಲವೆಂದು ತಿಳಿದುಬಂದಿದೆ. ನಡ್ಡಾ ನಂತರ ಪಿಯೂಷ್ ಗೋಯಲ್ ಬಳಿ ತೆರಳಲು ಬಿಜೆಪಿ ಹೈಕಮಾಂಡ್ ಸೂಚಿಸಿದೆ. ಗೋಯಲ್ ಬಳಿಯೂ ಇದೇ ಅಳಲನ್ನು ಎಐಎಡಿಎಂಕೆ ನಾಯಕರು ತೋಡಿಕೊಂಡಿದ್ದಾರೆ.
-
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ












Click it and Unblock the Notifications