AICC: ಹರಿಯಾಣ ಚುನಾವಣೆಗೆ ಮೂವರು ವೀಕ್ಷಕರ ನೇಮಿಸಿದ ಕಾಂಗ್ರೆಸ್
ನವದೆಹಲಿ, ಸೆಪ್ಟಂಬರ್ 15: ಹರಿಯಾಣ ವಿಧಾನಸಭಾ ಚುನಾವಣೆ 2024 (Haryana Assembly Election) ಕಾವು ಹೆಚ್ಚಾಗುತ್ತಿದೆ. ನಾಮಪತ್ರ ಸಲ್ಲಿಕೆ ಮುಕ್ತಾಯಗೊಂಡಿದ್ದು, ಪ್ರಚಾರ ಕಾರ್ಯದಲ್ಲಿ ರಾಜಕೀಯ ಪಕ್ಷಗಳು ತೊಡಗಿವೆ. ವಿಜಯಕ್ಕೆ ತಂತ್ರಗಾರಿಕೆ ಹೆಣೆದಿರುವ ಕಾಂಗ್ರೆಸ್ ಪಕ್ಷದ ಮೂವರು ಹಿರಿಯ ನಾಯಕರನ್ನು ಹರಿಯಾಣದ ವೀಕ್ಷಕರನ್ನಾಗಿ ಶನಿವಾರ ಸಂಜೆ ಆದೇಶ ಹೊರಡಿಸಿದೆ.
ಹೌದು, ಪಕ್ಷದ ಹಿರಿಯ ಮುಖಂಡರಾದ ಅಜಯ್ ಮಾಕನ್, ಅಶೋಕ್ ಗೆಹಲೋತ್ ಮತ್ತು ಪರತಾಪ್ ಸಿಂಗ್ ಭಾಜ್ವಾ ಅವರನ್ನು ವೀಕ್ಷಕರನ್ನಾಗಿ ನೇಮಕ ಮಾಡಿ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು, ಈ ನೇಮಕಾತಿಯನ್ನು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆಯವರು ಮಾಡಿದ್ದಾರೆ. ಕಾಂಗ್ರೆಸ್ನಲ್ಲಿ ಅಜಯ್ ಮಾಕನ್ ಖಜಾಂಚಿಯಾಗಿದ್ದಾರೆ, ಪರತಾಪ್ ಸಿಂಗ್ ಭಾಜ್ವಾ ಅವರು ಪಂಜಾಬ್ನಲ್ಲಿ ವಿಪಕ್ಷ ನಾಯಕರಾಗಿದ್ದರೆ, ಗೆಹಲೋತ್ ಅವರು ರಾಜಸ್ಥಾನದ ಮುಖ್ಯಮಂತ್ರಿ ಆಗಿದ್ದಾರೆ. ರಾಜಕೀಯ ಅನುಭವ ಇರುವ ಇವರನ್ನು ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ ಎಂದರು.
ಹರಿಯಾಣದ 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಎಐಸಿಸಿ 89 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದೆ. ಬಿಜೆಪಿ ಹಾಗೂ ಎಎಪಿ ವಿರುದ್ಧ ವಿಜಯಪತಾಕೆ ಹಾರಿಸಲು ಸಕಲ ಸಿದ್ದತೆ ಮಾಡಿಕೊಂಡಿದೆ. ಈ ಪೈಕಿ ವೀಕ್ಷಕರ ನೇಮಕಾತಿ ಒಂದಾಗಿದೆ.
ಹರಿಯಾಣದಲ್ಲಿ ಸದ್ಯ ಪ್ರಚಾರದ ಭರಾಟೆ ಜೋರಾಗಿದೆ. ಚುನಾವಣೆ ಅಕ್ಟೋಬರ್ 5ರಂದು ಜರುಗಲಿದೆ. ಮತ ಎಣಿಕೆಗೆ ಅಕ್ಟೋಬರ್ 8ರಂದು ನಡೆಯಲಿದ್ದು, ಅಂದು ರಾಜ್ಯ ರಾಜಕಾರಣದ ಭವಿಷ್ಯ ನಿರ್ಧಾರವಾಗಲಿದೆ.
ಕೇಂದ್ರ ಸರ್ಕಾರದ ಮೇಲೆ ಚುನಾವಣೆ ಫಲಿತಾಂಶದ ಪರಿಣಾಮ
ಇನ್ನೂ ಚುನಾವಣೆ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಪೃಥ್ವಿರಾಜ ಚೌವಾಣ್ ಅವರು, ಮಹಾರಾಷ್ಟ್ರ ಹಾಗೂ ಹರಿಯಾಣದಲ್ಲಿ ವಿಧಾನಸಭಾ ಚುನಾವಣೆ ಬಳಿಕ ಸರ್ಕಾರ ಬದಲಾಗಲಿದೆ. ಈ ಚುನಾವಣೆಗಳು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಮೇಲೆ ಪ್ರಭಾವ ಬೀರಲಿದೆ ಎಂದು ಭವಿಷ್ಯ ನುಡಿದರು.
ಇನ್ನೂ ಮಹಾರಾಷ್ಟ್ರದಲ್ಲಿ 'ಲಡ್ಕಿ ಬೆಹನ್' ಯೋಜನೆ ಹಿನ್ನೆಲೆಯಲ್ಲಿ ಮಹಿಳೆಯರು ಬಿಜೆಪಿಗೆ ಮತದಾನ ಮಾಡುವುದಿಲ್ಲ. ಈ ಬಾರಿ ಚುನಾವಣೆಯಲ್ಲಿ ಮಹಾವಿಕಾಸ ಅಗಾದಿ (ಎಂವಿಎ) ಪಕ್ಷ ಹೆಚ್ಚು ಸ್ಥಾನ ಪಡೆಯಲಿದೆ. ಬಿಜೆಪಿಗೆ ಮೈತ್ರಿ ಅನಿವಾರ್ಯವಾಗಬಹುದು ಎಂದು ತಿಳಿಸಿದ್ದಾರೆಂದು ಎಎನ್ಐ ವರದಿ ಮಾಡಿದೆ.
ಹರಿಯಾಣ ಗಡಿಯಲ್ಲಿ ಮದ್ಯದಂಗತಿ ಬಂದ್, ಯಾವಾಗ?
ಹರಿಯಾಣ ಚುನಾವಣೆ ಪ್ರಯುಕ್ತ ಈ ರಾಜ್ಯಕ್ಕೆ ಮೂರು ಕಿಲೋ ಮೀಟರ್ ಹತ್ತಿರದಲ್ಲಿರುವ ಉತ್ತರ ಪ್ರದೇಶ ರಾಜ್ಯದ ಗಡಿಭಾಗದ ಮದ್ಯದ ಅಂಗಡಿಗಳನ್ನು ಚುನಾವಣೆ (ಅಕ್ಟೋಬರ್ 05) 48 ಗಂಟೆಗೂ ಮೊದಲೇ ಮುಚ್ಚಲಾಗುತ್ತದೆ. ಉತ್ತರ ಪ್ರದೇಶ ಜಿಲ್ಲೆಯ ಹರಿಯಾಣ ಗಡಿಗೆ ಇರುವ ಮಥುರಾ, ಗೌತಮ ಬುದ್ಧ ನಗರ, ಬಾಘಪಾತ್, ಸಹರಾನಪುರ, ಶಾಮ್ಲಿ ಪ್ರದೇಶಗಳಲ್ಲಿನ ಮದ್ಯದಂಗಡಿಗಳು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
-
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications