ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ರಾಜೀನಾಮೆ
ನವದೆಹಲಿ, ಜುಲೈ 04: ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿ, ಆ ಸ್ಥಾನದಿಂದ ಕೆಳಗಿಳಿದ ನಂತರ ಕಾಂಗ್ರೆಸ್ ನಲ್ಲಿ ಮತ್ತೆ ರಾಜೀನಾಮೆ ಪರ್ವ ಆರಂಭವಾಗುವ ಲಕ್ಷಗಳು ಕಾಣಿಸುತ್ತಿವೆ.
ಪಕ್ಷದ ಪ್ರಧಾನಿ ಕಾರ್ಯದರ್ಶಿ ಸ್ಥಾನಕ್ಕೆ ಹರೀಶ್ ರಾವತ್ ಅವರು ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಐದು ಬಾರಿ ಸಂಸದರಾಗಿಯೂ ಅನುಭವ ಪಡೆದಿದ್ದಾರೆ. ಹದಿನೈದನೇ ಲೋಕಸಭೆಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.

ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ಈ ಮೊದಲೇ ರಾಜೀನಾಮೆ ಸಲ್ಲಿಸಿದ್ದ ರಾಹುಲ್ ಗಾಂಧಿ ಅವರು, ಬುಧವಾರ ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿ, ಅಧ್ಯಕ್ಷ ಸ್ಥಾನದಿಂದ ಅಧಿಕೃತವಾಗಿ ಕೆಳಗಿಳಿದರು. ರಾಹುಲ್ ಗಾಂಢಿ ರಾಜೀನಾಮೆಯ ನಂತರ ಕಾಂಗ್ರೆಸ್ ನಲ್ಲಿ ಮತ್ತೆ ರಾಜೀನಾಮೆ ಪರ್ವ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.












Click it and Unblock the Notifications