ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ರಾಜೀನಾಮೆ
ನವದೆಹಲಿ, ಜುಲೈ 04: ರಾಹುಲ್ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿ, ಆ ಸ್ಥಾನದಿಂದ ಕೆಳಗಿಳಿದ ನಂತರ ಕಾಂಗ್ರೆಸ್ ನಲ್ಲಿ ಮತ್ತೆ ರಾಜೀನಾಮೆ ಪರ್ವ ಆರಂಭವಾಗುವ ಲಕ್ಷಗಳು ಕಾಣಿಸುತ್ತಿವೆ.
ಮನಸ್ಸಿಗೆ ನೋವಾಗಿದ್ದರಿಂದ ರಾಹುಲ್ ರಾಜೀನಾಮೆ ನೀಡಿರಬಹುದು: ದೇವೇಗೌಡ
ಪಕ್ಷದ ಪ್ರಧಾನಿ ಕಾರ್ಯದರ್ಶಿ ಸ್ಥಾನಕ್ಕೆ ಹರೀಶ್ ರಾವತ್ ಅವರು ರಾಜೀನಾಮೆ ನೀಡಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಮುಂದುವರೆದ ರಾಜೀನಾಮೆ ಪರ್ವ: ಮತ್ತೆ ಮೂವರು ಕೈ ಶಾಸಕರ ರಾಜೀನಾಮೆ?
ಉತ್ತರಾಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್, ಐದು ಬಾರಿ ಸಂಸದರಾಗಿಯೂ ಅನುಭವ ಪಡೆದಿದ್ದಾರೆ. ಹದಿನೈದನೇ ಲೋಕಸಭೆಯಲ್ಲಿ ಕೇಂದ್ರ ಜಲಸಂಪನ್ಮೂಲ ಸಚಿವರಾಗಿಯೂ ಅವರು ಕಾರ್ಯ ನಿರ್ವಹಿಸಿದ್ದಾರೆ.
ಪಕ್ಷದ ಸೋಲಿಗೆ ನೈತಿಕ ಹೊಣೆ ಹೊತ್ತು ಈ ಮೊದಲೇ ರಾಜೀನಾಮೆ ಸಲ್ಲಿಸಿದ್ದ ರಾಹುಲ್ ಗಾಂಧಿ ಅವರು, ಬುಧವಾರ ತಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆಯಿಲ್ಲ ಎಂದು ಸ್ಪಷ್ಟಪಡಿಸಿ, ಅಧ್ಯಕ್ಷ ಸ್ಥಾನದಿಂದ ಅಧಿಕೃತವಾಗಿ ಕೆಳಗಿಳಿದರು. ರಾಹುಲ್ ಗಾಂಢಿ ರಾಜೀನಾಮೆಯ ನಂತರ ಕಾಂಗ್ರೆಸ್ ನಲ್ಲಿ ಮತ್ತೆ ರಾಜೀನಾಮೆ ಪರ್ವ ಆರಂಭವಾಗುವ ಲಕ್ಷಣಗಳು ಕಾಣಿಸುತ್ತಿವೆ.