Delhi Elections 2025: ಈ ಕಾರಣಕ್ಕೆ ಅರವಿಂದ್ ಕೇಜ್ರಿವಾಲ್ ಮೇಲೆ ಚಪ್ಪಲಿ ಎಸೆಯುತ್ತಾರೆ: ಅಸಾದುದ್ದೀನ್ ಓವೈಸಿ
Delhi Elections 2025: ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನು 10 ದಿನಗಳು ಮಾತ್ರ ಬಾಕಿ ಉಳಿದಿವೆ. ಈ ರೀತಿ ಇರುವಾಗಲೇ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ದೆಹಲಿ ವಿಧಾನಸಭೆ ಚುನಾವಣೆಗೆ ಎಂಟ್ರಿಕೊಟ್ಟಿದ್ದಾರೆ. ದೆಹಲಿಯಲ್ಲಿ ಫೆಬ್ರವರಿ 5ರಂದು ಚುನಾವಣೆ ನಡೆಯಲಿದೆ. ಈ ಬಾರಿ ಯಾವ ಪಕ್ಷವೂ ಇಲ್ಲಿ ಮೈತ್ರಿ ಮಾಡಿಕೊಂಡಿಲ್ಲ. ಇನ್ನು ಓವೈಸಿ ಅವರ ಎಐಎಂಐಎಂ ಪಕ್ಷವು ಮೊದಲಿನಿಂದಲೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಹಾಗೂ ಬಿಜೆಪಿಯಿಂದ ಸಮಾನ ಅಂತರ ಕಾಪಾಡಿಕೊಂಡು ಬಂದಿದೆ. ಇದೀಗ ದೆಹಲಿ ವಿಧಾನಸಭೆ ಚುನಾವಣೆಯಲ್ಲೂ ಎಐಎಂಐಎಂ ಪಕ್ಷದ ಅಭ್ಯರ್ಥಿಗಳು ಚುನಾವಣಾ ಅಖಾಡಕ್ಕೆ ಧುಮುಕಿದ್ದಾರೆ. ಅರವಿಂದ್ ಕೇಜ್ರಿವಾಲ್ ಬಗ್ಗೆ ವಿವಾದಾತ್ಮಕ ಹೇಳಿಕೆಯನ್ನೂ ಕೊಟ್ಟಿದ್ದಾರೆ.
ದೆಹಲಿ ಚುನಾವಣೆ ಈ ಬಾರಿ ಕಳೆದ ಎಲ್ಲಾ ವರ್ಷಗಳಿಗಿಂತಲೂ ಭಿನ್ನವಾಗಿದೆ. ಈ ಬಾರಿ ಹಲವು ಕಾರಣಕ್ಕೆ ದೆಹಲಿ ವಿಧಾನಸಭೆ ಚುನಾವಣೆ ಭಿನ್ನವಾಗಿದೆ. ಎಲ್ಲಾ ದೊಡ್ಡ ಪಕ್ಷಗಳು ಹಾಗೂ ಸಣ್ಣ ಪಕ್ಷಗಳು ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿವೆ. 2024ನೇ ಸಾಲಿನಲ್ಲಿ ಕಾಂಗ್ರೆಸ್ ವಿವಿಧ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿತ್ತು. ಆದರೆ ಇದೀಗ ದೆಹಲಿಯಲ್ಲಿ ಕಾಂಗ್ರೆಸ್ ಮೈತ್ರಿ ಇಲ್ಲದೆ ಸ್ಪರ್ಧೆ ಮಾಡುತ್ತಿದೆ. ದೆಹಲಿ ಹೇಳಿಕೇಳಿ ಎಎಪಿ ಭದ್ರಕೋಟೆ ಆದರೆ ಈ ಬಾರಿ ದೆಹಲಿಯಲ್ಲಿ ಎಎಪಿ ತನ್ನ ಅಸ್ತಿತ್ವದ ಹೋರಾವನ್ನು ಮಾಡುತ್ತಿದೆ. ಇದಕ್ಕೆ ಮುಖ್ಯ ಕಾರಣ ಈ ಬಾರಿ ದೆಹಲಿಯಲ್ಲಿ ಆಮ್ ಆದ್ಮಿ ಪಾರ್ಟಿಗೆ ಬಿಜೆಪಿ ಪಕ್ಷ ಕೊಡುತ್ತಿರುವ ಪೈಪೋಟಿ. ಇನ್ನು ಕಾಂಗ್ರೆಸ್ ಇಲ್ಲಿ ಬಲಿಷ್ಠವಾಗಿಲ್ಲ. ಆದರೆ ಕಾಂಗ್ರೆಸ್ - ಬಿಜೆಪಿ ಹಾಗೂ ಎಎಪಿ ನಡುವೆ ತ್ರಿಕೋನ ಸ್ಪರ್ಧೆ ಮುಂದುವರಿದಿದೆ. ಇದೀಗ ಎಐಎಂಐಎಂ ಸಹ ದೆಹಲಿಗೆ ಎಂಟ್ರಿಕೊಟ್ಟಿದೆ.

ಮೋದಿ - ಅರವಿಂದ್ ಕ್ರೇಜಿವಾಲ್ ಇಬ್ಬರು ಒಂದೇ
ಪ್ರಧಾನಿ ನರೇಂದ್ರ ಮೋದಿ ಹಾಗೂ ಎಎಪಿ ಸಂಸ್ಥಾಪಕ ಮತ್ತು ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಬ್ಬರೂ ಅಣ್ಣ - ತಮ್ಮ ಇದ್ದಂತೆ, ಅವರಿಬ್ಬರೂ ಒಂದೇ ನಾಣ್ಯದ ಎರಡು ಮುಖಗಳು ಅಸಾದುದ್ದೀನ್ ಓವೈಸಿ ಗುಡುಗಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗೆ ದಿನಾಂಕ ಸಮೀಪಿಸುತ್ತಿರುವಾಗಲೇ ವಾಕ್ಸಮರಗಳು ಜೋರಾಗಿವೆ. ಚುನಾವಣಾ ಪ್ರಚಾರಗಳು ಈಗ ದೆಹಲಿಯಲ್ಲಿ ಭರ್ಜರಿಯಾಗಿ ನಡೆಯುತ್ತಿವೆ. ಚುನಾವಣೆ ಪ್ರಚಾರ ಸಭೆಯಲ್ಲಿ ಎಐಎಂಐಎಂ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುವಾಗ ಅಸಾದುದ್ದೀನ್ ಓವೈಸಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ಅರವಿಂದ್ ಕೇಜ್ರಿವಾಲ್ ಇಬ್ಬರ ಬಗ್ಗೆಯೂ ವಾಗ್ದಾಳಿ ನಡೆಸಿದ್ದಾರೆ.
ನರೇಂದ್ರ ಮೋದಿ ಮತ್ತು ಅರವಿಂದ್ ಕೇಜ್ರಿವಾಲ್ ನಡುವೆ ಅಂತ ಹೇಳಿಕೊಳ್ಳುವ ವ್ಯತ್ಯಾಸವೇನು ಇಲ್ಲ. ಇಬ್ಬರೂ ಆರ್ಎಸ್ಎಸ್ ಸಿದ್ಧಂತದ ಹಿನ್ನೆಲೆಯಿಂದಲೇ ಬಂದಿದ್ದಾರೆ. ಒಬ್ಬರು ಶಾಲೆಯಿಂದ ಬಂದರೆ ಇನ್ನೊಬ್ಬರು ಆರ್ಎಸ್ಎಸ್ ಸಂಸ್ಥೆಯಿಂದ ಬಂದಿದ್ದಾರೆ ಎಂದು ಹೇಳಿದ್ದಾರೆ. ತಮ್ಮ ಪಕ್ಷದ ಚಿಹ್ನೆ ಗಾಳಿಪಟಕ್ಕೆ ಮತ ಹಾಕಿ ಅಂತ ಅವರು ಪ್ರಚಾರ ಮಾಡುತ್ತಿದ್ದಾರೆ.

ಚಪ್ಪಲಿ ಎಸೆಯುತ್ತಾರೆ ಎಂದ ಅಸಾದುದ್ದೀನ್ ಓವೈಸಿ
ದೆಹಲಿಯ ಓಖ್ಲಾ ವಿಧಾನಸಭಾ ಕ್ಷೇತ್ರವನ್ನು ಎಎಪಿ ಕಸದ ಪರ್ವತವನ್ನಾಗಿ ಮಾಡಿದೆ. ಈ ಭಾಗದಲ್ಲಿ ನಾನು ನಡೆದುಕೊಂಡು ಹೋದರೆ ಜನ ನನ್ನ ಮೇಲೆ ಹೂವಿನ ಮಳೆ ಸುರಿಸುತ್ತಾರೆ. ಅದೇ ಕೇಜ್ರಿವಾಲ್ ಹೋದರೆ ಅವರ ಮೇಲೆ ಚಪ್ಪಲಿ ಎಸೆಯುತ್ತಾರೆ ಎಂದು ಹೇಳಿದ್ದಾರೆ. ಈ ವಿಷಯ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications