ಏರ್ ಇಂಡಿಯಾ ಪೈಲಟ್ ಮತ್ತು ಸಿಬ್ಬಂದಿಗೆ 'ಜೈ ಹಿಂದ್' ಹೇಳಲು ಆದೇಶ
ನವದೆಹಲಿ, ಮಾರ್ಚ್ 04: ಏರ್ ಇಂಡಿಯಾ ಸಂಸ್ಥೆಯು ತನ್ನ ವಿಮಾನ ಸೇವಾ ಸಿಬ್ಬಂದಿಗೆ ವಿಮಾನದಲ್ಲಿ ಪ್ರಯಾಣಿಕರಿಗೆ ಸೂಚನೆಗಳ ನಂತರ 'ಜೈ ಹಿಂದ್' ಎಂದು ಹೇಳುವಂತೆ ಆದೇಶ ಮಾಡಿದೆ.
ಕೆಂಪೇಗೌಡ ಏರ್ಪೋರ್ಟ್ನಲ್ಲಿ ಏರ್ ಇಂಡಿಯಾ ಸಿಬ್ಬಂದಿಗೆ ಇಂಡಿಗೋ ಬಸ್ ಡಿಕ್ಕಿ, ಗಾಯ
ಏರ್ ಇಂಡಿಯಾ ನಿರ್ದೇಶಕ ಅಮಿತಾಬ್ ಸಿಂಗ್ ಅವರು ಈ ಆದೇಶ ಹೊರಡಿಸಿದ್ದು, ವಿಮಾನ ಸೇವಾ ಸಿಬ್ಬಂದಿ ಮಾತ್ರವೇ ಅಲ್ಲದೆ ಕಾಕ್ಪೀಟ್ನಿಂದ ಹೊರಡುವ ಸೂಚನೆಗಳ ನಂತರವೂ 'ಜೈ ಹಿಂದ್' ಎಂದು ಹೇಳುವಂತೆ ಆದೇಶಿಸಲಾಗಿದೆ.
ಏರ್ಇಂಡಿಯಾ ವಿಮಾನ ವೇಳಾಪಟ್ಟಿ ಬದಲಾಯಿಸಲು ಕುವೈತ್ ತುಳುಕೂಟ ಮನವಿ
ಆದೇಶವು ತತ್ಕ್ಷಣದಿಂದ ಪಾಲಿಸುವಂತೆ ಸೂಚಿಸಲಾಗಿದ್ದು, ಇನ್ನು ಮುಂದೆ ಏರ್ ಇಂಡಿಯಾದ ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಪ್ರತಿ ಸೂಚನೆಗಳ ನಂತರ 'ಜೈ ಹಿಂದ್' ಕೇಳಿಸಿಕೊಳ್ಳುತ್ತಾರೆ.
ಇದೇ ರೀತಿಯ ಆದೇಶವನ್ನು 2016 ರಲ್ಲಿ ಏರ್ ಇಂಡಿಯಾದ ಚೇರ್ಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಅಶ್ವಿನಿ ಲೋಹಾನಿ ಅವರು ಮಾಡಿದ್ದರು. ಆದರೆ ಅದು ವಿವಿಧ ಕಾರಣಗಳಿಗಾಗಿ ಪಾಲಿಸಲಾಗಿರಲಿಲ್ಲ. ಈಗ ಮತ್ತೆ ಆದೇಶ ಹೊರಡಿಸಲಾಗಿದೆ.
ವೈರಲ್ ವಿಡಿಯೋ: ಏರ್ ಇಂಡಿಯಾ ವಿಮಾನದಲ್ಲಿ ಐರಿಶ್ ಮಹಿಳೆಯ ರಂಪಾಟ
ವಿಮಾನದ ಕ್ಯಾಪ್ಟನ್, ಸೇವಾ ಸಿಬ್ಬಂದಿಗಳು ಪ್ರಯಾಣಿಕರ ಜೊತೆ ಸದಾ ಪರಸ್ಪರ ಸಂಪರ್ಕ ಹೊಂದಿರಲೇಬೇಕಾಗಿರುತ್ತದೆ. ಪ್ರತಿ ಸೂಚನೆಯ ನಂತರ ಜೈ ಹಿಂದ್ ಹೇಳುವುದರಿಂದ ಉತ್ತಮ ವಾತಾವರಣ ವಿಮಾನದಲ್ಲಿ ಉಂಟಾಗುತ್ತದೆ. ಪ್ರಯಾಣಿಕರ, ವಿಮಾನ ಸಿಬ್ಬಂದಿಯ ನಡುವೆ ಬಂಧ ಏರ್ಪಡುತ್ತದೆ ಎಂದು ಏರ್ ಇಂಡಿಯಾ ಹೇಳಿದೆ.