ಶುಭ ಸುದ್ಧಿ: ಏರ್ ಏಷಿಯಾ ವಿಮಾನಗಳಲ್ಲಿ ಹೆಚ್ಚುವರಿ ಸಾಮಗ್ರಿ ಸಾಗಾಟಕ್ಕೆ ಅನುಮತಿ
ನವದೆಹಲಿ, ನವೆಂಬರ್ 2: ಏರ್ ಏಷಿಯಾ ವಿಮಾನಯಾನ ಸಂಸ್ಥೆಯು ತಮ್ಮ ಪ್ರಯಾಣಿಕರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ. ಹೆಚ್ಚುವರಿ ಶುಲ್ಕ ಪಾವತಿಸಲು ಸಿದ್ಧರಿದ್ದಲ್ಲಿ 3 ರಿಂದ 5 ಕೆಜಿವರೆಗೆ ಹೆಚ್ಚುವರಿ ಸಾಮಗ್ರಿಗಳನ್ನು ಸಾಗಿಸುವುದಕ್ಕೆ ವಿಮಾನಯಾನ ಸಂಸ್ಥೆಯು ಅನುಮತಿ ನೀಡಿದೆ.
ಹೆಚ್ಚುವರಿಯಾಗಿ 3 ಕೆಜಿ ಸಾಮಗ್ರಿಗಳನ್ನು ಸಾಗಿಸುವುದಕ್ಕೆ 600 ರೂಪಾಯಿ ಹಾಗೂ 5 ಕೆಜಿ ಹೆಚ್ಚುವರಿ ಸಾಮಗ್ರಿಗಳನ್ನು ಸಾಗಿಸುವುದಕ್ಕೆ 1,000 ರೂಪಾಯಿ ಹೆಚ್ಚುವರಿ ಹಣವನ್ನು ಪಾವತಿ ಮಾಡಬೇಕು ಎಂದು ಸಂಸ್ಥೆಯು ತಿಳಿಸಿದೆ.
ಇಲ್ಲಿಯವರೆಗೆ ಏರ್ ಏಷಿಯಾ ಇಂಡಿಯಾ ವಿಮಾನಗಳಲ್ಲಿ ಹೆಚ್ಚುವರಿ ಕ್ಯಾಬಿನ್ ಸಾಮಾನುಗಳನ್ನು ಸಾಗಿಸಲು ಪ್ರಯಾಣಿಕರಿಗೆ ಅವಕಾಶವಿರಲಿಲ್ಲ. ಅದರ ಬದಲಿಗೆ ಇತರ ದೇಶೀಯ ವಿಮಾನಗಳ ರೀತಿಯಲ್ಲಿ ತನ್ನ ಪ್ರಯಾಣಿಕರಿಗೆ 7 ಕೆಜಿ ತೂಕದ ಸಾಮಗ್ರಿಗಳನ್ನು ಉಚಿತವಾಗಿ ಸಾಗಿಸಲು ಅವಕಾಶ ನೀಡುತ್ತಿತ್ತು.

ಹೊಸ ಸೇವೆ ಆರಂಭಿಸಿದ ಏರ್ ಏಷಿಯಾ:
ಏರ್ ಏಷಿಯಾ ಆರಂಭಿಸಿರುವ ಹೊಸ ಸೇವೆಯಾದ 'ಕ್ಯಾರಿ ಆನ್ ಎಕ್ಸ್ಟ್ರಾ' ಅಡಿಯಲ್ಲಿ ಒಬ್ಬ ಪ್ರಯಾಣಿಕನು 600 ರೂಪಾಯಿ ಶುಲ್ಕವನ್ನು ಪಾವತಿಸಿದರೆ 10 ಕೆಜಿ ತೂಕದ ಕ್ಯಾಬಿನ್ ಬ್ಯಾಗ್ ಅನ್ನು ಸಾಗಿಸಲು ಸಾಧ್ಯವಾಗುತ್ತದೆ. ಪ್ರಯಾಣಿಕರು 12 ಕೆಜಿ ತೂಕದ ಕ್ಯಾಬಿನ್ ಬ್ಯಾಗ್ ಅನ್ನು ಸಾಗಿಸಲು ಬಯಸಿದರೆ, ಅವರು 1,000 ರೂಪಾಯಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ಏರ್ಲೈನ್ಸ್ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕ್ಯಾರಿ ಆನ್ ಎಕ್ಸ್ ಟ್ರಾ ಉಪಯೋಗವೇನು?:
"ಕ್ಯಾರಿ ಆನ್ ಎಕ್ಸ್ಟ್ರಾ ಯೋಜನೆಯಿಂದಾಗಿ ಪ್ರಯಾಣಿಕರ ಪ್ರಮುಖ ದಾಖಲೆಗಳು ಮತ್ತು ಇತರ ವಸ್ತುಗಳನ್ನು ತಮ್ಮೊಂದಿಗೆ ವಿಮಾನದಲ್ಲಿ ತೆಗೆದುಕೊಂಡು ಹೋಗುವುದಕ್ಕೆ ಅವಕಾಶ ಸಿಕ್ಕಂತೆ ಆಗುತ್ತದೆ. ಇದರ ಜೊತೆಗೆ ಪ್ರವೇಶ ಮತ್ತು ನಿರ್ಗಮನ ಸ್ಥಾನದಲ್ಲಿ ಪ್ರತ್ಯೇಕವಾಗಿ ಸಮಾನು ಸರಂಜಾಮುಗಳ ಚೆಕ್ ಇನ್ ಮಾಡಿಸಿಕೊಳ್ಳುವುದಕ್ಕೆ ಸರದಿ ಸಾಲಿನಲ್ಲಿ ನಿಲ್ಲುವುದನ್ನು ತಪ್ಪಿಸುತ್ತದೆ," ಎಂದು ಸಂಸ್ಥೆಯು ತಿಳಿಸಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications