ಭಾರತೀಯ ವಾಯುಪಡೆ ನೂತನ ಮುಖ್ಯಸ್ಥರಾಗಿ ವಿ. ಆರ್. ಚೌಧರಿ ಅಧಿಕಾರ ಸ್ವೀಕಾರ
ನವದೆಹಲಿ, ಸೆಪ್ಟೆಂಬರ್ 30: ಯುದ್ಧ ವಿಮಾನ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಭಾರತೀಯ ವಾಯುಪಡೆಯ ಮುಖ್ಯಸ್ಥರಾಗಿ ಗುರುವಾರ ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿವೇಕ್ ರಾಮ್ ಚೌಧರಿ ಚೀನಾದೊಂದಿಗೆ ಲಡಾಖ್ ಗಡಿ ಘರ್ಷಣೆಯ ಸಂದರ್ಭದಲ್ಲಿ ಲಡಾಖ್ ವಲಯದಲ್ಲಿ ವಾಯುಪಡೆ ಉಸ್ತುವಾರಿ ವಹಿಸಿಕೊಂಡಿದ್ದರು.
ಸೆಪ್ಟೆಂಬರ್ 30 ರಂದು ಏರ್ ಚೀಫ್ ಮಾರ್ಷಲ್ ಆರ್ ಕೆ ಭದೌರಿಯಾ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನೆಲೆ ಈಗ ಯುದ್ಧ ವಿಮಾನ ಪೈಲಟ್ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರನ್ನು ಭಾರತೀಯ ವಾಯುಪಡೆಯ ನೂತನ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.
ಈ ಬಗ್ಗೆ ರಕ್ಷಣಾ ಸಚಿವಾಲಯವು ಮಂಗಳವಾರ ಪತ್ರಿಕಾ ಹೇಳಿಕೆಯಲ್ಲಿ ಮಾಹಿತಿ ನೀಡಿತ್ತು. "ಏರ್ ಚೀಫ್ ಮಾರ್ಷಲ್ ಆರ್ ಕೆ ಭದೌರಿಯಾ ಸೆಪ್ಟೆಂಬರ್ 30 ರಂದು ನಿವೃತ್ತಿ ಹೊಂದಿದ ಬಳಿಕ ಭಾರತೀಯ ವಾಯುಪಡೆ ಮುಖ್ಯಸ್ಥರಾಗಿ ವಿ. ಆರ್. ಚೌಧರಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ. ಈ ಬಗ್ಗೆ ಸರ್ಕಾರ ನಿರ್ಧಾರ ಕೈಗೊಂಡಿದೆ," ಎಂದು ತಿಳಿಸಿತ್ತು.

ಏರ್ ಮಾರ್ಷಲ್ ಚೌಧರಿ 1982 ರ ಡಿಸೆಂಬರ್ 29 ರಂದು ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್ಗೆ ನಿಯೋಜನೆಗೊಂಡಿದ್ದಾರೆ. ಈವರೆಗೂ ಏರ್ ಮಾರ್ಷಲ್ ಚೌಧರಿ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಗುರುವಾರ ಆರ್ ಕೆ ಭದೌರಿಯಾರಿಂದ ವಿ. ಆರ್. ಚೌಧರಿ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ.
ಆರ್ ಕೆ ಭದೌರಿಯಾ ತನ್ನು 42 ವರ್ಷದ ಸುದೀರ್ಘ ಸೇವಾವಧಿ ಬಳಿಕ ನಿವೃತ್ತಿ ಹೊಂದಿದ್ದಾರೆ. ಭದೌರಿಯಾ ಅಧಿಕಾರದಲ್ಲಿ 36 ರಫೇಲ್ ಯುದ್ಧ ವಿಮಾನಗಳು ಹಾಗೂ 83 ಮಾರ್ಚ್ 1 ಎ ಸ್ವದೇಶಿ ತೇಜಸ್ ವಿಮಾನಗಳ ಖರೀದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇನ್ನು ಇಂದು ಅಧಿಕಾರ ವಹಿಸಿಕೊಂಡಿರುವ ವಿ. ಆರ್. ಚೌಧರಿ ಅವರು, ಚೀನಾದೊಂದಿಗೆ ಈ ಗಡಿ ಸಂಘರ್ಷ ಮುಂದಿರುವ ಸಂದರ್ಭದಲ್ಲಿ ಹಾಗೂ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಬಿಕ್ಕಟ್ಟಿನ ಸಂದರ್ಭದಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.
ರಷ್ಯಾದಿಂದ ಎಸ್-400 ಆಧುನಿಕ ವಾಯು ರಕ್ಷಣಾ ವ್ಯವಸ್ಥೆಗಳು ಇನ್ನು ದೇಶದ ವಾಯುಪಡೆಗೆ ಸದ್ಯದಲ್ಲೇ ಸೇರ್ಪಡೆಯಾಗಲಿದ್ದು, ಇದರ ಕಾರ್ಯನಿರ್ವಹಣೆಯ ಜವಾಬ್ದಾರಿ ಕೂಡಾ ವಿ. ಆರ್. ಚೌಧರಿ ವಹಿಸಿಕೊಳ್ಳಲಿದ್ದಾರೆ. ಹಾಗೆಯೇ ಭಾರತೀಯ ವಾಯುಪಡೆಗೆ ಸೇರಲಿರುವ ಯುದ್ಧ ವಿಮಾನಗಳ ಆಧುನೀಕರಣವನ್ನು ಮಾಡುವ ಜವಾಬ್ದಾರಿಯನ್ನು ಕೂಡಾ ಹೊಂದಿದ್ದಾರೆ. ಇನ್ನು ನೂತನ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಅವರ ಪುತ್ರ ರಫೇಲ್ ಯುದ್ಧ ವಿಮಾನ ಪೈಲಟ್ ಆಗಿದ್ದಾರೆ. ಭಾರತೀಯ ವಾಯುಪಡೆಗೆ ರಷ್ಯಾದ ರಫೇಲ್ ಯುದ್ಧ ವಿಮಾನಗಳು ಸೇರ್ಪಡೆಗೆ ಸಹಾಯ ಮಾಡಿದ್ದಾರೆ.
ಭಾರತೀಯ ವಾಯುಪಡೆಯ ಫೈಟರ್ ಸ್ಟ್ರೀಮ್ಗೆ ಏರ್ ಮಾರ್ಷಲ್ ಚೌಧರಿ 1982 ರ ಡಿಸೆಂಬರ್ 29 ರಂದು ನಿಯೋಜನೆಯಾದ ಏರ್ ಚೀಫ್ ಮಾರ್ಷಲ್ ವಿವೇಕ್ ರಾಮ್ ಚೌಧರಿ ಯುದ್ಧ ಹಾಗೂ ತರಬೇತಿ ವಿಮಾನದಲ್ಲಿ ಸುಮಾರು 3,800 ಗಂಟೆಗಳಿಗೂ ಹೆಚ್ಚು ಕಾಲ ಹಾರಾಟ ನಡೆಸಿರುವ ಅನುಭವನ್ನು ಹೊಂದಿರುವವರು ಆಗಿದ್ದಾರೆ. ಹಾಗೆಯೇ 1980ರಲ್ಲಿ ಸಿಯಾಚಿನ್ ಕಣಿವೆಯಲ್ಲಿನ ಆಪರೇಷನ್ ಮೇಘದೂತ ಹಾಗೂ 1999ರಲ್ಲಿ ನಡೆದ ಆಪರೇಷನ್ ಸಫೇದ್ ಸಾಗರ್ನಲ್ಲಿ ವಿವೇಕ್ ರಾಮ್ ಚೌಧರಿ ಭಾಗಿಯಾಗಿದ್ದಾರೆ.
ರಾಷ್ಟ್ರೀಯ ರಕ್ಷಣಾ ಅಕಾಡೆಮಿ ಹಾಗೂ ಡಿಫೆನ್ಸ್ ಸರ್ವಿಸಸ್ ಸ್ಟಾಫ್ ಕಾಲೇಜು ವೆಲ್ಲಿಂಗ್ಟನ್ನ ವಿದ್ಯಾರ್ಥಿಯಾಗಿರುವ ಚೌಧರಿ ಹಲವಾರು ಫೈಟರ್ ಸ್ಕ್ವಾಡ್ರನ್ ಮತ್ತು ಫೈಟರ್ ಬೇಸ್ನಲ್ಲಿ ಭಾಗಿಯಾಗಿದ್ದಾರೆ. ಹಾಗೆಯೇ ಹಲವಾರು ಸ್ಥಾನಗಳನ್ನು ವಹಿಸಿಕೊಂಡು ಸೇವೆ ಸಲ್ಲಿಸಿದ್ದಾರೆ. ಈವರೆಗೂ ಏರ್ ಮಾರ್ಷಲ್ ಚೌಧರಿ ವಾಯುಪಡೆಯ ಉಪ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ವಾಯು ಸಿಬ್ಬಂದಿ ಕಾರ್ಯಾಚರಣೆಗಳ ಸಹಾಯಕ ಮುಖ್ಯಸ್ಥರು (ವಾಯು ರಕ್ಷಣಾ) ಮತ್ತು ಸಹಾಯಕ ವಾಯು ಸಿಬ್ಬಂದಿ (ಸಿಬ್ಬಂದಿ ಅಧಿಕಾರಿಗಳು) ಆಗಿಯೂ ಸೇವೆ ಸಲ್ಲಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications