ಹಿರಿಯ ನಾಗರಿಕರಿಗೆ ಶೇ.50ರಷ್ಟು ರಿಯಾಯಿತಿ ಘೋಷಿಸಿದ ಏರ್ ಇಂಡಿಯಾ
ನವದೆಹಲಿ, ಡಿಸೆಂಬರ್ 17: ಏರ್ ಇಂಡಿಯಾವು ಹಿರಿಯ ನಾಗರಿಕರಿಗೆ ಶೇ.50ರಷ್ಟು ರಿಯಾಯಿತಿಯನ್ನು ಘೋಷಿಸಿದೆ.
ಹಿರಿಯ ನಾಗರಿಕರಿಗೆ ಮೂಲ ಶುಲ್ಕದಲ್ಲಿ ರಿಯಾಯಿತಿ ನೀಡಲಾಗುತ್ತದೆ, ಈ ಯೋಜನೆ ದೇಶೀಯ ವಿಮಾನಗಳಿಗೆ ಮಾತ್ರ ಅನ್ವಯವಾಗಲಿದೆ. 60 ವರ್ಷಕ್ಕಿಂತ ಮೇಲ್ಪಟ್ಟವರು ಮಾತ್ರ ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
ಏರ್ ಇಂಡಿಯಾ ಅಧಿಕೃತ ವೆಬ್ಸೈಟ್ ನ ಪ್ರಕಾರ ಕೆಲವೊಂದು ಮಾನದಂಡಗಳಿದ್ದು, ಅದಕ್ಕೆ ಹೋಲಿಕೆಯಾಗುವವರಿಗೆ ಮಾತ್ರ ರಿಯಾಯಿತಿ ದೊರೆಯಲಿದೆ.ಭಾರತದಲ್ಲಿ ಶಾಶ್ವತವಾಗಿ ನೆಲೆಸಿರುವ ಭಾರತೀಯ, ಪ್ರಯಾಣ ಆರಂಭಿಸುವ ದಿನದಂದು 60 ವರ್ಷ ಆಗಿರಬೇಕು ಎಂದು ಉಲ್ಲೇಖಿಸಲಾಗಿದೆ.

ಟಿಕೆಟ್ನ್ನು ನೀವು ಪ್ರಯಾಣಿಸುವ ಮೂರು ದಿನವಿರುವಾಗ ಪಡೆಯಬೇಕು, ಇದೇ ಆಫರ್ ಒಂದು ವರ್ಷದವರೆಗೆ ಲಭ್ಯವಿರಲಿದೆ.ಬುಕಿಂಗ್ ವೇಳೆ ಮತದಾರ ಗುರುತಿನ ಚೀಟಿ, ಪಾಸ್ಪೋರ್ಟ್, ಡಿಎಲ್, ಸೀನಿಯರ್ ಸಿಟಿಜನ್ ಐಡಿ ನೀಡಬೇಕು.
ಒಂದೊಮ್ಮೆ ವಿಮಾನ ಏರುವ ಮುನ್ನ ಈ ದಾಖಲೆಗಳನ್ನು ಸಲ್ಲಿಸದಿದ್ದರೆ ನೀವು ವಿಮಾನದೊಳಗೆ ಪ್ರಯಾಣಿಸುವಂತಿಲ್ಲ, ಹಾಗೂ ಹಣವನ್ನು ಹಿಂದಿರುಗಿಸುವುದಿಲ್ಲ ಎಂದು ತಿಳಿಸಿದೆ.
ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯನ್ನು ಸಂಪೂರ್ಣ ಖಾಸಗಿ ಅಥವಾ 100% ಖಾಸಗಿಗೆ ಒಪ್ಪಿಸುವ ಬಗ್ಗೆ ಸರಕಾರ ನಿರ್ಧಾರ ಮಾಡಲಿದೆ ನಾಗರಿಕ ವಿಮಾನ ಯಾನ ಖಾತೆ ರಾಜ್ಯ ಸಚಿವ ಹರ್ದೀಪ್ ಸಿಂಗ್ ಪುರಿ ಘೋಷಿಸಿದ್ದು ನೆನಪಿರಬಹುದು.
ಸಾಲದ ಭಾರಕ್ಕೆ ಕುಸಿಯುತ್ತಿರುವ ಉಕ್ಕಿನ ಹಕ್ಕಿಯ ಹೊಣೆಯನ್ನು ಹೊತ್ತುಕೊಳ್ಳಲು ಅನೇಕ ಸಂಸ್ಥೆಗಳು ಮುಂದೆ ಬಂದಿವೆ. ಈ ಪೈಕಿ ಏರ್ ಇಂಡಿಯಾವನ್ನು ಖರೀದಿಸಲು ಟಾಟಾ ಸಮೂಹ ಸಂಸ್ಥೆ ಮುಂದಾಗಿರುವ ಸುದ್ದಿ ಪ್ರಮುಖವಾಗಿದೆ.
1953ರ ಬಳಿಕ ಮತ್ತೊಮ್ಮೆ ಏರ್ ಇಂಡಿಯಾದ ಮೇಲೆ ಟಾಟಾ ಸಂಸ್ಥೆ ತನ್ನ ಹಿಡಿತ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಇಟ್ಟಿದೆ. ಟಾಟಾ ವಿಸ್ತಾರದ ಭಾಗವಾಗಿ ಏರ್ ಇಂಡಿಯಾ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲು ಸೂಚಿಸಲಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications