ಹಾಂಗ್ಕಾಂಗ್ಗೆ ಏರ್ ಇಂಡಿಯಾ ವಿಮಾನ ರದ್ದು
ನವದೆಹಲಿ, ಏಪ್ರಿಲ್ 18; ಏರ್ ಇಂಡಿಯಾ ಹಾಂಗ್ಕಾಂಗ್ಗೆ ವಿಮಾನ ಸೇವೆಯನ್ನು ರದ್ದುಗೊಳಿಸಿದೆ. ಭಾರತದಿಂದ ಹಾಂಗ್ಕಾಂಗ್ಗೆ ತೆರಳುವ ಪ್ರವಾಸಿಗರು 48 ಗಂಟೆಗಳ ಮೊದಲಿನ ಕೋವಿಡ್ ಆರ್ಟಿಪಿಸಿಆರ್ ಪರೀಕ್ಷೆ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಕೋವಿಡ್ ನಿರ್ಬಂಧಗಳು ಮತ್ತು ಬೇಡಿಕೆ ಕುಸಿದಿರುವ ಕಾರಣ ಏರ್ ಇಂಡಿಯಾ ತನ್ನ ವಿಮಾನ ಸೇವೆಯನ್ನು ರದ್ದುಗೊಳಿಸಿದೆ. ಹಾಂಗ್ಕಾಂಗ್ ಸ್ಥಳೀಯ ಆಡಳಿತ ಕೋವಿಡ್ ನಿರ್ಬಂಧಗಳನ್ನು ಹೇರಿದೆ.
ಏಪ್ರಿಲ್ 19 ಮತ್ತು 23ಕ್ಕೆ ಹಾರಾಟ ನಡೆಬೇಕಿದ್ದ ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ. ಹಾಂಗ್ಕಾಂಗ್ಗೆ ಸಂಚಾರ ನಡೆಸುವ ಜನರ ಸಂಖ್ಯೆಯಲ್ಲಿಯೂ ಸಹ ಕುಸಿತ ಕಂಡಿದ್ದು, ಈ ಹಿನ್ನಲೆಯಲ್ಲಿ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಹಾಂಗ್ಕಾಂಗ್ನ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಾರ ಭಾರತದಿಂದ ಸಂಚಾರ ನಡೆಸುವ ಪ್ರಯಾಣಿಕರು 48 ಗಂಟೆಗಳ ಮೊದಲ ಕೋವಿಡ್ ಆರ್ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಈ ವರ್ಷದ ಜನವರಿಯಲ್ಲಿ ಓಮಿಕ್ರಾನ್ ಪ್ರಕರಣಗಳು ಪತ್ತೆಯಾದಾಗ ಹಾಂಗ್ಕಾಂಗ್ ಭಾರತ ಸೇರಿದಂತೆ 8 ದೇಶಗಳ ವಿಮಾನಗಳಿಗೆ ಎರಡು ವಾರಗಳ ಕಾಲ ನಿಷೇಧ ಹೇರಿತ್ತು. ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ, ಫ್ರಾನ್ಸ್, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳ ವಿಮಾನ ಹಾರಾಟ ಸ್ಥಗಿತಗೊಂಡಿತ್ತು.
ಸ್ಥಳೀಯವಾಗಿ ಕೋವಿಡ್ ಪರಿಸ್ಥಿತಿ ಬದಲಾಗುತ್ತಿರುವ ಹಿನ್ನಲೆಯಲ್ಲಿ ವಿಮಾನ ಹಾರಾಟಕ್ಕೆ ನಿಷೇಧ ಹೇರಲಾಗಿದೆ ಎಂದು ಹೇಳಿತ್ತು. ಎರಡು ವಾರಗಳ ಬಳಿಕ ಮತ್ತೆ ವಿಮಾನ ಸೇವೆ ಆರಂಭವಾಗಿತ್ತು.

ಮತ್ತಷ್ಟು ಪ್ರದೇಶದಲ್ಲಿ ಲಾಕ್ಡೌನ್; ಚೀನಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಮತ್ತಷ್ಟು ಪ್ರದೇಶಗಳಿಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಶಾಂಘೈನಲ್ಲಿ ಶನಿವಾರ ಅತಿ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗಿತ್ತು. ಭಾನುವಾರ ಸೋಂಕಿತನೊಬ್ಬ ಸಾವನ್ನಪ್ಪಿದ್ದಾರೆ. ಕೋವಿಡ್ ಲಾಕ್ಡೌನ್ ಆರಂಭವಾದ ಬಳಿಕ ಮೊದಲ ಸೋಂಕಿತ ಮೃತಪಟ್ಟಿದ್ದಾನೆ.
ಶಾಂಘೈನಲ್ಲಿ ಶುಕ್ರವಾರ 3,500 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಜುಝವಾ ನಗರದಲ್ಲಿ ಸಹ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಜನರು ಮನೆಯಿಂದ ಹೊರಬಾರದು ಎಂದು ಸೂಚನೆ ನೀಡಲಾಗಿದೆ. ಮನೆಯಿಂದಲೇ ಕೆಲಸ ಮಾಡಲು ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ.
ಝೆಂಗ್ಝುವಾ ವಿಮಾನ ನಿಲ್ದಾಣ, ಆರ್ಥಿಕ ಪ್ರದೇಶಗಳಲ್ಲಿ ಸಹ 14 ದಿನಗಳ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಕ್ಸಿಯಾನ್ ನಗರದಲ್ಲಿಯೂ ಹಲವಾರು ಕೋವಿಡ್ ನಿರ್ಬಂಧಗಳನ್ನು ಹೇರಲಾಗಿದೆ.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications