ಹಾಂಗ್ಕಾಂಗ್ಗೆ ಏರ್ ಇಂಡಿಯಾ ವಿಮಾನ ರದ್ದು
ನವದೆಹಲಿ, ಏಪ್ರಿಲ್ 18; ಏರ್ ಇಂಡಿಯಾ ಹಾಂಗ್ಕಾಂಗ್ಗೆ ವಿಮಾನ ಸೇವೆಯನ್ನು ರದ್ದುಗೊಳಿಸಿದೆ. ಭಾರತದಿಂದ ಹಾಂಗ್ಕಾಂಗ್ಗೆ ತೆರಳುವ ಪ್ರವಾಸಿಗರು 48 ಗಂಟೆಗಳ ಮೊದಲಿನ ಕೋವಿಡ್ ಆರ್ಟಿಪಿಸಿಆರ್ ಪರೀಕ್ಷೆ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಕೋವಿಡ್ ನಿರ್ಬಂಧಗಳು ಮತ್ತು ಬೇಡಿಕೆ ಕುಸಿದಿರುವ ಕಾರಣ ಏರ್ ಇಂಡಿಯಾ ತನ್ನ ವಿಮಾನ ಸೇವೆಯನ್ನು ರದ್ದುಗೊಳಿಸಿದೆ. ಹಾಂಗ್ಕಾಂಗ್ ಸ್ಥಳೀಯ ಆಡಳಿತ ಕೋವಿಡ್ ನಿರ್ಬಂಧಗಳನ್ನು ಹೇರಿದೆ.
ಏಪ್ರಿಲ್ 19 ಮತ್ತು 23ಕ್ಕೆ ಹಾರಾಟ ನಡೆಬೇಕಿದ್ದ ವಿಮಾನಗಳನ್ನು ಸಹ ರದ್ದುಗೊಳಿಸಲಾಗಿದೆ. ಹಾಂಗ್ಕಾಂಗ್ಗೆ ಸಂಚಾರ ನಡೆಸುವ ಜನರ ಸಂಖ್ಯೆಯಲ್ಲಿಯೂ ಸಹ ಕುಸಿತ ಕಂಡಿದ್ದು, ಈ ಹಿನ್ನಲೆಯಲ್ಲಿ ವಿಮಾನಗಳನ್ನು ರದ್ದುಗೊಳಿಸಲಾಗಿದೆ.

ಹಾಂಗ್ಕಾಂಗ್ನ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಾರ ಭಾರತದಿಂದ ಸಂಚಾರ ನಡೆಸುವ ಪ್ರಯಾಣಿಕರು 48 ಗಂಟೆಗಳ ಮೊದಲ ಕೋವಿಡ್ ಆರ್ಟಿಪಿಸಿಆರ್ ಪರೀಕ್ಷೆ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯವಾಗಿದೆ.
ಈ ವರ್ಷದ ಜನವರಿಯಲ್ಲಿ ಓಮಿಕ್ರಾನ್ ಪ್ರಕರಣಗಳು ಪತ್ತೆಯಾದಾಗ ಹಾಂಗ್ಕಾಂಗ್ ಭಾರತ ಸೇರಿದಂತೆ 8 ದೇಶಗಳ ವಿಮಾನಗಳಿಗೆ ಎರಡು ವಾರಗಳ ಕಾಲ ನಿಷೇಧ ಹೇರಿತ್ತು. ಬ್ರಿಟನ್, ಆಸ್ಟ್ರೇಲಿಯಾ, ಕೆನಡಾ, ಫ್ರಾನ್ಸ್, ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳ ವಿಮಾನ ಹಾರಾಟ ಸ್ಥಗಿತಗೊಂಡಿತ್ತು.
ಸ್ಥಳೀಯವಾಗಿ ಕೋವಿಡ್ ಪರಿಸ್ಥಿತಿ ಬದಲಾಗುತ್ತಿರುವ ಹಿನ್ನಲೆಯಲ್ಲಿ ವಿಮಾನ ಹಾರಾಟಕ್ಕೆ ನಿಷೇಧ ಹೇರಲಾಗಿದೆ ಎಂದು ಹೇಳಿತ್ತು. ಎರಡು ವಾರಗಳ ಬಳಿಕ ಮತ್ತೆ ವಿಮಾನ ಸೇವೆ ಆರಂಭವಾಗಿತ್ತು.

ಮತ್ತಷ್ಟು ಪ್ರದೇಶದಲ್ಲಿ ಲಾಕ್ಡೌನ್; ಚೀನಾದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬರುತ್ತಿದೆ. ಈ ಹಿನ್ನಲೆಯಲ್ಲಿ ಮತ್ತಷ್ಟು ಪ್ರದೇಶಗಳಿಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಶಾಂಘೈನಲ್ಲಿ ಶನಿವಾರ ಅತಿ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗಿತ್ತು. ಭಾನುವಾರ ಸೋಂಕಿತನೊಬ್ಬ ಸಾವನ್ನಪ್ಪಿದ್ದಾರೆ. ಕೋವಿಡ್ ಲಾಕ್ಡೌನ್ ಆರಂಭವಾದ ಬಳಿಕ ಮೊದಲ ಸೋಂಕಿತ ಮೃತಪಟ್ಟಿದ್ದಾನೆ.
ಶಾಂಘೈನಲ್ಲಿ ಶುಕ್ರವಾರ 3,500 ಹೊಸ ಕೋವಿಡ್ ಪ್ರಕರಣ ದಾಖಲಾಗಿತ್ತು. ಜುಝವಾ ನಗರದಲ್ಲಿ ಸಹ ಲಾಕ್ ಡೌನ್ ಘೋಷಣೆ ಮಾಡಲಾಗಿದ್ದು, ಜನರು ಮನೆಯಿಂದ ಹೊರಬಾರದು ಎಂದು ಸೂಚನೆ ನೀಡಲಾಗಿದೆ. ಮನೆಯಿಂದಲೇ ಕೆಲಸ ಮಾಡಲು ಆದ್ಯತೆ ನೀಡಬೇಕು ಎಂದು ತಿಳಿಸಲಾಗಿದೆ.
ಝೆಂಗ್ಝುವಾ ವಿಮಾನ ನಿಲ್ದಾಣ, ಆರ್ಥಿಕ ಪ್ರದೇಶಗಳಲ್ಲಿ ಸಹ 14 ದಿನಗಳ ಲಾಕ್ಡೌನ್ ಘೋಷಣೆ ಮಾಡಲಾಗಿದೆ. ಕ್ಸಿಯಾನ್ ನಗರದಲ್ಲಿಯೂ ಹಲವಾರು ಕೋವಿಡ್ ನಿರ್ಬಂಧಗಳನ್ನು ಹೇರಲಾಗಿದೆ.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಇಸ್ರೇಲ್-ಯುಎಸ್ ಜಂಟಿ ದಾಳಿ ಅಬ್ಬರ: ಇರಾನ್ಗೆ ಉತ್ತರಾಧಿಕಾರಿ ನೇಮಕ, ಇಂದಿನ ಪ್ರಮುಖಾಂಶಗಳು ಇಲ್ಲಿವೆ -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
International Women's Day 2026: ಸ್ತ್ರೀ ಶಕ್ತಿಗೊಂದು ಗೌರವದ ನಮನ: ಮಹಿಳಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ -
ಐಪಿಎಲ್ 2026ಕ್ಕೆ ಮುಹೂರ್ತ ಫಿಕ್ಸ್: ಇಲ್ಲಿದೆ ಮಾಹಿತಿ -
ಧುರಂಧರ್ 2 ಟ್ರೈಲರ್ ಔಟ್: ರಕ್ತ ಚರಿತ್ರೆ ಬರೆಯಲಿದೆ ಸಿನಿಮಾ, ಭರ್ಜರಿ ಕಲೆಕ್ಷನ್ ನಿರೀಕ್ಷೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ











Click it and Unblock the Notifications