ಏರ್ ಇಂಡಿಯಾದಲ್ಲಿ ಬಂಡವಾಳ ಹಿಂತೆಗೆತ 2021-22ರಲ್ಲಿ ಪೂರ್ಣ
ನವದೆಹಲಿ,ಫೆಬ್ರವರಿ 01: ಏರ್ ಇಂಡಿಯಾದಲ್ಲಿ ಬಂಡವಾಳ ಹಿಂತೆಗೆತ 2021-22ರಲ್ಲಿ ಪೂರ್ಣಗೊಳ್ಳಲಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸಾಲದ ಸುಳಿಯಲ್ಲಿ ಸಿಲುಕಿರುವ ರಾಷ್ಟ್ರೀಯ ಸಂಸ್ಥೆಯ ಆರ್ಥಿಕ ಪುನಶ್ಚೇತನ ಭಾಗವಾಗಿ ವಿಶೇಷ ಉದ್ದೇಶದ ವಾಹಕ ಸ್ಥಾಪನೆಗೆ 2.268 ಕೋಟಿ ರೂ. ಹಂಚಿಕೆ ಮಾಡಿರುವುದಾಗಿ ಅವರು ಹೇಳಿದ್ದಾರೆ.
ಸಾಲದಲ್ಲಿ ಮುಳುಗಿರುವ ಸಾರ್ವಜನಿಕ ಸ್ವಾಮ್ಯದ ಏರ್ ಇಂಡಿಯಾದ ಆರ್ಥಿಕ ಪುನಶ್ಚೇತನಕ್ಕಾಗಿ ವಿಶೇಷ ಉದ್ದೇಶದ ವಾಹಕವೊಂದನ್ನು ಸ್ಥಾಪಿಸಲಾಗಿದ್ದು, 2021-22ನೇ ಸಾಲಿನ ಬಜೆಟ್ ನಲ್ಲಿ 2,268 ಕೋಟಿ ರೂಪಾಯಿ ಹಂಚಿಕೆ ಮಾಡಲಾಗಿದೆ. ಏರ್ ಇಂಡಿಯಾ ಹಾಗೂ ಪವನ್ ಹನ್ಸ್ ನಲ್ಲಿ ಹೂಡಿಕೆ ಹಿಂತೆಗೆತ 2021-22ರಲ್ಲಿ ಮುಗಿಯಲಿದೆ ಎಂದು ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದ ವೇಳೆ ತಿಳಿಸಿದರು.

ಏರ್ ಇಂಡಿಯಾ ಸಂಸ್ಥೆಯಲ್ಲಿ ಪ್ರಸ್ತುತ ಬಂಡವಾಳ ಹಿಂತೆಗೆತ ಪ್ರಕ್ರಿಯೆ ನಡೆಯುತ್ತಿದೆ. ಅನೇಕ ಬಿಡ್ ದಾರರು ಕಳೆದ ತಿಂಗಳು ಆಸಕ್ತಿ ತೋರಿದ್ದು, ಮುಂದಿನ ವಾರ ಅರ್ಹ ಬಿಡ್ ದಾರರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ.
ನಾಗರಿಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ದೇಶದಲ್ಲಿ ಸುಮಾರು 100 ವಿಮಾನ ನಿಲ್ದಾಣಗಳನ್ನು ಹೊಂದಿದೆ.
2021-22ರ ಕೇಂದ್ರ ಬಜೆಟ್ನಲ್ಲಿ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ 3,224 ಕೋಟಿ ರೂ.ಗಳನ್ನು ನಿಗದಿಪಡಿಸಲಾಗಿದೆ, ಇದು ಪ್ರಸಕ್ತ ಹಣಕಾಸು ವರ್ಷದಲ್ಲಿ ನಿಗದಿಪಡಿಸಿದ 4,131 ಕೋಟಿ ರೂ.ಗಳಲ್ಲಿ ಶೇ. 22 ಕ್ಕಿಂತ ಕಡಿಮೆಯಾಗಿದೆ.
ಕಳೆದ ವರ್ಷ 2020-21ನೇ ಸಾಲಿಗಾಗಿ ವಿಮಾನಯಾನ ಸಚಿವಾಲಯಕ್ಕೆ 3797 ಕೋಟಿ ಹಂಚಿಕೆ ಮಾಡಲಾಗಿತ್ತು. ಆದರೆ, ಪರಿಷ್ಕೃತ ಅಂದಾಜಿನಂತೆ 4,131 ಕೋಟಿಗೆ ಅದನ್ನು ಹೆಚ್ಚಿಸಲಾಗಿದೆ. 2021-22ರ ಪ್ರಾದೇಶಿಕ ಸಂಪರ್ಕ ಯೋಜನೆ ಉಡಾನ್ಗೆ ಪ್ರಸಕ್ತ ಹಣಕಾಸು ವರ್ಷಕ್ಕಿಂತ ಶೇ. 28 ರಷ್ಟು ಕಡಿಮೆ ಅನುದಾನ ನೀಡಲಾಗಿದೆ.












Click it and Unblock the Notifications