Air India: ಏರ್ ಇಂಡಿಯಾ ವಿಮಾನ 3 ಗಂಟೆ ಆಗಸದಲ್ಲೇ ಗಿರಕಿ: ಒಟ್ಟು 140 ಜನರು ಇದ್ದ ವಿಮಾನ...
ಭಾರತೀಯರು ಇಂದು ಕನಸು & ಮನಸ್ಸಿನಲ್ಲೂ ಮರೆಯದ ಘಟನೆ ಒಂದು ನಡೆದಿದೆ. ಈ ದಿನ ಭಾರತದ ವಿಮಾನಯಾನ ಇತಿಹಾಸದಲ್ಲೇ ಒಂದು ದೊಡ್ಡ ದುರಂತಕ್ಕೆ ಸಾಕ್ಷಿಯಾಗುವ ಭಯ ಆವರಿಸಿತ್ತು. ತಾಂತ್ರಿಕ ದೋಷದ ಕಾರಣ ದಿಢೀರ್ ಏರ್ ಇಂಡಿಯಾ ವಿಮಾನ ನೆಲಕ್ಕೆ ಬೀಳುವ ಅಪಾಯ ಕೂಡ ಆವರಿಸಿತ್ತು. ಅದರಲ್ಲೂ, ಇಡೀ ದೇಶದಲ್ಲಿ ಈ ಸುದ್ದಿ ಸಂಚಲನ ಸೃಷ್ಟಿ ಮಾಡಿತ್ತು. ಹೀಗಿದ್ದಾಗಲೇ, ಏರ್ ಇಂಡಿಯಾ ವಿಮಾನ 3 ಗಂಟೆ ಆಗಸದಲ್ಲೇ ಗಿರಕಿ ಹೊಡೆದು, ಒಟ್ಟು 140 ಜನರು ಇದ್ದ ವಿಮಾನ...
ಅಂದಹಾಗೆ, ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ನಲ್ಲಿ ದೋಷ ಕಂಡುಬಂದಿತ್ತು. ಹೀಗೆ ವಿಮಾನದ ಹೈಡ್ರಾಲಿಕ್ನಲ್ಲಿ ದೋಷ ಕಂಡುಬಂದ ವಿಚಾರ ತಿಳಿದ ತಕ್ಷಣವೇ ಪೈಲಟ್ ತುರ್ತು ಲ್ಯಾಂಡಿಂಗ್ ಘೋಷಣೆ ಮಾಡಿದ್ದರು. ಆದರೆ ತುರ್ತು ಲ್ಯಾಂಡಿಂಗ್ ಮಾಡಲು ಹಲವು ಅಡೆತಡೆ ಎದುರಾದವು. ವಿಚಾರ ತಿಳಿದ ತಕ್ಷಣ ತಮಿಳುನಾಡು ಮಾತ್ರವಲ್ಲ ಇಡೀ ಭಾರತದಲ್ಲೇ ಈ ಬಗ್ಗೆ ಭಯದ ವಾತಾವರಣ ನಿರ್ಮಾಣ ಆಗಿತ್ತು. ಈ ಭಯ ಯಾಕೆ ಅಂದ್ರೆ ಸಮಸ್ಯೆಗೆ ಸಿಲುಕಿದ್ದ ವಿಮಾನದಲ್ಲಿ ಸುಮಾರು 140 ಜನರು ಇದ್ದರು. ಹೀಗಿದ್ದಾಗಲೇ ಸುಮಾರು 03 ಗಂಟೆಗಳ ಕಾಲ ಏರ್ ಇಂಡಿಯಾ ವಿಮಾನ ಗಾಳಿಯಲ್ಲಿ ಸುತ್ತಿದ ನಂತರ ಭಯ ಇನ್ನಷ್ಟು ಹೆಚ್ಚಾಗಿತ್ತು...

ವಿಮಾನಯಾನ ಸಚಿವರು ಹೇಳಿದ್ದು ಏನು?
ಏರ್ ಇಂಡಿಯಾ ವಿಮಾನದ ಹೈಡ್ರಾಲಿಕ್ ವ್ಯವಸ್ಥೆ ಕೈಕೊಟ್ಟ ನಂತರ, ಸುಮಾರು 03 ಗಂಟೆಗಳ ಕಾಲ ಏರ್ ಇಂಡಿಯಾ ವಿಮಾನ ಗಾಳಿಯಲ್ಲಿ ಸುತ್ತಾಡಿ ಕೊನೆಗೂ ಸೇಫ್ ಆಗಿ ಲ್ಯಾಂಡಿಂಗ್ ಆಗಿದೆ. ಈ ಕುರಿತು ಈಗ ವಿಮಾನಯಾನ ಸಚಿವರಾದ ರಾಮ್ ಮೋಹನ್ ನಾಯ್ಡು ಅವರು ಮಾಹಿತಿ ನೀಡಿದ್ದು, ಘಟನೆಯ ಹಿನ್ನೆಲೆ ಬಗ್ಗೆ ತಿಳಿಸಿದ್ದಾರೆ. ಹಾಗಾದ್ರೆ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು ತಮ್ಮ ಪತ್ರದಲ್ಲಿ ಹೇಳಿರುವುದು ಏನು? ಮುಂದೆ ಓದಿ.
ಶಾರ್ಜಾಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದ ಎಮೆರ್ಜೆನ್ಸಿ ಲ್ಯಾಂಡಿಂಗ್ ಬಗ್ಗೆ ಇದೀಗ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಅವರು, 'ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ಎಎಕ್ಸ್ಬಿ-613 ಹೈಡ್ರಾಲಿಕ್ ವೈಫಲ್ಯವಾದ ನಂತರ ತಮಿಳುನಾಡು ರಾಜ್ಯದ ತಿರುಚ್ಚಿ ಏರ್ಪೋರ್ಟ್ನಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಆಗಿದೆ. ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಲು ಹಾಗೂ ವಿಮಾನದಲ್ಲಿ ಇದ್ದ 141 ಪ್ರಯಾಣಿಕರ ಸುರಕ್ಷತೆ ದೃಷ್ಟಿಯಿಂದ ವಿಮಾನ ನಿಲ್ದಾಣದ ಸಿಬ್ಬಂದಿ ಎಲ್ಲಾ ರೀತಿ ಕ್ರಮ ಕೈಗೊಂಡಿದ್ದರು. ಪ್ರಯಾಣಿಕರ ಮುಂದಿನ ಪ್ರಯಾಣಕ್ಕೆ ಅಗತ್ಯ ವ್ಯವಸ್ಥೆ ಮಾಡುವಂತೆ ಏರ್ ಇಂಡಿಯಾ ಎಕ್ಸ್ಪ್ರೆಸ್ಗೆ ಸೂಚಿಸಲಾಗಿದೆ.' ಎಂದು ತಿಳಿಸಿದ್ದಾರೆ.
ಎಂ.ಕೆ. ಸ್ಟಾಲಿನ್ ಅವರಿಂದ ಶ್ಲಾಘನೆ
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೂಡ ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಏರ್ ಇಂಡಿಯಾ ಎಕ್ಸ್ಪ್ರೆಸ್ IX613 ಸುರಕ್ಷಿತವಾಗಿ ಲ್ಯಾಂಡ್ ಆಗಲು ಹಾಗೂ ಆ ವಿಮಾನದಲ್ಲಿ ಇದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಲು ಶ್ರಮ ವಹಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ ಕ್ಯಾಪ್ಟನ್ ಮತ್ತು ಸಿಬ್ಬಂದಿಗೆ ಧನ್ಯವಾದ ಅರ್ಪಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications