ಭೀಕರ ವಿಮಾನ ಅಪಘಾತಕ್ಕೆ 200 ಜನರ ಜೀವ ಬಲಿ? Plane Crash
ವಿಮಾನ ಪ್ರಯಾಣ ಅಪಾಯಕಾರಿ ಅನ್ನೋ ಆರೋಪಗಳು ಪದೇ ಪದೇ ಕೇಳಿ ಬರುತ್ತಲೇ ಇರುತ್ತವೆ. ಆದರೆ ಅತಿ ವೇಗವಾಗಿ & ಬೇಗ ಹೋಗಲು ವಿಮಾನ ಪ್ರಯಾಣವನ್ನೇ ಜನರು ಬಳಕೆ ಮಾಡುತ್ತಾರೆ. ಅದರಲ್ಲೂ ಶ್ರೀಮಂತರು ವಿಮಾನ ಪ್ರಯಾಣಕ್ಕೆ ಒತ್ತು ನೀಡುತ್ತಾರೆ. ಹೀಗಿದ್ದಾಗ ಪದೇ ಪದೇ ವಿಮಾನ ಅಪಘಾತ ಸಂಭವಿಸಿ ಜನರಲ್ಲೂ ಭಯದ ವಾತಾವರಣ ಸೃಷ್ಟಿ ಆಗುತ್ತಿದೆ. ಇಂತಹ ಸಮಯದಲ್ಲೇ ಇಂದು ಭಾರತದ ಇತಿಹಾಸದಲ್ಲೇ ಘೋರ ವಿಮಾನ ದುರಂತ ಸಂಭವಿಸಿದ್ದು, ಭೀಕರ ವಿಮಾನ ಅಪಘಾತಕ್ಕೆ 200 ಜನರ ಜೀವ ಬಲಿ?
ಹೌದು, ಭಾರತದಲ್ಲಿ ಹಲವು ಭೀಕರ ವಿಮಾನ ದುರಂತಗಳು ಸಂಭವಿಸಿವೆ. ಆದರೆ ಇಂದು ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯ ಗುಜರಾತ್ನ ಅಹಮದಾಬಾದ್ ನಗರದಲ್ಲಿ ಭೀಕರ ವಿಮಾನ ದುರಂತ ಸಂಭವಿಸಿದೆ. ಸುಮಾರು 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನವಾಗಿದೆ ಎಂಬ ಸುದ್ದಿ ಇದೀಗ ಎದೆ ನಡುಗಿಸಿ ಇಡೀ ಜಗತ್ತಿನಲ್ಲಿ ಸಂಚಲನ ಸೃಷ್ಟಿ ಆಗುವಂತೆ ಮಾಡಿದೆ. ಹಾಗಾದ್ರೆ ಅಹಮದಾಬಾದ್ ನಗರದ ಘೋರ ವಿಮಾನ ದುರಂತದಲ್ಲಿ ಎಷ್ಟು ಜನ ಮೃತಪಟ್ಟಿದ್ದಾರೆ? ಮುಂದೆ ಓದಿ.

ವಿಮಾನ ದುರಂತಕ್ಕೆ 200 ಪ್ರಯಾಣಿಕರು ಬಲಿ?
ಜಗತ್ತಿನಲ್ಲಿ ಅತಿಹೆಚ್ಚು ದುಡ್ಡು ಕೊಟ್ಟು ಹೋಗುವ ಪ್ರಯಾಣ ಎಂದರೆ ಅದು ವಿಮಾನ ಪ್ರಯಾಣ. ಹೀಗಿದ್ದರೂ ವಿಮಾನ ಪ್ರಯಾಣದ ಸಮಯದಲ್ಲೇ ಸಾಲು ಸಾಲು ದುರಂತಗಳು ಸಂಭವಿಸಿ ಭಯದ ವಾತಾವರಣ ಇದೀಗ ಸೃಷ್ಟಿ ಆಗುತ್ತಿದೆ. ಅದರಲ್ಲೂ ಕರ್ನಾಟಕ ಸೇರಿದಂತೆ ಭಾರತದ ಹಲವು ನಗರಗಳ ವಿಮಾನ ನಿಲ್ದಾಣಗಳಲ್ಲಿ ವಿಮಾನ ದುರಂತ ಸಂಭವಿಸಿದ್ದವು. ಆದರೆ ಭಾರತದ ಇತಿಹಾಸದಲ್ಲೇ ಘೋರ ವಿಮಾನ ದುರಂತವು ಇಂದು ಸಂಭವಿಸಿದ್ದು, ಅಹಮದಾಬಾದ್ ನಗರದಲ್ಲಿ ಭೀಕರ ವಿಮಾನ ಅಪಘಾತಕ್ಕೆ 200 ಜನರ ಜೀವ ಬಲಿಯಾಗಿರುವ ಶಂಕೆ ಇದೀಗ ವ್ಯಕ್ತವಾಗಿದೆ...
232 ಪ್ರಯಾಣಿಕರು & 10 ಸಿಬ್ಬಂದಿ...
ಅಂದಹಾಗೆ 242 ಜನರನ್ನು ಹೊತ್ತ ಏರ್ ಇಂಡಿಯಾ ವಿಮಾನ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಏರ್ಪೋರ್ಟ್ ಮೂಲಕ ಲಂಡನ್ ಕಡೆಗೆ ಪ್ರಯಾಣ ಬೆಳೆಸಿತ್ತು. ಹೀಗೆ 232 ಪ್ರಯಾಣಿಕರು & 10 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನ ತಮ್ಮ ಗುರಿ ತಲುಪುವ ನಿರೀಕ್ಷೆಯಲ್ಲಿ ಇದ್ದರು. ಆದರೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ನಿಯಂತ್ರಣ ಕಳೆದುಕೊಂಡ ಏರ್ ಇಂಡಿಯಾ ವಿಮಾನ ಗಾಳಿಯಲ್ಲಿ ತೇಲುತ್ತಾ, ಅಲ್ಲಾಡಿ ಹೋಗಿದೆ. ನೋಡ ನೋಡುತ್ತಲೇ ಈ ವಿಮಾನವನ್ನ ತುರ್ತು ಅಂದ್ರೆ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲು ಪೈಲೆಟ್ ಮುಂದಾಗಿದ್ದಾರೆ. ಇದೇ ಸಮಯದಲ್ಲಿ ಕ್ರಾಶ್ ಲ್ಯಾಂಡ್ ಆಗಿರುವ ವಿಮಾನ ಸ್ಫೋಟಗೊಂಡಿದೆ ಎಂಬ ಮಾಹಿತಿ ಸಿಕ್ಕಿದ್ದು, ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications