58,000 ಲೀಟರ್ ಪೆಟ್ರೋಲ್ ಹೊಂದಿದ್ದ ವಿಮಾನ ದಿಢೀರ್ ಬಿಲ್ಡಿಂಗ್ ಮೇಲೆ ಬಿದ್ದಿದ್ದು ಹೇಗೆ... Ahmedabad Plane Crash
ಜಗತ್ತೇ ಬೆಚ್ಚಿ ಬೀಳುವ ಘಟನೆ ಪ್ರಧಾನಿ ಮೋದಿ ಅವರ ತವರು ಗುಜರಾತ್ ರಾಜ್ಯದ ಅಹಮದಾಬಾದ್ ನಗರದಲ್ಲಿ ಇಂದು ನಡೆದಿದೆ. ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತ ಹಿನ್ನೆಲೆ ಈಗ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಭಾರತದ ಇತಿಹಾಸದಲ್ಲೇ ಘೋರ ವಿಮಾನ ದುರಂತ ಇಂದು ಸಂಭವಿಸಿದ್ದು, ಈ ಸುದ್ದಿಯನ್ನ ಶತಕೋಟಿ ಭಾರತೀಯರು ನಂಬಲು ಕೂಡ ಆಗುತ್ತಿಲ್ಲ. ಹಾಗಾದರೆ, 58,000 ಲೀಟರ್ ಪೆಟ್ರೋಲ್ ಹೊಂದಿದ್ದ ವಿಮಾನ ದಿಢೀರ್ ಬಿಲ್ಡಿಂಗ್ ಮೇಲೆ ಬಿದ್ದಿದ್ದು ಹೇಗೆ...
ಅಂದಹಾಗೆ 242 ಜನರನ್ನು ಹೊತ್ತ ಏರ್ ಇಂಡಿಯಾ ವಿಮಾನ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಏರ್ಪೋರ್ಟ್ ಮೂಲಕ ಲಂಡನ್ ಕಡೆಗೆ ಪ್ರಯಾಣ ಬೆಳೆಸಿತ್ತು. ಹೀಗೆ 232 ಪ್ರಯಾಣಿಕರು & 10 ಸಿಬ್ಬಂದಿ ಸೇರಿದಂತೆ ಒಟ್ಟು 242 ಜನ ತಮ್ಮ ಗುರಿ ತಲುಪುವ ನಿರೀಕ್ಷೆಯಲ್ಲಿ ಇದ್ದರು. ಆದರೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ನಿಯಂತ್ರಣ ಕಳೆದುಕೊಂಡ ಏರ್ ಇಂಡಿಯಾ ವಿಮಾನ ಗಾಳಿಯಲ್ಲಿ ತೇಲುತ್ತಾ, ಅಲ್ಲಾಡಿ ಹೋಗಿದೆ. ನೋಡ ನೋಡುತ್ತಲೇ ಈ ವಿಮಾನವನ್ನ ತುರ್ತು ಅಂದ್ರೆ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲು ಪೈಲೆಟ್ ಮುಂದಾಗಿದ್ದಾರೆ...

58,000 ಲೀಟರ್ ಪೆಟ್ರೋಲ್ ಹೊಂದಿದ್ದ ವಿಮಾನ...
ಹೌದು, ಭಾರತದಲ್ಲಿ ಸಂಭವಿಸಿದ ಅತಿ ಘೋರ ವಿಮಾನ ದುರಂತಗಳ ಸಾಲಿಗೆ ಇಂದು ಮತ್ತೊಂದು ದುರಂತ ಸೇರ್ಪಡೆ ಆಗಿದೆ. ಲಂಡನ್ ಕಡೆಗೆ ಪ್ರಯಾಣ ಬೆಳೆಸುವ ವಿಮಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಅಗತ್ಯತೆ ಇರುತ್ತದೆ, ಹೀಗಾಗಿ ಸುಮಾರು 58,000 ಲೀಟರ್ ಪೆಟ್ರೋಲ್ ತುಂಬಿಸಲಾಗಿತ್ತು. ಆದರೆ ಇಷ್ಟೊಂದು ಭಾರಿ ಪ್ರಮಾಣದಲ್ಲಿ ವೈಟ್ ಪೆಟ್ರೋಲ್ ಅಥವಾ ಶ್ವೇತ ಇಂಧನ ತುಂಬಿಸಿದ್ದ ಏರ್ ಇಂಡಿಯಾದ ಲಂಡನ್ ವಿಮಾನ ಕೆಳಗೆ ಬಿದ್ದು ಬ್ಲಾಸ್ಟ್ ಆಗಿದೆ. ಹಾಗಾದ್ರೆ, ಈ ವಿಮಾನ ಕೆಳಗೆ ಬೀಳಲು ಕಾರಣ ಏನು?
ವಿಮಾನ ಪತನಕ್ಕೆ ಕಾರಣ ಏನು?
ಅಂದಹಾಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಗರದಲ್ಲಿ ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತಕ್ಕೆ ಸ್ಪಷ್ಟ ಕಾರಣ ಇನ್ನೂ ಕನ್ಫರ್ಮ್ ಆಗಿಲ್ಲ. ಆದರೆ ತಾಂತ್ರಿಕ ದೋಷ ಹಿನ್ನೆಲೆ ವಿಮಾನ ಕೆಲವು ವಾರಗಳ ಹಿಂದಷ್ಟೇ ರಿಪೇರಿ ಕೂಡ ಆಗಿತ್ತು ಎಂಬ ಮಾಹಿತಿ ಸಿಗುತ್ತಿದೆ. ಇದರ ಜೊತೆಗೆ ವಿಮಾನದಲ್ಲಿ ಭಾರಿ ಪ್ರಮಾಣದ ಪೆಟ್ರೋಲ್ ಇದ್ದ ಕಾರಣ ಇದೀಗ ದೊಡ್ಡ ಸ್ಫೋಟ ಸಂಭವಿಸಿ, ಜೀವ ಹಾನಿ ಕೂಡ ದೊಡ್ಡ ಮಟ್ಟದಲ್ಲೇ ಆಗಿದೆ ಎನ್ನಲಾಗುತ್ತಿದೆ. ತನಿಖೆ ಆರಂಭವಾಗಿ, ಅಧಿಕಾರಿಗಳು ಕೂಡ ಸಾಕ್ಷ್ಯ ಸಂಗ್ರಹ ಮಾಡುತ್ತಿದ್ದಾರೆ. ಮತ್ತೊಂದು ಕಡೆ ವಿಮಾನದಲ್ಲಿ ಇದ್ದ 58,000 ಲೀಟರ್ ಪೆಟ್ರೋಲ್ ಒಂದೇ ಸಮಯಕ್ಕೆ ಹೊತ್ತಿ ಉರಿಯಲು ಶುರು ಮಾಡಿದ ಪರಿಣಾಮ ಜೀವಹಾನಿ ಮತ್ತಷ್ಟು ಹೆಚ್ಚಾಗಿರುವ ಆರೋಪ ಕೂಡ ಕೇಳಿ ಬಂದಿದೆ. ಸಂಪೂರ್ಣ ತನಿಖೆ ನಂತರ ಇನ್ನೇನು ಕೆಲವೇ ದಿನಗಳಲ್ಲಿ ಸ್ಪಷ್ಟ ಕಾರಣ ತಿಳಿಯುವ ಸಾಧ್ಯತೆ ಇದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications