Get Updates
Get notified of breaking news, exclusive insights, and must-see stories!

Ahmedabad Plane Crash: ಕಳೆದ ವಾರವೇ ದುರಂತದ ಬಗ್ಗೆ ಎಚ್ಚರಿಕೆ ಕೊಟ್ಟಿದ್ದ ಖ್ಯಾತ ಜ್ಯೋತಿಷಿ

ಗುಜರಾತ್ನ ಅಹಮ್ಮದಾಬಾದ್ನಲ್ಲಿ ನಿನ್ನೆ(ಜೂನ್‌ 12) ಸಂಭವಿಸಿರುವ ಭೀಕರ ಏರ್‌ ಇಂಡಿಯಾ ವಿಮಾನ ಅಪಘಾತದಲ್ಲಿ 241 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೇಘನಿ ನಗರ ಪ್ರದೇಶದಲ್ಲಿ ಪ್ರಯಾಣಿಕರು, ಸಿಬ್ಬಂದಿ ಸೇರಿ ಸುಮಾರು 242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಡಿದ್ದು, ಪ್ರಯಾಣ ಮಾಡುತ್ತಿದ್ದ 242 ಜನರಲ್ಲಿ 241 ಪ್ರಯಾಣಿಕರು ಮೃತಪಟ್ಟಿದ್ದು, ರಮೇಶ್‌ ವಿಶ್ವಾಸ್‌ ಎಂಬ ಓರ್ವ ಪ್ರಯಾಣಿಕ ಮಾತ್ರ ಬದುಕುಳಿದಿದ್ದಾರೆ.

242 ಜನರನ್ನು ಹೊತ್ತ ವಿಮಾನ ಟೇಕ್ ಆಫ್ ವೇಳೆ ಪತನಗೊಂಡಿದ್ದು, ಇದರ ಜೊತೆಗೆ ವಿಮಾನ ಅಪ್ಪಳಿಸಿರುವ ಕಟ್ಟಡದಲ್ಲಿ ಇದ್ದ ಜನರೂ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದಲ್ಲಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಹಾಗೂ 52 ಬ್ರಿಟಿಷ್‌ ಪ್ರಜೆಗಳು ಸೇರಿದಂತ ಹಲವರು ಕೂಡ ಪ್ರಯಾಣಿಸುತ್ತಿದ್ದರು. ತಾಂತ್ರಿಕ ದೋಷದ ಕಾರಣಕ್ಕೆ ಟೇಕ್‌ ಆಫ್ ಆದ 15 ಕಿ ಮೀಟರ್‌ ದೂರದಲ್ಲಿ 600 ರಿಂದ 700 ಅಡಿ ಎತ್ತರದಲ್ಲಿ ಹಾರಿರುವಾಗ ವಿಮಾನ ಪತನವಾಗಿದೆ. ಇನ್ನೂ ಈ ಘಟನೆ ಬಗ್ಗೆ ಕಾರಣ ಇದುವರೆಗೆ ತಿಳಿದುಬಂದಿಲ್ಲ. ಆದರೆ ಇದರ ನಡುವೆಯೇ ಖ್ಯಾತ ಜ್ಯೋತಿಷಿ ಶರ್ಮಿಷ್ಠಾ ಅವರು ಕಳೆದ ವಾರವೇ ಭವಿಷ್ಯ ನುಡಿದಿರುವುದು ಇದೀಗ ಎಚ್ಚರಿಕೆ ಕಾರಣವಾಗಿದೆ.

Air India Plane Crash This Astrologer Predicted Aviation Tragedy Weeks Before

ಖ್ಯಾತ ಜ್ಯೋತಿಷಿ ಶರ್ಮಿಷ್ಠಾ ಅವರು ಕಳೆದ ವಾರವೇ ಈ ದುರ್ಘನೆ ಬಗ್ಗೆ ಮುನ್ಸೂಚನೆ ಕೊಟ್ಟಿದ್ದರು. ಆದರೆ, ಆಗ ಈ ಸುದ್ದಿ ಅಷ್ಟು ಬೆಳಕಿಗೆ ಬಾರದಿದ್ದ ಅವರ ಈ ಟ್ವೀಟ್​ ಇದೀಗ ವೈರಲ್​ ಆಗುತ್ತಿದೆ. ಅದರಲ್ಲಿ ಶರ್ಮಿಷ್ಠಾ ಅವರು, ವಿಮಾನ ಅಪಘಾತ ಮತ್ತು ವಾಯುಯಾನ ವಲಯದಲ್ಲಿ ಸಂಭವನೀಯ ವಿನಾಶ ಎಂದು ಕಳೆದ ವಾರವೇ ಎಚ್ಚರಿಸಿದ್ದರು. ಕಳೆದ ತಿಂಗಳು ಅವರು ಗ್ರಹಗತಿಗಳನ್ನು ನೋಡಿ ಭಾರಿ ವಿಮಾನ ಅಪಘಾತದ ಮುನ್ಸೂಚನೆ ಇರುವುದಾಗಿ ತಿಳಿಸಿದ್ದರು.

ಕಳೆದ ವಾರ ಇನ್ನೊಂದು ಟ್ವೀಟ್​ ಮಾಡಿದ್ದ ಅವರು, ಗುರು, ಮೃಗಶಿರ ಮತ್ತು ಆರ್ದ್ರ ನಕ್ಷತ್ರದಲ್ಲಿದ್ದಾಗ, ವಾಯುಯಾನದಲ್ಲಿ ಅಭಿವೃದ್ಧಿ ಇರುತ್ತದೆ ಆದರೆ ಸುರಕ್ಷತೆ ಮತ್ತು ಸ್ಥಿರತೆಯ ಕೊರತೆ ಇರುತ್ತದೆ. ಭೀಕರ ಅಪಘಾತ ಸಂಭವಿಸುವ ಸಾಧ್ಯತೆಯ ಬಗ್ಗೆ ನನ್ನ ಕಳೆದ ತಿಂಗಳ ಮಾತಿಗೆ ಈಗಲೂ ಬದ್ಧಳಾಗಿದ್ದೇನೆ ಎಂದು ಖ್ಯಾತ ಜ್ಯೋತಿಷಿ ಶರ್ಮಿಷ್ಠಾ ಅವರು, ವಿಮಾನ ಅಪಘಾತಗಳು ಭಾರಿ ಸದ್ದು ಮಾಡುತ್ತವೆ, ಇದು ಹೆಡ್​ಲೈನ್​ ಆಗುತ್ತದೆ ಎಂದು ಶರ್ಮಿಷ್ಠಾ ಹೇಳಿದ್ದರು. ಇದೀಗ ದುರಂತದ ಬಳಿಕ ಮತ್ತೊಂದು ಟ್ವೀಟ್​ ಮಾಡಿರುವ ಅವರು, ಇಂದು ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ ನಾವು ಹಲವಾರು ಜೀವಗಳನ್ನು ಕಳೆದುಕೊಂಡಿರುವುದು ತುಂಬಾ ದುರದೃಷ್ಟಕರ. ಗುರು ಗ್ರಹವು ಇನ್ನೂ ಆರ್ದ್ರಾ ಪ್ರವೇಶಿಸಿಲ್ಲ, ಮತ್ತು ಭಾರತದ ಮಂಗಳ ಮಹಾದಶಾ ಇನ್ನೂ ಪ್ರಾರಂಭವಾಗಿಲ್ಲ - ಆದರೆ ಈಗಾಗಲೇ ಬಹಳಷ್ಟು ಪ್ರಾರಂಭವಾಗಿದೆ.ಇನ್ನೂ ಹೆಚ್ಚಿನವು ಇದೆ ಎಂದು ತಿಳಿಸಿದ್ದಾರೆ.

ಈ ವಿಮಾನವು ಅಹಮ್ಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ ಗೆ ತೆರಳುತ್ತಿತ್ತು. ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ತಾಂತ್ರಿಕ ದೋಷದಿಂದ ಪತನಗೊಂಡಿದೆ. ಅಪಘಾತದ ಕಾರಣವನ್ನು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. AI-171 ನಂಬರ್‌ ನ ಬೋಯಿಂಗ್ -787-8 ಮಾದರಿಯ ವಿಮಾನ 1.10ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನ 1.38ಕ್ಕೆ ತಡವಾಗಿ ಟೇಕ್‌ ಆಫ್‌ ಆಗಿದೆ ಎಂದು ವರದಿಗಳು ತಿಳಿಸಿವೆ. ಸುಮಾರು ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ದಟ್ಟ ಹೊಗೆ ಆವರಿಸಿತ್ತು, ಅಲ್ಲದೇ ಹಲವು ಸಾವು-ನೋವುಗಳು ಸಂಭವಿಸಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+