ಅಪಾಯಕಾರಿ ಹಂತಕ್ಕೆ ತಲುಪಿದ ದೆಹಲಿ ವಾಯುಮಾಲಿನ್ಯ ಪ್ರಮಾಣ
ನವದೆಹಲಿ, ನವೆಂಬರ್, 3: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿ ಗುರುವಾರ ಬೆಳಿಗ್ಗೆ ದಟ್ಟವಾದ ಹೊಗೆ ಕಾಣಿಸಿಕೊಂಡಿದೆ. ಈ ಮೂಲಕ ದೆಹಲಿಯ ವಾಯುಮಾಲಿನ್ಯ ಪ್ರಮಾಣವು ಅಪಾಯಕಾರಿ ಹಂತಕ್ಕೆ ತಲುಪಿದೆ.
ನೆರೆಯ ರಾಜ್ಯಗಳಲ್ಲಿ ಕೃಷಿ ಬೆಳೆಗಳ ನಿರುಪಯೋಗ ತಾಜ್ಯವನ್ನು ಸುಡಲಾಗುತ್ತಿದೆ. ಹೊಗೆ ಉಗುಳುವ ವಾಹನಗಳಿಂದ ಗಾಳಿಯು ಮಲಿನಗೊಂಡಿದೆ. ಇದರ ಪರಿಣಾಮವಾಗಿ ದೆಹಲಿಯಲ್ಲಿ ವಾಯುಮಾಲಿನ್ಯ ಪ್ರಮಾಣ ತೀವ್ರ ಹೆಚ್ಚಳ ಕಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದೆಹಲಿಯಲ್ಲಿ ಗಾಳಿಯ ಗುಣಮಟ್ಟದ ಸೂಚ್ಯಂಕ 408 (AQI)ಕ್ಕೆ ತಲುಪಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಾಲಿನ್ಯದ ಹೆಚ್ಚಳಕ್ಕೆ ಪ್ರತಿಕೂಲವಾದ ಹವಾಮಾನ ಪರಿಸ್ಥಿತಿಗಳೂ ಕಾರಣವಾಗಿವೆ ಎಂದು ಇಲಾಖೆ ಹೇಳಿದೆ.
ಚಳಿಗಾಲ ಆರಂಭವಾಗಿದ್ದರಿಂದ ಗಾಳಿಯಲ್ಲಿ ಅತಿಯಾದ ತೇವಾಂಶವಿದೆ. ಈ ತೇವಾಂಶವು ಧೂಳಿನ ಕಣಗಳನ್ನು ಹಿಡಿದಿಟ್ಟುಕೊಳ್ಳುವುದರಿಂದಲೂ ಗಾಳಿಯ ಗುಣಮಟ್ಟ ಕುಸಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ದೆಹಲಿಯ ವಿಷಕಾರಿ ಗಾಳಿಯನ್ನು ಸೇವಿಸುತ್ತಿರುವ ಕೆಲವು ನಿವಾಸಿಗಳು ಆರೋಗ್ಯ ತೊಂದರೆ ಎದುರಿಸುತ್ತಿದ್ದಾರೆ. ವಯಸ್ಸಾದ ಹಿರಿಯರು ಹಾಗೂ ಶಾಲೆಗೆ ತೆರಳುವ ಮಕ್ಕಳು ಹೆಚ್ಚು ಆರೋಗ್ಯ ಸಮಸ್ಯೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ವರದಿ ಆಗಿದೆ.
ವಿಷಕಾರಿ ಗಾಳಿಗೆ ದೀರ್ಘ ಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಮಕ್ಕಳಿಗೆ ತೊಂದರೆ ಉಂಟಾಗುತ್ತದೆ. ವಿಶೇಷವಾಗಿ ಮಕ್ಕಳು ಬೆಳಿಗ್ಗೆ ಶಾಲೆಗಳಿಗೆ ಹೊರಡುವ ಸಮಯದಲ್ಲಿ ಸಂಕಷ್ಟಕ್ಕೆ ಗುರಿಯಾಗುವ ಸಾಧ್ಯತೆ ಹೆಚ್ಚಿದೆ ಎಂದು ತಜ್ಞ ವೈದ್ಯರು ಅಭಿಪ್ರಾಯಪಟ್ಟಿದ್ದಾರೆ.

ದೆಹಲಿಯ ವಾಯು ಗುಣಮಟ್ಟ ಕುಸಿದ ಹಿನ್ನೆಲೆಯಲ್ಲಿ ಶಾಲೆಗಳನ್ನು ಮುಚ್ಚಬೇಕೆಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಒತ್ತಾಯಿಸಿದೆ.
ಶಾಲೆಗಳನ್ನು ಮುಚ್ಚುವ ಬದಲು ಮಾಲಿನ್ಯ ಮಟ್ಟವನ್ನು ತಡೆಗಟ್ಟಲು ಅಧಿಕಾರಿಗಳು ದೀರ್ಘಾವಧಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಪೋಷಕರು ಹೇಳಿದ್ದಾರೆ.
'ಶಾಲೆಗಳನ್ನು ಮುಚ್ಚುವುದು ಪರಿಹಾರವಲ್ಲ, ಮಾಲಿನ್ಯ ಮಟ್ಟವನ್ನು ತಡೆಯಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು' ಎಂದು ಮಹಿಳೆಯೊಬ್ಬರು ಎನ್ಡಿಟಿವಿಗೆ ತಿಳಿಸಿದ್ದಾರೆ.

ವಾಯು ಗುಣಮಟ್ಟ ಸೂಚ್ಯಂಕ ಪ್ರಮಾಣ
0 ಯಿಂದ 5 - ಉತ್ತಮ
51 -100 - ಸಮಾಧಾನಕರ
101 - 200 - ಮಧ್ಯಮ
201 - 300 - ಕಳಪೆ
301 - 400 - ಅತಿ ಕಳಪೆ
401- 500 - ಅತ್ಯಂತ ಅಪಾಯಕಾರಿ
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications