ದೆಹಲಿ: ಗಾಳಿ ಗುಣಮಟ್ಟ ಹದಗೆಡುವ ಸಾಧ್ಯತೆ: ನಿರ್ಮಾಣ, ಕೈಗಾರಿಕಾ ಕೆಲಸಗಳಿಗೆ ನಿರ್ಬಂಧ
ನವದೆಹಲಿ, ಡಿ. 30: ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಡುವ ಸಾಧ್ಯತೆಯಿರುವ ಕಾರಣ ಶುಕ್ರವಾರ ನಿರ್ಮಾಣ, ಕೈಗಾರಿಕಾ ಕೆಲಸಗಳಿಗೆ ನಿರ್ಬಂಧ ಹೇರಲಾಗಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟವು ಹದಗೆಡಬಹುದು ಎಂದು ಕೇಂದ್ರದ ವಾಯು ಗುಣಮಟ್ಟ ಸಮಿತಿಯು ಶುಕ್ರವಾರ ಗ್ರೇಡೆಡ್ ಆಕ್ಷನ್ ರೆಸ್ಪಾನ್ಸ್ ಪ್ಲಾನ್ (GRAP) ಯ 3 ನೇ ಹಂತದ ಅಡಿಯಲ್ಲಿ ನಿರ್ಬಂಧಗಳನ್ನು ಜಾರಿಗೆ ತಂದಿದೆ. ದೆಹಲಿ ಮತ್ತು ಅದರ ಅಕ್ಕಪಕ್ಕದ ಪ್ರದೇಶಗಳಲ್ಲಿನ ಗಾಳಿಯ ಗುಣಮಟ್ಟವನ್ನು 'ತೀವ್ರ' (Severe) ವರ್ಗಕ್ಕೆ ಸೇರಿಸಲಾಗಿದೆ.
ಶುಕ್ರವಾರ ನಡೆದ ಸಭೆಯಲ್ಲಿ, ಕೇಂದ್ರದ ವಾಯು ಗುಣಮಟ್ಟ ಸಮಿತಿಯು ರಾಷ್ಟ್ರ ರಾಜಧಾನಿಯಲ್ಲಿನ ಪರಿಸ್ಥಿತಿ ಮತ್ತು ಹವಾಮಾನ ಇಲಾಖೆ ಮತ್ತು ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕದ ಮುನ್ಸೂಚನೆಗಳನ್ನು ಮೌಲ್ಯಮಾಪನ ಮಾಡಿದೆ.

ಗ್ರೇಡೆಡ್ ಆಕ್ಷನ್ ರೆಸ್ಪಾನ್ಸ್ ಪ್ಲಾನ್ನ ಹಂತ 3 ರ ಅಡಿಯಲ್ಲಿ ಎಲ್ಲಾ ನಿರ್ಬಂಧಗಳು, ಕ್ರಮಗಳನ್ನು ತಕ್ಷಣವೇ ಜಾರಿಗೆ ತರಲಾಗುವುದು. ಅಗತ್ಯ ಯೋಜನೆಗಳನ್ನು ಹೊರತುಪಡಿಸಿ ಇಡೀ ದೆಹಲಿ - ಎನ್ಸಿಆರ್ ಪ್ರದೇಶದಲ್ಲಿ ನಿರ್ಮಾಣ ಮತ್ತು ಕಟ್ಟಡ ನೆಲಸಮ ಮಾಡುವ ಚಟುವಟಿಕೆಯ ಮೇಲೆ ನಿಷೇಧ ಹೇರಲಾಗಿದೆ.
ಈ ಪ್ರದೇಶಗಗಳಿಗೆ ಅನುಮೋದಿತ ಇಂಧನಗಳ ಪ್ರಮಾಣಿತ ಪಟ್ಟಿಯಲ್ಲಿರುವಂತೆ ಇಂಧನಗಳ ಮೇಲೆ ಕಾರ್ಯನಿರ್ವಹಿಸದ ಕೈಗಾರಿಕಾ ಕಾರ್ಯಾಚರಣೆಗಳ ಮೇಲೆಯೂ ನಿಷೇಧ ಹಾಕಲಾಗಿದೆ.
ಇಟ್ಟಿಗೆ ಗೂಡುಗಳು, ದೆಹಲಿ ಮತ್ತು ಅದರ ಪಕ್ಕದ ಪ್ರದೇಶಗಳಲ್ಲಿ ಅನುಮೋದಿಸದ ಇಂಧನಗಳನ್ನು ಬಳಸಿ ಕಾರ್ಯನಿರ್ವಹಿಸುವ ಘಟಕಗಳು ಕಾರ್ಯಾಚರಣೆಯನ್ನು ನಿಲ್ಲಿಸಬೇಕಾಗುತ್ತದೆ. ಕಲ್ಲು ಕ್ರಷರ್ಗಳು, ಗಣಿಗಾರಿಕೆ ಮತ್ತು ಸಂಬಂಧಿತ ಚಟುವಟಿಕೆಗಳನ್ನು ಸಹ ನಿಷೇಧಿಸಲಾಗುವುದು.
ಇನ್ನು, ರಾಜ್ಯ ಸರ್ಕಾರಗಳು ಹಳೆಯ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮೇಲೆ ನಿರ್ಬಂಧಗಳನ್ನು ವಿಧಿಸಬಹುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications