ಸರಣಿ ಸಭೆ ನಡೆಸಿದ ಮೋದಿ, ಮೂರು ಸೇನೆಗಳಿಗೆ ಒಂದೇ ಸಂದೇಶ
Recommended Video
ನವದೆಹಲಿ, ಫೆಬ್ರವರಿ 27 : ಪುಲ್ವಮಾ ದಾಳಿ, ಭಾರತದ ವಾಯುಪಡೆಯ ಏರ್ ಸ್ಟ್ರೈಕ್, ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ. ಹಲವಾರು ಬೆಳವಣಿಗೆಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಸರಣಿ ಸಭೆಗಳನ್ನು ನಡೆಸಿದರು.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿರ್ ಧೋವಲ್, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್, ಗುಪ್ತಚರ ಇಲಾಖೆ ಅಧಿಕಾರಿಗಳು, ಮೂರು ಸೇನೆಗಳ ಮುಖ್ಯಸ್ಥರ ಜೊತೆ ನರೇಂದ್ರ ಮೋದಿ ಸರಣಿ ಸಭೆಗಳನ್ನು ಮಾಡಿದರು.
ಪಾಕ್ ವಶದಲ್ಲಿ ಅಭಿನಂದನ್ ಸುರಕ್ಷಿತವಾಗಿದ್ದಾರೆ, ನಿರಾತಂಕವಾಗಿದ್ದಾರೆ
ಎಲ್ಲಾ ಸಭೆಗಳ ತೀರ್ಮಾನ ಒಂದೇ ಆಗಿತ್ತು. ಭೂ, ವಾಯು ಮತ್ತು ನೌಕಾಪಡೆಗೆ ಸಂಪೂರ್ಣ ಸ್ವತಂತ್ರ ನೀಡಲಾಗಿದೆ. ಮುಂದಿನ ನಡೆಗಳ ಬಗ್ಗೆ ಅವರು ತೀರ್ಮಾನವನ್ನು ಕೈಗೊಳ್ಳಬಹುದು. ಸರಿಯಾದ ಸಮಯದಲ್ಲಿ ತಕ್ಕ ಉತ್ತರ ನೀಡಬೇಕು.
ಪೈಲೆಟ್ ನಾಪತ್ತೆ ಬಗ್ಗೆ ಪಾಕಿಸ್ತಾನ ನೀಡಿದ ಉತ್ತರವೇನು?
ಬುಧವಾರ ಬೆಳಗ್ಗೆಯಿಂದ ಹಲವಾರು ಬೆಳವಣಿಗೆಗಳು ನಡೆದವು. ಪಾಕಿಸ್ತಾನದ ವಿಮಾನಗಳು ಭಾರತವನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಲು ಮುಂದಾಗಿದ್ದವು. ಪಾಕಿಸ್ತಾನದ ವಿಮಾನಗಳನ್ನು ಹಿಮ್ಮೆಟ್ಟಿಸಲು ಶ್ರೀನಗರದ ವಾಯುನೆಲೆಯಿಂದ 6 ಮಿಗ್ 21 ವಿಮಾನಗಳನ್ನು ಕಳುಹಿಸಲಾಗಿತ್ತು.
ಒಬ್ಬ ಪೈಲೆಟ್ ನಮ್ಮ ವಶದಲ್ಲಿ ಎಂದು ಹೇಳಿದ ಪಾಕಿಸ್ತಾನ
ಆದರೆ, 5 ವಿಮಾನಗಳು ಮಾತ್ರ ವಾಪಸ್ ಆದವು. ಒಂದು ವಿಮಾನ ಕಳೆದುಕೊಳ್ಳಲಾಯಿತು. ಭಾರತದ ವಾಯುಪಡೆಯ ಪೈಲೆಟ್ ಅನ್ನು ಪಾಕಿಸ್ತಾನ ವಶಕ್ಕೆ ಪಡೆಯಿತು. ಪಾಕಿಸ್ತಾನದ ಎಫ್ -16 ವಿಮಾನವನ್ನು ಭಾರತ ಹೊಡೆದುರುಳಿಸಿದೆ.