ಮಾರನ್ ಗೆ ಮತ್ತೆ ಹಿನ್ನಡೆ, ಸುಪ್ರೀಂಗೆ 'ಇಡಿ' ಮೇಲ್ಮನವಿ
ಟೆಲಿಕಾಂ ಹಗರಣಕ್ಕೆ ಸಂಬಂಧಿಸಿದಂತೆ ದಯಾನಿಧಿ ಮಾರನ್ ಸೇರಿದಂತೆ ಎಲ್ಲಾ 6 ಮಂದಿಗೆ ವಿಶೇಷ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ.
ನವದೆಹಲಿ, ಫೆಬ್ರವರಿ 03: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣದ ಆರೋಪದಲ್ಲಿ ಸಿಲುಕಿದ್ದ ಮಾಜಿ ದೂರಸಂಪರ್ಕ ಖಾತೆ ಸಚಿವ ದಯಾನಿಧಿ ಮಾರನ್ ಸೇರಿದಂತೆ ಎಲ್ಲಾ 6 ಮಂದಿಗೆ ವಿಶೇಷ ನ್ಯಾಯಾಲಯದಿಂದ ಗುರುವಾರ ಬಿಗ್ ರಿಲೀಫ್ ಸಿಕ್ಕಿತ್ತು. ಆದರೆ, ವಿಶೇಷ ಸಿಬಿಐ ನ್ಯಾಯಾಲಯ ಕ್ಲೀನ್ ಚಿಟ್ ನೀಡಿರುವುದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ (ಇಡಿ) ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಆಸ್ತಿಗಳನ್ನು ಮಾರನ್ ಸಹೋದರರಿಗೆ ಹಿಂದಿರುಗಿಸಬಾರದು ಎಂದು ಜಾರಿ ನಿರ್ದೇಶನಾಲಯ ತನ್ನ ಅರ್ಜಿಯಲ್ಲಿ ತಿಳಿಸಿದೆ. ಈ ಅರ್ಜಿ ವಿಚಾರಣೆಯನ್ನು ಫೆಬ್ರವರಿ 8 ರಂದು ಸುಪ್ರೀಂಕೋರ್ಟ್ ಕೈಗೆತ್ತಿಕೊಳ್ಳಲಿದೆ.

ಮಾರನ್ ಸಹೋದರರ ವಿರುದ್ಧ ಪ್ರಬಲ ಸಾಕ್ಷ್ಯಾಧಾರಗಳು ಇಲ್ಲ ಎಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಒ.ಪಿ.ಸೈನಿ ತಿಳಿಸಿದ್ದರು ಮತ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿಸಿ ಮಾರನ್ ಸಹೋದರರ ಸಹಿತ ಎಲ್ಲಾ ಆರೋಪಿಗಳನ್ನೂ ಖುಲಾಸೆ ಗೊಳಿಸಿದ್ದರು.[ಮ್ಯಾಕ್ಸಿಸ್ ಸಂಸ್ಥೆಗೆ ನಿರ್ಬಂಧ ಹೇರಿದ ಸುಪ್ರೀಂಕೋರ್ಟ್]
ಯುಪಿಎ ಆಡಳಿತಾವಧಿಯಲ್ಲಿ ದಯಾನಿಧಿ ಮಾರನ್ ಟೆಲಿಕಾಂ ಸಚಿವರಾಗಿದ್ದಾಗ ಏರ್ ಸೆಲ್ ಕಂಪನಿಯನ್ನು ಮಲೇಷ್ಯಾದ ಮ್ಯಾಕ್ಸಿಸ್ ಕಂಪನಿ ವಿಲೀನಗೊಳಿಸಿಕೊಳ್ಳಲು ಪ್ರಸ್ತಾವನೆ ಸಲ್ಲಿಸಿತ್ತು. ಈ ಸಂಬಂಧ ಮಾರನ್ 742.58 ಕೋಟಿ ರೂ. ಲಂಚ ಪಡೆದಿದ್ದಾರೆ ಎಂದು ಸಿಬಿಐ ಮತ್ತು ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸಿಕೊಂಡು ಚಾರ್ಜ್ ಶೀಟ್ ಹಾಕಿವೆ.
ಈ ಪ್ರಕರಣದಲ್ಲಿ ಕಲಾನಿಧಿ ಮಾರನ್ ಪತ್ನಿ ಕಾವೇರಿ, ಸೌತ್ ಏಷ್ಯಾ ಎಫ್ ಎಂ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಕೆ ಷಣ್ಮುಗಂ, ಸನ್ ಡೈರೆಕ್ಟ್ ಪ್ರೈ ಲಿಮಿಟೆಡ್ ವಿರುದ್ಧ ಮನಿ ಲಾಂಡ್ರಿಂಗ್ ಕಾಯ್ದೆ ಉಲ್ಲಂಘನೆ ಆರೋಪ ಹೊರೆಸಲಾಗಿದೆ.(ಒನ್ಇಂಡಿಯಾ ಸುದ್ದಿ)
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications