ಮಾರನ್ 700 ಪ್ಲಸ್ ಕೋಟಿ ಆಸ್ತಿ 'ಇಡಿ' ವಶಕ್ಕೆ
ನವದೆಹಲಿ, ಏ.1: ಏರ್ ಸೆಲ್ ಕಂಪನಿಗೆ 2ಜಿ ತರಂಗಾಂತರ ಗುಚ್ಛ ಕೊಡಿಸಲು ಲಂಚ ಪಡೆದಿರುವ ಆರೋಪ ಹೊತ್ತಿರುವ ಮಾಜಿ ಕೇಂದ್ರ ಟೆಲಿಕಾಂ ಸಚಿವ ದಯಾನಿಧಿ ಮಾರನ್ ಅವರಿಗೆ ಜಾರಿ ನಿರ್ದೇಶನಾಲಯ ಏ.1 ರಂದು ದೊಡ್ಡ ಆಘಾತ ನೀಡಿದೆ.
ಏರ್ ಸೆಲ್ ಮ್ಯಾಕ್ಸಿಸ್ ಒಪ್ಪಂದದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ ದಯಾನಿಧಿ ಮಾರನ್ ಅವರ 742 ಕೋಟಿ ರು ಮೌಲ್ಯದ ಆಸ್ತಿ ಜಪ್ತಿ ಮಾಡಿಕೊಂಡಿದೆ. [ಮಾರನ್ ಪರಮಾಪ್ತರಿಗೆ ಸಿಬಿಐ ಹೊಡೆತ]
ಸಿಬಿಐ ಚಾರ್ಜ್ ಶೀಟ್: 2004 ಹಾಗೂ 2007ರಲ್ಲಿ ಕೇಂದ್ರ ಟೆಲಿಕಾಂ ಸಚಿವರಾಗಿದ್ದ ದಯಾನಿಧಿ ಮಾರನ್ ಅವರು ಏರ್ ಸೆಲ್ ಗೆ ತರಂಗ ಗುಚ್ಛ ಗುತ್ತಿಗೆ ಸಿಗುವಂತೆ ಮಾಡಿದ್ದರು. ಇದಕ್ಕೆ ಬದಲಾಗಿ ಮಲೇಷಿಯಾ ಮೂಲದ ಮ್ಯಾಕ್ಸಿಸ್ ಕಮ್ಯೂನಿಕೇಷನ್ ಸಂಸ್ಥೆ ಸನ್ ನೆಟ್ವರ್ಕ್ ಮಾರಲು ಮಾರನ್ ಮುಂದಾಗಿದ್ದರು.ಸನ್ ನೆಟ್ವರ್ಕ್ ನಲ್ಲಿ ಮ್ಯಾಕ್ಸಿಸ್ 69 ಕೋಟಿ ರು ಹೂಡಿಕೆ ಮಾಡಿತ್ತು ಎನ್ನಲಾಗಿದೆ.

ಲಂಚಕ್ಕೆ ಸಾಕ್ಷಿ ಸಿಕ್ಕಿತ್ತು: ಸುಮಾರು 549,96,01,793 ಲಂಚ ರೂಪದಲ್ಲಿ ಪಡೆದು ಸನ್ ಡೈರೆಕ್ಟ್ ನಲ್ಲಿ ಬಂಡವಾಳ ರೂಪದಲ್ಲಿ ಹೂಡಲಾಗಿತ್ತು. ಆಸ್ಟ್ರೋ ಆಲ್ ಏಷ್ಯಾ ನೆಟ್ವರ್ಕ್ಸ್ ಒಡೆತನದ ಸೌಥ್ ಏಷ್ಯಾ ಎಂಟರ್ ಟ್ರೈನ್ ಮೆಂಟ್ ಹೋಲಿಂಗ್ಸ್ ಹಣ ಪಾವತಿಸಿರುವ ಬಗ್ಗೆ ಮಾಹಿತಿ, ಪುರಾವೆ ಸಿಕ್ಕಿತು. ಬಹುಕೋಟಿ ಟೆಲಿಕಾಂ ಹಗರಣದಲ್ಲಿ ಆರೋಪಗಳು ಕೇಳಿ ಬಂದ ನಂತರ ಕೇಂದ್ರ ಜವಳಿ ಖಾತೆಗೆ ದಯಾನಿಧಿ ಮಾರನ್ ರಾಜೀನಾಮೆ ನೀಡಿದ್ದರು.
ಚೆನ್ನೈನ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ದೂರವಾಣಿ ಸಂಪರ್ಕ ಪಡೆದು ನಂತರ ಸೋದರ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್ವರ್ಕ್ ಕಚೇರಿಗೆ ನೀಡಲಾಗಿತ್ತು ಎಂಬ ಆರೋಪ ಮಾರನ್ ಸೋದರರು ಹೊತ್ತಿದ್ದರು. ಇದರ ಜೊತೆಗೆ ಏರ್ ಸೆಲ್ ಹಾಗೂ ಮಾಕ್ಸಿಸ್ ಒಪ್ಪಂದ, 2ಜಿ ಹಗರಣ, ಟೆಲಿಕಾಂ ನಿಯಮ ಉಲ್ಲಂಘನೆ ಮುಂತಾದ ಆರೋಪಗಳು ಮಾರನ್ ವಿರುದ್ಧ ಕೇಳಿ ಬಂದಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ












Click it and Unblock the Notifications