ಪ್ರಧಾನಿ ವಿರುದ್ಧ 'ನೀಚ' ಪದಬಳಕೆ, ಕ್ಷಮೆ ಕೋರಿದ ಮಣಿಶಂಕರ್ ಅಯ್ಯರ್
ನವದೆಹಲಿ, ಡಿಸೆಂಬರ್ 7: ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ನೀಚ' ಪದ ಬಳಕೆ ಮಾಡಿ ಭಾರೀ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಕ್ಷಮೆ ಕೇಳಿದ್ದಾರೆ.
ತಪ್ಪು ಪದ ಪ್ರಯೋಗಕ್ಕೆ ಕ್ಷಮೆ ಕೇಳಿರುವ ಮಣಿ ಶಂಕರ್ ಅಯ್ಯರ್ ಹಿಂದಿ ನನ್ನ ಮಾತೃ ಭಾಷೆಯಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನಾನು ಜಾತಿಯನ್ನು ಉಲ್ಲೇಖಿಸಿ ಈ ಪದ ಪ್ರಯೋಗಿಸಿರಲಿಲ್ಲ. ಹಿಂದಿಯಲ್ಲಿ ಈ ಪದಕ್ಕೆ ಬೇರೆ ಅರ್ಥವಿದೆ ಎಂದು ತಿಳಿದಿರಲಿಲ್ಲ ಎಂದು ಅಯ್ಯರ್ ವಿವರಿಸಿದ್ದಾರೆ.
ಇದೇ ವೇಳೆ ತಾವು ಮೋದಿಯವರನ್ನು ಚಾಯ್ ವಾಲಾ ಎಂದು ಕರೆದಿಲ್ಲ. ನೀವು ಬೇಕಾದರೆ ಇಂಟರ್ನೆಟ್ ಗೆ ಹೋಗಿ ನನ್ನೆಲ್ಲಾ ವಿಡಿಯೋಗಳನ್ನು ನೋಡಬಹುದು ಎಂದು ಅಯ್ಯರ್ ಸವಾಲು ಹಾಕಿದ್ದಾರೆ.

ರಾಹುಲ್ ಟೀಕೆ
ಕಾಂಗ್ರೆಸ್ ಪಕ್ಷದ ಮೇಲೆ ದಾಳಿ ಮಾಡಲು ಬಿಜೆಪಿ ಮತ್ತು ಪ್ರಧಾನ ಮಂತ್ರಿಯವರು ಕೊಳಕಾದ ಭಾಷೆಯನ್ನು ಬಳಸುತ್ತಾರೆ. ಆದರೆ ಕಾಂಗ್ರೆಸ್ ವಿಭಿನ್ನ ಸಂಸ್ಕೃತಿ ಮತ್ತು ಪರಂಪರೆಯನ್ನು ಹೊಂದಿದೆ. ಪ್ರಧಾನಿಗೆ ಮನವಿ ಮಾಡಲು ಶ್ರೀ ಮಣಿ ಶಂಕರ್ ಅಯ್ಯರ್ ಅವರು ಬಳಸಿದ ಭಾಷೆ ಮತ್ತು ಟೋನ್ ನ್ನು ನಾನು ಪ್ರಶಂಸಿಸುವುದಿಲ್ಲ. ರಾಹುಲ್ ಗಾಂಧಿ ಅವರು ಹೇಳಿದ್ದಕ್ಕಾಗಿ ಕ್ಷಮೆ ಕೇಳಬೇಕೆಂದು ಕಾಂಗ್ರೆಸ್ ಮತ್ತು ನಾನು ಎರಡೂ ನಿರೀಕ್ಷಿಸುತ್ತೇವೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.

ಲಾಲೂ ಟೀಕೆ
ಮಣಿಶಂಕರ್ ಅಯ್ಯರ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಆರ್.ಜೆ.ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಕಿಡಿಕಾರಿದ್ದಾರೆ.
|
ಮೋದಿ ಪ್ರತ್ಯುತ್ತರ
ನನಗೆ 'ನೀಚ' ಎಂದು ಕರೆಯುವ 'ಬುದ್ಧಿವಂತ' ಕಾಂಗ್ರೆಸ್ ನಾಯಕನ ಬಗ್ಗೆ ನಾನು ಹೇಳಲು ಇಚ್ಛಿಸುವುದಿಲ್ಲ. ಕಾಂಗ್ರೆಸಿನ ಮನಸ್ಥಿತಿ ಹಾಗೆಯೇ. ಅವರಿಗೆ ಅವರ ಭಾಷೆ ಇದೆ ಮತ್ತು ನಮಗೆ ನಮ್ಮ ಕೆಲಸ ಇದೆ. ಇದಕ್ಕೆ

ಮಣಿಶಂಕರ್ ಅಯ್ಯರ್ ಹೇಳಿದ್ದೇನು?
ಡಾ. ಬಿ. ಆರ್ ಅಂಬೇಡ್ಕರ್ ಅವರು ಕಂಡ ಕನಸನ್ನು ನನಸಾಗಿಸಲು ಶ್ರಮಿಸಿದವರಲ್ಲಿ ಜವಹರಲಾಲ್ ನೆಹರೂ ಅಗ್ರಗಣ್ಯರು. ದೇಶಕ್ಕಾಗಿ ದುಡಿದ ಇಂಥ ಕುಟುಂಬದ ಬಗ್ಗೆ ಕೆಟ್ಟದಾಗಿ ಮಾತನಾಡುವ ಇಂಥ ವ್ಯಕ್ತಿ(ಮೋದಿ)ಯನ್ನು ನೀಚ ಎನ್ನದೇ ಇರಲಾಗದು, ಆತನಿಗೆ ಯಾವುದೇ ನಾಗರಿಕ ಸಭ್ಯತೆಗಳಿಲ್ಲ. ಅತ್ಯಂತ ಹೀನಾಯ ರೀತಿಯ ರಾಜಕೀಯವನ್ನುಅವರು ಮಾಡುತ್ತಿದ್ದಾರೆ ಎಂದು 'ಎಎನ್ಐ' ಸುದ್ದಿಸಂಸ್ಥೆಗೆ ಮಣಿಶಂಕರ್ ಅಯ್ಯರ್ ಪ್ರತಿಕ್ರಿಯೆ ನೀಡಿದ್ದರು.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications