Governor: ಮಣಿಪುರ, ಮಿಜೋರಾಂ ಸೇರಿ ಐದು ರಾಜ್ಯಗಳಿಗೆ ರಾಜ್ಯಪಾಲರ ನೇಮಕ
ಜನಾಂಗೀಯ ಸಂಘರ್ಷ ನಡೆಯುತ್ತಿರುವ ಮಣಿಪುರ ಸೇರಿದಂತೆ ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಕ ಮಾಡಲಾಗಿದೆ. ರಾಷ್ಟ್ರಪತಿಗಳು ಐದು ರಾಜ್ಯಗಳಿಗೆ ರಾಜ್ಯಪಾಲರನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಮಾಜಿ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮಣಿಪುರ ರಾಜ್ಯದ ಗವರ್ನರ್ ಆಗಿ ನೇಮಕಗೊಂಡಿದ್ದಾರೆ. ಮಾಜಿ ಸೇನಾ ಮುಖ್ಯಸ್ಥ ವಿಕೆ ಸಿಂಗ್ ಮಿಜೋರಾಂ ರಾಜ್ಯದ ರಾಜ್ಯಪಾಲರಾಗಿ ನೇಮಕವಾಗಿದ್ದಾರೆ.
ಹಿಂದೂ ಮೈತೇಯಿ ಮತ್ತು ಕುಕಿ ಕ್ರಿಶ್ಚಿಯನ್ ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ನಡೆಯುತ್ತಿದ್ದು ರಾಜ್ಯದಲ್ಲಿ ರಾಜಕೀಯ ಅನಿಶ್ಚಿತತೆಯ ನಡುವೆ ಹೊಸ ರಾಜ್ಯಪಾಲರ ನೇಮಕ ಮಾಡಲಾಗಿದೆ. ಮಾಜಿ ಸಚಿವ ಮತ್ತು ನಿವೃತ್ತ ಸೇನಾ ಮುಖ್ಯಸ್ಥ ವಿಕೆ ಸಿಂಗ್ ಅವರನ್ನು ಮಿಜೋರಾಂ ರಾಜ್ಯದ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ಕೇರಳ ಮತ್ತು ಬಿಹಾರ ರಾಜ್ಯಪಾಲರಿಗೆ ರಾಜ್ಯಗಳನ್ನು ವಿನಿಮಯ ಮಾಡಲಾಗಿದೆ. ಕೇರಳ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ರನ್ನು ಬಿಹಾರ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದ್ದು, ಬಿಹಾರ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಕೇರಳ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.
ಒಡಿಶಾ ರಾಜ್ಯಪಾಲ ರಘುಬರ್ ದಾಸ್ ನೀಡಿದ್ದ ರಾಜೀನಾಮೆಯನ್ನು ರಾಷ್ಟ್ರಪತಿ ಅಂಗೀಕರಿಸಿದ್ದು, ಅವರ ಸ್ಥಾನಕ್ಕೆ ಮಿಜೋರಾಂ ರಾಜ್ಯಪಾಲ ಡಾ ಹರಿಬಾಬು ಕಂಬಂಪತಿ ಅವರನ್ನು ನೇಮಿಸಲಾಗಿದೆ.
ಮಣಿಪುರಕ್ಕೆ ಅಜಯ್ ಕುಮಾರ್ ಭಲ್ಲಾ
ಅಸ್ಸಾಂ ಮೇಘಾಲಯ ಕೇಡರ್ನ 1984-ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದ ಅಜಯ್ ಕುಮಾರ್ ಭಲ್ಲಾ ಹಲವು ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ. 2019ರಲ್ಲಿ ಕೇಂದ್ರ ಗೃಹ ಕಾರ್ಯದರ್ಶಿಯಾಗಿ ನೇಮಕಗೊಂಡ ಅವರು ಐದು ವರ್ಷಗಳ ಕಾಲ ಅಂದರೆ 2024ರವರೆಗೆ ಕರ್ತವ್ಯ ನಿಭಾಯಿಸಿದ್ದಾರೆ.
ಕೇರಳ ರಾಜ್ಯಪಾಲರ ನೇಮಕ ವಿವಾದ
ಕೇರಳ ಆಡಳಿತಾರೂಢ ಸರ್ಕಾರ ಮತ್ತು ರಾಜ್ಯಪಾಲರ ನಡುವ ವೈಮನಸ್ಸು ಉಂಟಾಗಿತ್ತು. ಮಂಗಳವಾರ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಯೋಜಿಸಿದ್ದ ಕ್ರಿಸ್ಮಸ್ ಆಚರಣೆಗೆ ಸತತ ಎರಡನೇ ವರ್ಷವೂ ಕೇರಣ ಸಿಎಂ ಪಿಣರಾಯಿ ವಿಜಯನ್ ಮತ್ತು ಸರ್ಕಾರದ ಸಚಿವರು ಗೈರು ಹಾಜರಾಗಿದ್ದರು. ವಿಶ್ವವಿದ್ಯಾಲಯಗಳಿಗೆ ಮಾಡಿದ ನೇಮಕಾತಿಗಳ ವಿಚಾರದಲ್ಲಿ ರಾಜ್ಯಪಾಲರು ಮತ್ತು ಅಧಿಕಾರದಲ್ಲಿರುವ ಸಿಪಿಐ(ಎಂ) ಮತ್ತು ಪಕ್ಷದ ವಿದ್ಯಾರ್ಥಿ ಘಟಕವಾದ ಎಸ್ಎಫ್ಐ ನಡುವೆ ವೈಮನಸ್ಸು ಉಂಟಾಗಿತ್ತು.
ಮಾಜಿ ಸಚಿವ, ಸೇನಾಧಿಕಾರಿಗೆ ರಾಜ್ಯಪಾಲರ ಹುದ್ದೆ
ನಾಗರಿಕ ವಿಮಾನಯಾನ ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಮಾಜಿ ರಾಜ್ಯ ಸಚಿವ ಮತ್ತು ನಿವೃತ್ತ ಜನರಲ್, ವಿಕೆ ಸಿಂಗ್ ಮಿಜೋರಾಂ ರಾಜ್ಯದ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ. 2014 ರಿಂದ ಎರಡು ಬಾರಿ ಘಾಜಿಯಾಬಾದ್ನಿಂದ ಚುನಾವಣೆಗೆ ನಿಂತಿದ್ದರು. 2024ರ ಚುನಾವಣೆಗೆ ಮುನ್ನ ಚುನಾವಣಾ ರಾಜಕೀಯದಿಂದ ಹಿಂದೆ ಸರಿದಿದ್ದರು. ಈಗ ಅವರಿಗೆ ರಾಜ್ಯಪಾಲ ಹುದ್ದೆ ಅರಸಿ ಬಂದಿದೆ.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
Kerala: ಕೇರಳಂ ವಿಧಾನಸಭೆ ಚುನಾವಣೆ 2026: ಎಲ್ಡಿಎಫ್–ಯುಡಿಎಫ್ ನಡುವೆ ಪೈಪೋಟಿ, ಹೇಗಿದೆ ರಾಜಕೀಯ ಕಣ -
Kerala Assembly Election 2026: ಕೇರಳಂ ವಿಧಾನಸಭೆ ಚುನಾವಣೆ 2026: ಒಂದೇ ಹಂತದಲ್ಲಿ 140 ಸ್ಥಾನಗಳಿಗೆ ಚುನಾವಣೆ -
Tamil Nadu Assembly Election: ತಮಿಳುನಾಡು ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ: ಏಪ್ರಿಲ್ 23ಕ್ಕೆ ಮತದಾನ, ಬಲಾಬಲ ಹೇಗಿದೆ? -
Assam Assembly Election 2026: ಅಸ್ಸಾಂ ವಿಧಾನಸಭಾ ಚುನಾವಣೆಯ ಮತದಾನ, ಮತ ಎಣಿಕೆ ದಿನಾಂಕಗಳ ವಿವರ -
Puducherry Election 2026: ವಿಧಾನಸಭಾ ಚುನಾವಣೆಗೆ ಸಜ್ಜಾದ ಪುದುಚೇರಿ ರಾಜಕೀಯ ಅಖಾಡ: ಏಪ್ರಿಲ್ 9ಕ್ಕೆ ಮತದಾನ -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart












Click it and Unblock the Notifications