ದೋವಲ್-ಬ್ಲಿಂಕೆನ್ ಭೇಟಿ: ಯಾವ್ಯಾವ ವಿಷಯಗಳ ಕುರಿತು ಚರ್ಚೆ
ನವದೆಹಲಿ, ಜುಲೈ 28: ಅಮೆರಿಕ ವಿಶಾಂಗ ಕಾರ್ಯದರ್ಶಿ ಬ್ಲಿಂಕೆನ್ ಭಾರತಕ್ಕೆ ಭೇಟಿ ನೀಡಿದ್ದು, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಭಾರತ-ಅಮೆರಿಕವನ್ನೂ ಜತೆಯಾಗಿ ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವುದು ಹೇಗೆ ಎನ್ನುವ ಕುರಿತು ಚರ್ಚೆ ನಡೆದಿದೆ. ಒಂದು ಗಂಟೆಯ ಮಾತುಕತೆಯಲ್ಲಿ ಅಫ್ಘಾನಿಸ್ತಾನದ ಪರಿಸ್ಥಿತಿ, ಇಂಡೋ ಪೆಸಿಫಿಕ್ ಕುರಿತು ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಭದ್ರತೆ, ರಕ್ಷಣಾ ವ್ಯವಸ್ಥೆ, ಆರ್ಥಿಕತೆ ಹಾಗೂ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯಗಳನ್ನು ಚರ್ಚಿಸಲಾಗಿದೆ. ಹಾಗೆಯೇ ಎರಡೂ ದೇಶಗಳ ಸಂಬಂಧವನ್ನು ಮುಂದಿನ ಹಂತಕ್ಕೆ ಕರೆದೊಯ್ಯಲು ಬೇಕಾದ ದೀರ್ಘಾವಧಿಯ ಕ್ರಮಗಳ ಬಗ್ಗೆಯೂ ವಿಶೇಷ ಗಮನ ನೀಡಲಾಯಿತು.
ಪ್ರಾದೇಶಿಕ ಮತ್ತು ಜಾಗತಿಕ ಭದ್ರತೆಗೆ ಸಂಬಂಧಿಸಿದ ಸಮಕಾಲೀನ ಮತ್ತು ಭವಿಷ್ಯದ ವಿಷಯಗಳ ಬಗ್ಗೆ ವಿಷಯ ವಿನಿಮಯ ಮಾಡಿಕೊಳ್ಳಲಾಗಿದೆ. ಅಮೆರಿಕದ ವಿದೇಶಾಂಗ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಲಿಂಕನ್ ಅವರ ಮೊದಲ ಭಾರತ ಭೇಟಿ ಇದಾಗಿದೆ.

ಅಮೆರಿಕ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಮಾರ್ಚ್ನಲ್ಲಿ ಭಾರತಕ್ಕೆ ಭೇಟಿ ನೀಡಿದ್ದರೆ, ಹವಾಮಾನ ಬದಲಾವಣೆ ಬಗ್ಗೆ ಮಾತುಕತೆ ನಡೆಸಲು ಅಮೆರಿಕ ರಾಯಭಾರಿ ಜಾನ್ ಏಪ್ರಿಲ್ನಲ್ಲಿ ದೆಹಲಿಗೆ ಆಗಮಿಸಿದ್ದರು.
ಭಾರತ ಪ್ರವಾಸದ ಸಂದರ್ಭದಲ್ಲಿ ಆಂಟೋನಿ ಬ್ಲಿಂಕೆನ್ ಅವರು ಅಧಿಕಾರಿಗಳ ಜತೆ ಮಾನವ ಹಕ್ಕುಗಳು ಹಾಗೂ ಪ್ರಜಾಪ್ರಭುತ್ವದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.
'ಮಾನವ ಹಕ್ಕುಗಳು ಮತ್ತು ಪ್ರಜಾಪ್ರಭುತ್ವದಂತಹ ವಿಷಯಗಳು ಸಾರ್ವತ್ರಿಕ ಹಾಗೂ ನಿರ್ದಿಷ್ಟ ದೇಶ ಅಥವಾ ಸಂಸ್ಕೃತಿಯಾಚೆ ವಿಸ್ತರಿಸಿದೆ. ಭಾರತವು ಎರಡೂ ಕ್ಷೇತ್ರಗಳಲ್ಲಿನ ತನ್ನ ಸಾಧನೆ ಬಗ್ಗೆ ಹೆಮ್ಮೆ ಹೊಂದಿದೆ ಹಾಗೂ ಅನುಭವಗಳನ್ನು ಹಂಚಿಕೊಳ್ಳಲು ಸದಾ ಹರ್ಷಿಸುತ್ತದೆ' ಎಂದು ಸರಕಾರದ ಮೂಲಗಳು ಹೇಳಿವೆ.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications