ಅಜಿತ್ ಪವಾರ್ ಕೊನೆಯ ಸೋಷಿಯಲ್ ಮೀಡಿಯಾ ಮೆಸೇಜ್ ವೈರಲ್, ಏನು ಹೇಳಿದ್ದರು ಮಹಾರಾಷ್ಟ್ರ ಉಪಮುಖ್ಯಮಂತ್ರಿ? Ajit Pawar
ಅಜಿತ್ ಪವಾರ್ ವಿಮಾನ ಅಪಘಾತದಲ್ಲಿ ಮೃತಪಟ್ಟ ಸುದ್ದಿ, ಇಡೀ ಇಂಡಿಯಾದಲ್ಲಿ ಸಂಚಲನಕ್ಕೆ ಕಾರಣ ಆಗಿದೆ. ಎನ್ಸಿಪಿ ನಾಯಕ ಹಾಗೂ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಕೂಡ ಆಗಿದ್ದ ಇದೇ ಅಜಿತ್ ಪವಾರ್ ಅವರು ಪ್ರಯಾಣ ಮಾಡುತ್ತಿದ್ದ ವಿಮಾನ, ಮಹಾರಾಷ್ಟ್ರದ ಬಾರಾಮತಿಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಸ್ಫೋಟಗೊಂಡಿದೆ. ಹೀಗಾಗಿ ವಿಮಾನದಲ್ಲಿ ಇದ್ದ ಎಲ್ಲಾ 5 ಜನ ದುರಂತಕ್ಕೆ ಬಲಿಯಾಗಿದ್ದಾರೆ. ಆದರೆ ಹೀಗೆ ವಿಮಾನ ದುರಂತದಲ್ಲಿ ಜೀವ ಹೋಗುವ ಮೊದಲು ಅಜಿತ್ ಪವಾರ್ ಅವರು, ಸೋಷಿಯಲ್ ಮೀಡಿಯಾದಲ್ಲಿ ನೀಡಿರುವ ಕೊನೆಯ ಸಂದೇಶ ವೈರಲ್ ಆಗುತ್ತಿದೆ.
ಮಹಾರಾಷ್ಟ್ರ ರಾಜ್ಯದಲ್ಲಿ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದು, ಚುನಾವಣೆಗಾಗಿ ಪ್ರಚಾರ ಮಾಡಲು ಎನ್ಸಿಪಿ ನಾಯಕ & ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಅಜಿತ್ ಪವಾರ್ ಮಂಗಳವಾರ ಮುಂಬೈನಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ನಂತರ ಇಂದು ಮುಂಬೈ ನಗರದಿಂದ ಪುಣೆ ಕಡೆಗೆ ಅವರು ಪ್ರಯಾಣ ಬೆಳೆಸಿದ್ದರು. ಆದರೆ ಹೀಗೆ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವಾಗ ಅಜಿತ್ ಪವಾರ್ ಅವರು ಇದ್ದ ವಿಮಾನ ರನ್ವೇ ಹಾದಿಯಲ್ಲೇ ಸ್ಫೋಟಗೊಂಡಿದೆ. ಹಾಗಾದರೆ, ಸಾವಿಗೂ ಮೊದಲು ಅಜಿತ್ ಪವಾರ್ ಅವರು, ಸೋಷಿಯಲ್ ಮೀಡಿಯಾದಲ್ಲಿ ಹೇಳಿದ್ದು ಏನು?

ಅಜಿತ್ ಪವಾರ್ ಕೊನೆಯ ಸಂದೇಶ...
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಸಾಯುವ ಮೊದಲು ನೀಡಿದ್ದ ಸಂದೇಶ ನೆರೆಯ ರಾಜ್ಯ ಮಹಾರಾಷ್ಟ್ರದ ಜನರ ಕಣ್ಣು ಒದ್ದೆ ಮಾಡುತ್ತಿದೆ. ಅಜಿತ್ ಪವಾರ್ ಅವರು ತಮ್ಮ ಜೀವವನ್ನೇ ಕಳೆದುಕೊಳ್ಳುವ ಸುಮಾರು 10 ಗಂಟೆಗಳ ಮೊದಲು ಮಹಾರಾಷ್ಟ್ರ ಅಭವೃದ್ಧಿ ಬಗ್ಗೆ ಟ್ವೀಟ್ ಪೋಸ್ಟ್ ಮಾಡಿದ್ದಾರೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಪೋಸ್ಟ್ ಹಂಚಿಕೊಂಡು ಅಭಿವೃದ್ಧಿಯ ಬಗ್ಗೆಯೇ ಜಪ ಮಾಡಿದ್ದಾರೆ. ಈ ಮೂಲಕ ಸಾಯುವ ಸಮಯದಲ್ಲೂ ಅಜಿತ್ ಅವರು ಅಭಿವೃದ್ಧಿ ಬಗ್ಗೆ ಯೋಚಿಸಿದ್ದರು ಎಂಬುದು ಅವರ ಬೆಂಬಲಿಗರು ಹಾಗೂ ಅಭಿಮಾನಿಗಳ ಎದೆಯನ್ನ ಮತ್ತಷ್ಟು ಭಾರ ಮಾಡಿದೆ.
मुंबई व नवी मुंबई विमानतळ मेट्रोने जोडणार, गडचिरोलीत नवेगाव मोर ते सुरजागडदरम्यान चार पदरी महामार्गास मान्यता
— CMO Maharashtra (@CMOMaharashtra) January 27, 2026
मुख्यमंत्री देवेंद्र फडणवीस यांच्या अध्यक्षतेखाली आज मुंबई येथे मंत्रिमंडळ पायाभूत सुविधा समितीची बैठक पार पडली.
छत्रपती शिवाजी महाराज आंतरराष्ट्रीय विमानतळ ते नवी…
ಲಕ್ಷಾಂತರ ಕೋಟಿ ರೂಪಾಯಿ ಯೋಜನೆಗಳು
ಅಜಿತ್ ಪವಾರ್ ಅವರು ವಿಮಾನ ಅಪಘಾತದಲ್ಲಿ ಜೀವ ಬಿಡುವ ಕೆಲವೇ ಗಂಟೆಗಳ ಮೊದಲು ಸಿಎಂ ದೇವೇಂದ್ರ ಫಡ್ನವೀಸ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಲಕ್ಷಾಂತರ ಕೋಟಿ ರೂಪಾಯಿ ಯೋಜನೆಗಳಿಗೆ ಅನುಮತಿ ನೀಡಲಾಗಿತ್ತು. ಇದೇ ವಿಚಾರವನ್ನ ಸಿಎಂ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದರು. ಸಿಎಂ ಮಾಡಿದ್ದ ಪೋಸ್ಟ್ ಅನ್ನೇ ಅಜಿತ್ ಪವಾರ್ ಅವರು ಹಂಚಿಕೊಂಡಿದ್ದರು. ಹೀಗೆ ತಾವು ಬದುಕಿದ್ದ ಸಮಯದಲ್ಲೂ ಅಭಿವೃದ್ಧಿಗಾಗಿ ಹೋರಾಡಿದ್ದ ನಾಯಕ, ಸಾವಿಗೆ ಮೊದಲು ಕೂಡ ಅಭಿವೃದ್ಧಿ ವಿಚಾರ ಬಿಟ್ಟಿಲ್ಲ ಎಂದು ಅವರ ಬೆಂಬಲಿಗರು ಈಗ ಕಂಬನಿ ಮಿಡಿಯುತ್ತಾ ಭಾವುಕರಾಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಹಳೆಯ ಪೋಸ್ಟ್ ವೈರಲ್ ಆಗುತ್ತಿದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications