ಮಹಾರಾಷ್ಟ್ರ ಸಿಎಂ ಸ್ಥಾನಕ್ಕೆ ಹಠಹಿಡಿದ ಅಜಿತ್ ಪವಾರ್: ಬಿಜೆಪಿ-ಶಿವಸೇನಾ ನಡುವಿನ ಉರಿಗೆ ಕಾರ ಸುರಿಯುತ್ತಿರುವ ಪವಾರ್ ಫ್ಯಾಮಿಲಿ
ಮುಂಬೈ, ಜುಲೈ 28: ಮಹಾರಾಷ್ಟ್ರ ರಾಜಕಾರಣ ವಿಚಿತ್ರ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಮಹಾರಾಷ್ಟ್ರ ಸರ್ಕಾರಕ್ಕೆ ಹೊಸದಾಗಿ ಸೇರಿಕೊಂಡಿರುವ ಎನ್ಸಿಪಿಯ ಅಜಿತ್ ಪವಾರ್ ಬಣ ಹಲವು ಬೇಡಿಕೆಗಳನ್ನು ಮುಂದಿಡುತ್ತಲೇ ಇದೆ. ಉಪ ಮುಖ್ಯಮಂತ್ರಿಯಾಗಿರುವ ಅಜಿತ್ ಪವಾರ್ ಈಗ ಸಿಎಂ ಸ್ಥಾನಕ್ಕೆ ಹಠ ಹಿಡಿದಿದ್ದಾರೆ ಎನ್ನಲಾಗಿದೆ. ಇದು ಬಿಜೆಪಿ ಹಾಗೂ ಶಿವಸೇನಾ ( ಏಕನಾಥ ಶಿಂಧೆ ಬಣ ) ನಡುವೆ ಬಿರುಕು ಮೂಡಿಸಿದೆ.
ಮಹಾರಾಷ್ಟ್ರದಲ್ಲಿ ಸಿಎಂ ಸ್ಥಾನಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣಗಳ ನಡುವೆ ಹಗ್ಗ ಜಗ್ಗಾಟ ಮುಂದುವರಿದಿದೆ. ಗುರುವಾರ ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣವು ಮುಖ್ಯಮಂತ್ರಿ ಸ್ಥಾನಕ್ಕೆ ಬೇಡಿಕೆ ಇಟ್ಟಿದೆ. ತಮಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಲೇಬೇಕೆಂದು ಅಜಿತ್ ಪವಾರ್ ಹಠ ಹಿಡಿದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಕೇಂದ್ರ ಸಚಿವ ಪ್ರಫುಲ್ ಪಟೇಲ್, ಅಜಿತ್ ಪವಾರ್ ಜನಪ್ರಿಯ ನಾಯಕರಾಗಿದ್ದಾರೆ. ಅವರು ಮಹಾರಾಷ್ಟ್ರದ ಸಿಎಂ ಆಗುವ ಸಾಮರ್ಥ್ಯವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.
ಅಜಿತ್ ಪವಾರ್ ಸಿಎಂ ಆಗುವ ಕುರಿತು ಎನ್ಸಿಪಿ ನಾಯಕ ಪ್ರಫುಲ್ ಪಟೇಲ್ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಜಿತ್ ಪವಾರ್ ಸಹ ಮುಖ್ಯಮಂತ್ರಿ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿಯಾಗುವುದು ಅಜಿತ್ ಪವಾರ್ ಅವರ ದೀರ್ಘ ಕಾಲದ ಕನಸಾಗಿದೆ. ಅದನ್ನು ನನಸು ಮಾಡಿಕೊಳ್ಳಲು ಅವರು ಮಹಾರಾಷ್ಟ್ರ ಸರ್ಕಾರದ ಭಾಗವಾಗಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದೆ ಪವಾರ್ ಅವರು ಶಿಂಧೆ ಅವರ ಸ್ಥಾನಕ್ಕೆ ಬಂದು ಕುಳಿತುಕೊಳ್ಳುತ್ತಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ದೇವೇಂದ್ರ ಫಡ್ನವೀಸ್ ಅವರು ಇದೆಲ್ಲವೂ ಊಹಾಪೋಹವೆಂದು ಹೇಳಿದ್ದರು. ಆದರೆ, ಈಗ ಮತ್ತೆ ಅಜಿತ್ ಪವಾರ್ ಮುಖ್ಯಮಂತ್ರಿಯಾಗುವ ಕುರಿತು ವರದಿಗಳು ಪ್ರಕಟವಾಗಿವೆ.
ಅಜಿತ್ ಪವಾರ್ ಅವರು ಹಲವು ವರ್ಷಗಳಿಂದ ಪಕ್ಷದಲ್ಲಿ ಪ್ರಮುಖ ನಾಯಕರಾಗಿದ್ದಾರೆ. ಶ್ರದ್ಧೆಯಿಂದ ಕೆಲಸ ಮಾಡುವವರಿಗೆ ಅಂತಿಮವಾಗಿ ನಾಯಕತ್ವದ ಅವಕಾಶ ಸಿಗುತ್ತದೆ ಎಂದು ಪ್ರಫುಲ್ ಪಟೇಲ್ ಹೇಳಿದ್ದಾರೆ.

'ಕೆಲಸ ಮಾಡುವವರಿಗೆ ಇಂದು, ನಾಳೆ ಅಥವಾ ಅದರ ಮರುದಿನ ಅವಕಾಶ ಸಿಗುತ್ತದೆ. ಅನೇಕರಿಗೆ ಅವಕಾಶ ಸಿಕ್ಕಿದೆ. ಅಜಿತ್ ದಾದಾ ಕೂಡ ಇದನ್ನು ಪಡೆಯುತ್ತಾರೆ. ಇಂದು ಅಲ್ಲದಿದ್ದರೆ ನಾಳೆ ಅಥವಾ ಭವಿಷ್ಯದ ಯಾವುದೇ ಸಮಯದಲ್ಲಿ ಅವರು ಮುಖ್ಯಮಂತ್ರಿಯಾಗಬಹುದು. ನಾವು ಆ ದಿಕ್ಕಿನಲ್ಲಿ ಕೆಲಸ ಮಾಡುತ್ತೇವೆ' ಎಂದು ಪಟೇಲ್ ನಾಗ್ಪುರದಲ್ಲಿ ತಿಳಿಸಿದ್ದಾರೆ.
ಅಜಿತ್ ಪವಾರ್ ನೇತೃತ್ವದ ಎನ್ಸಿಪಿ ಬಣ ಹಾಗೂ ಬಿಜೆಪಿಯ ನಡುವಿನ ಒಪ್ಪಂದಗಳು ಇನ್ನೂ ಗೊತ್ತಾಗಿಲ್ಲ. ಆದರೆ, ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡುತ್ತೇವೆಂದು ಬಿಜೆಪಿ ಕೇಂದ್ರ ನಾಯಕತ್ವ ಭರವಸೆ ನೀಡಿದೆ ಎಂಬ ಮಾತುಗಳು ಕೇಳಿಬಂದಿವೆ. ಇದು ಬಿಕ್ಕಟ್ಟನ್ನು ಮತ್ತಷ್ಟು ಜಠಿಲಗೊಳಿಸಿದೆ.
'ಬಿಜೆಪಿಯ ಉನ್ನತ ನಾಯಕತ್ವವು ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯಾಗಿ ಮಾಡುವುದಾಗಿ ಭರವಸೆ ನೀಡಿದೆ. ಕೇಂದ್ರ ಸರ್ಕಾರದಲ್ಲಿ ಎರಡು ಕ್ಯಾಬಿನೆಟ್ ಮಂತ್ರಿಗಳ ಸ್ಥಾನಗಳನ್ನು ಎನ್ಸಿಪಿಗೆ ನೀಡಬೇಕೆಂದು ಬೇಡಿಕೆ ಇಟ್ಟಿದ್ದೆವು. ಅದಕ್ಕೂ ಬಿಜೆಪಿ ನಾಯಕತ್ವ ಒಪ್ಪಿಕೊಂಡಿದೆ' ಎಂದು ಎನ್ಸಿಪಿ ನಾಯಕರೊಬ್ಬರು ತಿಳಿಸಿದ್ದಾರೆ.

ಬಾಂಬ್ ಸಿಡಿಸಿದ ಕಾಂಗ್ರೆಸ್
ಇದೇ ವೇಳೆ, ಕಾಂಗ್ರೆಸ್ ನಾಯಕ ಪ್ರಥ್ವಿರಾಜ್ ಚವ್ಹಾನ್ ಅವರು ಹೊಸದೊಂದು ಬಾಂಬ್ ಸಿಡಿಸಿದ್ದಾರೆ. ಆಗಸ್ಟ್ 10 ರಂದು ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿ ಮಾಡಲು ಬಿಜೆಪಿ ನಿರ್ಧರಿಸಿದೆ. ಲೋಕಸಭೆ ಚುನಾವಣೆಯನ್ನು ಎದುರಿಸಲು ಏಕನಾಥ ಶಿಂಧೆ ಅನರ್ಹರು ಎಂಬುದನ್ನು ಬಿಜೆಪಿ ಅರ್ಥ ಮಾಡಿಕೊಂಡಿದೆ ಎಂದು ಚವ್ಹಾನ್ ಹೇಳಿದ್ದಾರೆ.
ಬಿಜೆಪಿ - ಶಿವಸೇನಾ ಉರಿಗೆ ಕಾರ ಹಾಕುತ್ತಿರುವ ಪವಾರ್ ಫ್ಯಾಮಿಲಿ
ಇದೇ ವೇಳೆ, ಬಿಜೆಪಿ ಹಾಗೂ ಏಕನಾಥ ಶಿಂಧೆ ನೇತೃತ್ವದ ಬಣಗಳ ನಡುವೆ ಅಸಮಾಧಾನ ಕಂಡುಬಂದಿದೆ. ಶಿಂಧೆ ಅವರ ಪರಮಾಧಿಕಾರವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಶಿವಸೇನಾ ನಾಯಕರು ಆಕ್ರೋಶಗೊಂಡಿದ್ದಾರೆ. ಬಿಜೆಪಿ-ಶಿವಸೇನಾ ನಡುವಿನ ಉರಿಗೆ ಪವಾರ್ ಫ್ಯಾಮಿಲಿ ಕಾರ ಸುರಿಯುತ್ತಿದೆ ಎಂದು ಹೇಳಲಾಗುತ್ತಿದೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
"ಕಾಂಗ್ರೆಸ್ನಿಂದ ದಲಿತ ದ್ರೋಹ: 14,200 ಕೋಟಿ ರೂ ಎಸ್ಸಿಎಸ್ಪಿ/ಟಿಎಸ್ಪಿ ಹಣ ಗ್ಯಾರಂಟಿ ಪಾಲು'' -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ?












Click it and Unblock the Notifications