ಅಜ್ಮೇರ್ ಸ್ಫೋಟ ಪ್ರಕರಣ: ಆರೆಸ್ಸೆಸ್ ಮಾಜಿ ಕಾರ್ಯಕರ್ತನಿಗೆ ಜೀವಾವಧಿ ಶಿಕ್ಷೆ
ಅಜ್ಮೇರ್ ದ ದರ್ಗಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೆಸ್ಸೆಸ್ ನ ಮಾಜಿ ಕಾರ್ಯಕರ್ತರಾದ ದೇವೇಂದ್ರ ಗುಪ್ತ ಹಾಗೂ ಭವೇಶ್ ಪಟೇಲ್ ಅವರಿಗೆ ವಿಶೇಷ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.
ನವದೆಹಲಿ, ಮಾರ್ಚ್ 22: ಅಜ್ಮೇರ್ ನ ದರ್ಗಾ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯ ವಿಶೇಷ ನ್ಯಾಯಲಯವು ಬುಧವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಆರೆಸ್ಸೆಸ್ ನ ಮಾಜಿ ಕಾರ್ಯಕರ್ತರಾದ ದೇವೇಂದ್ರ ಗುಪ್ತ ಹಾಗೂ ಭವೇಶ್ ಪಟೇಲ್ ತಪ್ಪಿತಸ್ಥರೆಂದು ಪರಿಗಣಿಸಲಾಗಿದ್ದು, ಇಬ್ಬರಿಗೂ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.
2007ರ ಅಕ್ಟೋಬರ್ 11ರಂದು ಸೂಫಿ ಸಂತ ಖ್ವಾಜಾ ಮೊಯಿದ್ದೀನ್ ಛಿಷ್ಟಿ ಅವರ ದರ್ಗಾದಲ್ಲಿ ಬಾಂಬ್ ಸ್ಫೋಟಿಸಿ, ಮೂವರು ಸಾವನ್ನಪ್ಪಿದ್ದರು. 17ಕ್ಕೂ ಅಧಿಕ ಮಂದಿಗೆ ಗಾಯಗಳಾಗಿತ್ತು.
ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಸ್ವಾಮಿ ಆಸೀಮಾನಂದ ಅವರಿಗೆ ಪ್ರಕರಣದಿಂದ ಖುಲಾಸೆಗೊಳಿಸಿ ಕೋರ್ಟ್ ಅದೇಶಿಸಿರುವುದನ್ನು ಸ್ಮರಿಸಬಹುದು.[ಅಜ್ಮೀರ್ ಸ್ಫೋಟ ಪ್ರಕರಣ: ಸ್ವಾಮಿ ಅಸೀಮಾನಂದ ಖುಲಾಸೆ]

ಹಿಂದೂಗಳು ದರ್ಗಾಕ್ಕೆ ಹೋಗಬಾರದು ಎಂಬ ಕಾರಣಕ್ಕಾಗಿ ರಾಜಸ್ತಾನದ ಅಜ್ಮೇರ್ ಚಿಸ್ತಿ ಷರೀಫ್ ದರ್ಗಾದಲ್ಲಿ ಬಾಂಬ್ ಸ್ಫೋಟಿಸಲಾಯಿತು. ಈ ಘಟನೆಯ ಹಿಂದೆ ಹಿಂದೂ ಮುಸ್ಲಿಂ ಸಂಘಟನೆಗಳು ಭಾಗಿಯಾಗಿವೆ ಎಂದು ಶಬರಿಧಾಮ ಆಶ್ರಮದ ಅಸೀಮಾನಂದ ಸ್ವಾಮಿ ತಪ್ಪೊಪ್ಪಿಕೊಂಡಿದ್ದರು. [ಅಜ್ಮೇರ್ ಸ್ಪೋಟದಲ್ಲಿ ಆರ್ ಎಸ್ಎಸ್ ಕೈವಾಡ!]
ರಾಜಸ್ಥಾನ ಪೊಲೀಸರು, ಸಿಬಿಐ, ಎನ್ಐಎ ತನಿಖೆ,ವಿಚಾರಣೆ ನಡೆದ ಬಳಿಕ ಕೋರ್ಟಿನಲ್ಲಿ ಇತ್ತೀಚೆಗೆ ಆಸೀಮಾನಂದ ಪ್ರಕರಣದಿಂದ ಖುಲಾಸೆಗೊಂಡಿದ್ದರು.
ಆರೆಸ್ಸೆಸ್ ಪ್ರಮುಖ ಕಾರ್ಯಕರ್ತ ಇಂದ್ರೇಶ್ ಕುಮಾರ್ ಅವರು ಅಜ್ಮೇರ್ ದರ್ಗಾ, ಮಾಲೇಗಾಂವ್ ಸ್ಫೋಟ, ಹೈದರಾಬಾದ್ ನ ಮೆಕ್ಕಾ ಮಸೀದಿ ಸ್ಫೋಟ ಹಾಗೂ ಸಮ್ ಜೋತಾ ರೈಲು ಸ್ಫೋಟದಲ್ಲಿ ಕೈವಾಡವಿದೆ. ಜೊತೆಗೆ ಆರ್ಎಸ್ಎಸ್ ಪ್ರಚಾರಕ ಸುನೀಲ್ ಜೋಶಿ, ಸಾಧ್ವಿ ಪ್ರಗ್ಯಾಸಿಂಗ್, ಸಂದೀಪ್ ಡಾಂಗೆ, ರಾಮಜೀ ಕಾಲಸಂಗ್ರ ಕೂಡಾ ಸ್ಫೋಟದಲ್ಲಿ ಭಾಗಿಯಾಗಿದ್ದಾರೆ ಎಂದು ಆಸೀಮಾನಂದ ಅವರು 2010ರಲ್ಲೇ ವಿವರಿಸಿದ್ದರು.[ಅಜ್ಮೇರ್ ಸ್ಫೋಟದಲ್ಲಿ ಹಿಂದು ಮುಸ್ಲಿಂ ಕೈವಾಡ]
ಭಯೋತ್ಪಾದನೆಯಲ್ಲಿ ತೊಡಗಿರುವ ಸಂಘದ ತೀವ್ರಗಾಮಿಗಳಿಗೆ ಸಂಘ ಬಿಟ್ಟು ಹೊರನಡೆಯುವಂತೆ ಈಗಾಗಲೇ ಸೂಚಿಸಲಾಗಿದೆ ಎಂದು ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಸ್ಪಷ್ಟಪಡಿಸಿದ್ದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications