ಅಯೋಧ್ಯೆ ರಾಮಮಂದಿರಕ್ಕೆ 108 ಕಡ್ಡಿಯ ಬೆಳ್ಳಿ ಪೊರಕೆ: ವಿಶೇಷತೆ ತಿಳಿಯಿರಿ
ಅಯೋಧ್ಯೆ, ಜನವರಿ 30: ಅಯೋಧ್ಯೆಯ ಶ್ರೀರಾಮನಿಗೆ ದೇಶದಾದ್ಯಂತ ಶತಕೋಟಿ ಭಕ್ತರಿದ್ದಾರೆ. ರಾಮನ ಮೇಲಿನ ಅನನ್ಯ ಭಕ್ತಿಗೆ ಭಕ್ತರು ತಮ್ಮಿಂದಾದ ವಸ್ತುಗಳನ್ನು ಹರಕೆ ರೂಪದಲ್ಲಿ ನೀಡುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರದ ನಿರ್ಮಾಣ ಕಾರ್ಯ ಆರಂಭವಾಗಿನಿಂದಲೂ ದೇಣಿಗೆ ನೀಡುತ್ತಾ ಬಂದಿರುವ ರಾಮನ ಭಕ್ತರು ಇದೀಗ ಚಿನ್ನ, ಬೆಳ್ಳಿ ಸೇರಿದಂತೆ ವಿವಿಧ ಉಡುಗೊರೆಗಳನ್ನು ಹರಕೆ ರೂಪದಲ್ಲಿ ನೀಡಿ ರಾಮ ಸೇವೆ ಮಾಡುತ್ತಿದ್ದಾರೆ.
ಅಖಿಲ ಭಾರತೀಯ ಮಾಂಗ್ ಸಮಾಜವು ಅಯೋಧ್ಯೆ ರಾಮಮಂದಿರಕ್ಕೆ ವಿಶೇಷವಾದ ಉಡುಗೊರೆಯನ್ನು ನೀಡಿದೆ. ರಾಮ ಮಂದಿರದ ಗರ್ಭಗುಡಿ ಸ್ವಚ್ಛಗೊಳಿಸಲು ಅಖಿಲ ಭಾರತೀಯ ಮಾಂಗ್ ಸಮಾಜವು 1.751 ಕೆಜಿ ತೂಕದ ಬೆಳ್ಳಿ ಪೊರಕೆಯನ್ನು ಉಡುಗೊರೆಯಾಗಿ ನೀಡಿದ್ದಾರೆ. ಬೃಹತ್ ಆಕಾರದ ಈ ಬೆಳ್ಳಿ ಪೊರಕೆಯನ್ನು ಗರ್ಭಗುಡಿ ಸ್ವಚ್ಛತೆಗೆ ಬಳಸಿ ಎಂದು ಅಖಿಲ ಭಾರತೀಯ ಮಾಂಗ್ ಸಮಾಜದ ಮುಖಂಡರು ಮನವಿ ಮಾಡಿದ್ದಾರೆ.

ಈ ಬೆಳ್ಳಿ ಪೊರಕೆಯನ್ನು 11 ದಿನಗಳಲ್ಲಿ ತಯಾರಿಸಲಾಗಿದ್ದು, ಬೆಳ್ಳಿ ಪೊರಕೆ 108 ಕಡ್ಡಿಗಳನ್ನು ಹೊಂದಿದೆ. ಸಾಮಾನ್ಯವಾಗಿ ಮನೆ ಸ್ವಚ್ಛಗೊಳಿಸುವ ಪೊರಕೆಯನ್ನು ಲಕ್ಷ್ಮೀಗೆ ಹೋಲಿಸಲಾಗುತ್ತದೆ. ಹೀಗಾಗಿ ಅಯೋಧ್ಯೆ ರಾಮಮಂದಿರಕ್ಕೆ ನೀಡಿರುವ ಬೆಳ್ಳಿ ಪೊರಕೆಯ ಮೇಲ್ಭಾಗದಲ್ಲಿ ಸುಂದರವಾದ ಕಮಲದ ಮೇಲೆ ಕುಳಿತಿರುವ ಲಕ್ಷ್ಮೀ ದೇವಿಯ ಚಿತ್ರವನ್ನು ಕೆತ್ತಲಾಗಿದೆ. ಹಾಗೂ ನವಿಲುಗಳನ್ನು ಸಹ ಕೆತ್ತಲಾಗಿದೆ.
ಅಖಿಲ ಭಾರತೀಯ ಮಾಂಗ್ ಸಮಾಜದ ಮುಖಂಡರು ಪೂಜೆ ಸಲ್ಲಿಸಿ ಮೆರವಣಿಗೆ ಮೂಲಕ ತಂದು ಬೆಳ್ಳಿ ಪೊರಕೆಯನ್ನು ಅಯೋಧ್ಯೆಗೆ ಹಸ್ತಾಂತರಿಸಿದ್ದಾರೆ. ಈ ಬಗ್ಗೆ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೋಡುಗರು ಜೈ ಶ್ರೀರಾಮ್ ಎಂದು ಕಮೆಂಟ್ ಮಾಡಿದ್ದಾರೆ.
ಇನ್ನು ಈ ಬಗ್ಗೆ ಖುಷಿ ಹಂಚಿಕೊಂಡಿರುವ ಭಾರತೀಯ ಮಾಂಗ್ ಸಮಾಜ ಮುಖಂಡರು 'ವಿಶ್ವದ ಮೊದಲ ಬೆಳ್ಳಿ ಪೊರಕೆಯನ್ನು ಶ್ರೀರಾಮನಿಗೆ ಅರ್ಪಿಸಿದ್ದೇವೆ. ದೀಪಾವಳಿಯ ದಿನದಂದು ಲಕ್ಷ್ಮೀ ದೇವಿಯ ರೂಪದಲ್ಲಿ ಪೊರಕೆಯನ್ನು ಪೂಜಿಸಲಾಗುತ್ತದೆ, ಅದಕ್ಕಾಗಿಯೇ ಅಖಿಲ ಭಾರತ ಮಾಂಗ್ ಸಮಾಜವು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ಗೆ ಬೆಳ್ಳಿಯ ಪೊರಕೆಯನ್ನು ಊಡುಗೊರೆಯಾಗಿ ನೀಡಿದೆ. ಈ ಬೆಳ್ಳಿಯ ಪೊರಕೆಯನ್ನು ಅಯೋಧ್ಯೆ ರಾಮಮಂದಿರ ಗರ್ಭಗುಡಿಯ ಸ್ವಚ್ಛತೆಗೆ ಬಳಸಿ' ಎಂದು ಮನವಿ ಮಾಡಿದ್ದಾರೆ.

ರಾಮಮಂದಿರಕ್ಕೆ 101 ಕೆಜಿ ಚಿನ್ನ ನೀಡಿದ ದಿಲೀಪ್ ಕುಮಾರ್
ರಾಮಮಂದಿರಕ್ಕೆ ಕೋಟ್ಯಂತರ ಭಕ್ತರು ದೇಣಿಗೆ ನೀಡಿದ್ದಾರೆ. ಅದರಲ್ಲಿ ಪ್ರಮುಖರು ದಿಲೀಪ್ ಕುಮಾರ್.ವಿಲಖಿ ಮತ್ತು ಅವರ ಕುಟುಂಬ ವರು ಸೂರತ್ನ ಪ್ರಮುಖ ವಜ್ರ ವ್ಯಾಪಾರಿಗಳಾಗಿದ್ದು, ರಾಮಮಂದಿರಕ್ಕೆ 101 ಕೆಜಿ ಚಿನ್ನವನ್ನು ದಾನ ಮಾಡಿದ್ದಾರೆ. ಇದು ಸುಮಾರು 68 ಕೋಟಿ ರೂಪಾಯಿ ಮೌಲ್ಯದ ದೊಡ್ಡ ಕೊಡುಗೆಯಾಗಿದೆ. ಈ ಚಿನ್ನವನ್ನು ರಾಮಮಂದಿರದ ಬಾಗಿಲುಗಳು, ಗರ್ಭಗುಡಿ, ತ್ರಿಶೂಲ, ಡಮರು ಮತ್ತು ಕಂಬಗಳನ್ನು ಅಲಂಕರಿಸಲು ಬಳಸಲಾಗಿದೆ ಎನ್ನಲಾಗಿದೆ.
-
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications