ಲೋಕಸಭೆಯಲ್ಲಿ ಅಖಿಲೇಶ್ ಯಾದವ್ - ಅಮಿತ್ ಶಾ ಜಟಾಪಟಿ
ವಕ್ಫ್ (ತಿದ್ದುಪಡಿ) ಮಸೂದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ವಿಪಕ್ಷಗಳು ಮತ್ತು ಬಿಜೆಪಿ ನಾಯಕರ ನಡುವೆ ಭಾರಿ ವಾಗ್ವಾದ ನಡೆಯುತ್ತಿದೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರ ಅಧಿಕಾರವನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸಿದ್ದು, ಇಬ್ಬರು ನಾಯಕರ ನಡುವೆ ವಾಗ್ವಾದ ನಡೆಯಿತು.
ಅಖಿಲೇಶ್ ಯಾದವ್ ಮಾಡಿದ ಆರೋಪಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಕ್ಫ್ ತಿದ್ದುಪಡಿ ಮಸೂದೆ ಮೇಲಿನ ಚರ್ಚೆ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್ ಯಾದವ್ ಸ್ಪೀಕರ್ ಅವರನ್ನು ಉದ್ದೇಶಿ "ನಿಮ್ಮ ಹಕ್ಕುಗಳು ಮತ್ತು ನಮ್ಮ ಹಕ್ಕುಗಳನ್ನು ಮೊಟಕುಗೊಳಿಸಲಾಗುತ್ತಿದೆ. ನೀವು ಪ್ರಜಾಪ್ರಭುತ್ವದ ನ್ಯಾಯಾಧೀಶರು ಎಂದು ನಾನು ಕೇಳಿದ್ದೇನೆ. ನಿಮ್ಮ ಹಕ್ಕುಗಳನ್ನು ಇವರು ಕಸಿದುಕೊಳ್ಳುತ್ತಿದ್ದು ನಾವು ನಿಮಗಾಗಿ ಹೋರಾಟ ಮಾಡಬೇಕಾಗುತ್ತದೆ" ಎಂದು ಹೇಳಿದರು.

ಅಖಿಲೇಶ್ ಯಾದವ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅಮಿತ್ ಶಾ, "ಇದು ಸಭಾಪತಿಗೆ ಮಾಡುತ್ತಿರುವ ಅವಮಾನ, ಸ್ಪೀಕರ್ನ ಹಕ್ಕುಗಳು ಪ್ರತಿಪಕ್ಷಗಳಿಗೆ ಸೇರಿಲ್ಲ, ಅದು ಇಡೀ ಸದನಕ್ಕೆ ಸೇರಿದೆ. ಅಹಂಕಾರದಿಂದ ಮಾತನಾಡಬೇಡಿ. ನೀವು ಸ್ಪೀಕರ್ನ ಹಕ್ಕುಗಳ ರಕ್ಷಕರಲ್ಲ" ಎಂದು ಹೇಳಿದರು.
ಇಬ್ಬರ ನಡುವೆ ವಾಗ್ವಾದ
ಬಳಿಕ ಅಖಿಲೇಶ್ ಯಾದವ್ರನ್ನು ಉದ್ದೇಶಿಸಿ ಸ್ಪೀಕರ್ ಓಂ ಬಿರ್ಲಾ ಅವರು, ಸದನದ ಇತರ ಸದಸ್ಯರು ಕುರ್ಚಿಯ ಬಗ್ಗೆ ಪ್ರತಿಕ್ರಿಯಿಸಬಾರದು ಎಂದರು. ಇದು ನನ್ನ ನಿರೀಕ್ಷೆಯಾಗಿದ್ದು, ಸ್ಪೀಕರ್ ಮೇಲೆ ಯಾವುದೇ ವೈಯಕ್ತಿಕ ಟೀಕೆಗಳನ್ನು ಮಾಡಬಾರದು ಎಂದರು.
ವಕ್ಫ್ (ತಿದ್ದುಪಡಿ) ಮಸೂದೆಯನ್ನು ವಿರೋಧಿಸಿದ ಅಖಿಲೇಶ್ ಯಾದವ್, ರಾಜಕೀಯ ಉದ್ದೇಶದಿಂದ ಈ ಮಸೂದೆಯನ್ನು ಮಾಡಲಾಗುತ್ತಿದೆ ಎಂದರು. ಚುನಾವಣೆಗೆ ಪ್ರಜಾಸತ್ತಾತ್ಮಕ ಪ್ರಕ್ರಿಯೆ ಇರುವಾಗ, ಜನರನ್ನು ಏಕೆ ನಾಮನಿರ್ದೇಶನ ಮಾಡಬೇಕು? ಯಾವುದೇ ಸಮುದಾಯದ ಹೊರಗಿನವರು ಇತರ ಧಾರ್ಮಿಕ ಸಂಸ್ಥೆಗಳ ಭಾಗವಾಗಿಲ್ಲ. ಮುಸ್ಲಿಮೇತರರನ್ನು ವಕ್ಫ್ ಸಂಸ್ಥೆಗಳಲ್ಲಿ ಸೇರಿಸುವುದರಿಂದ ಏನು ಪ್ರಯೋಜನ ಎಂದು ಪ್ರಶ್ನೆ ಮಾಡಿದರು.
ಲೋಕಸಭಾ ಚುನಾವಣೆಯಲ್ಲಿ ಹಿನ್ನಡೆಯಾದ ಬಳಿಕ ತಮ್ಮ ಬೆಂಬಲಿಗರನ್ನು ಸಮಾಧಾನಪಡಿಸಲು ಬಿಜೆಪಿ ಈ ಕಾನೂನು ಮಾಡಲು ಹೊರಟಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದರು.
ರಾಜ್ಯ ವಕ್ಫ್ ಬೋರ್ಡ್ಗಳ ಅಧಿಕಾರಗಳು, ವಕ್ಫ್ ಆಸ್ತಿಗಳ ನೋಂದಣಿ ಮತ್ತು ಸಮೀಕ್ಷೆ ಮತ್ತು ಅತಿಕ್ರಮಣ ತೆಗೆಯುವಿಕೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸುವ ಗುರಿಯನ್ನು ಹೊಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯನ್ನು ವಿರೋಧ ಪಕ್ಷಗಳು ವಿರೋಧಿಸಿವೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications