ಉತ್ತರ ಪ್ರದೇಶದ 80 ಲೋಕಸಭಾ ಕ್ಷೇತ್ರದಲ್ಲೂ ಬಿಜೆಪಿ ಖಾಲಿ: ಅಖಿಲೇಶ್
ಲಖನೌ: ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಹಾಗೂ ವಿರೋಧ ಪಕ್ಷಗಳ ಮಧ್ಯೆ ತಿಕ್ಕಾಟ ಮುಂದುವರಿದೆ. ಈ ನಡುವೆ ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ನೇರವಾಗಿ ಬಿಜೆಪಿಗೆ ಸವಾಲು ಹಾಕಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ 80 ಸ್ಥಾನದಲ್ಲೂ ಬಿಜೆಪಿ ಉತ್ತರ ಪ್ರದೇಶದಲ್ಲಿ ಸೋಲು ಕಾಣಬೇಕು ಎಂದಿದ್ದಾರೆ.
ಕೇಂದ್ರ ಹಾಗೂ ಉತ್ತರ ಪ್ರದೇಶದ ರಾಜಕೀಯ ಪಕ್ಷಗಳ ನಡುವೆ ತೀವ್ರ ತಿಕ್ಕಾಟ ನಡೆದು, ಒಬ್ಬರಿಗೊಬ್ಬರು ಕೆಂಡ ಕಾರುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಉತ್ತರ ಪ್ರದೇಶದ ಮಾಜಿ ಸಿಎಂ ಬಿಜೆಪಿ ನಾಯಕರಿಗೆ ಸವಾಲು ಎಸೆದಿದ್ದಾರೆ. ದೇಶದಲ್ಲೇ ಅತಿಹೆಚ್ಚು ಲೋಕಸಭೆ ಕ್ಷೇತ್ರವನ್ನ ಹೊಂದಿರುವುದು ಉತ್ತರ ಪ್ರದೇಶ. ಹೀಗಾಗಿ ಇಲ್ಲಿ ಗೆಲ್ಲುವ ಪಕ್ಷಕ್ಕೆ ಕೇಂದ್ರದ ಅಧಿಕಾರವು ಸುಲಭವಾಗುತ್ತೆ. ಆದರೆ ಈಗ ಸಮಾಜವಾದಿ ಪಕ್ಷದ ವರಿಷ್ಠ ಮತ್ತು ಉತ್ತರ ಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಬಿಜೆಪಿಗೆ ನೇರವಾಗಿ ಸವಾಲು ಹಾಕಿದ್ದಾರೆ. '80 ಕ್ಷೇತ್ರದಲ್ಲೂ ಸೋಲಿಸಿ ಬಿಜೆಪಿ ತೊಲಗಿಸಿ' ಎಂದು ಹೊಸ ಘೋಷಣೆ ಮೊಳಗಿಸಿದ್ದಾರೆ ಅಖಿಲೇಶ್.

ಬಿಜೆಪಿ ಸೋಲಿಗೆ ಸಮಾಜವಾದಿ ಶಪಥ!
ಉತ್ತರ ಪ್ರದೇಶದಲ್ಲಿ ಸತತ 2 ಬಾರಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಹೀಗಾಗಿ ಲೋಕಸಭೆಗೆ ಸಜ್ಜಾಗಲು ವಿಪಕ್ಷಗಳು ಹೊಂದಾಗಿವೆ. ಈ ಹಿನ್ನೆಲೆಯಲ್ಲಿ ಅಖಿಲೇಶ್ ಸ್ಥಳೀಯ ಮಟ್ಟದಲ್ಲಿ ಮಹತ್ವದ ಸಭೆ ನಡೆಸುತ್ತಿದ್ದಾರೆ. '80 ಕ್ಷೇತ್ರಗಳಲ್ಲೂ ಸೋಲಿಸಿ; ಬಿಜೆಪಿ ತೊಲಗಿಸಿ' ಎಂಬ ಹೊಸ ಘೋಷಣೆ ಹೊರಡಿಸಿದ್ದು, '2024ರ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಬೇಕು' ಎಂದಿದ್ದಾರೆ ಯುಪಿ ಮಾಜಿ ಸಿಎಂ. ಅಲ್ಲದೆ 'ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ' ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ.
ವರ್ಕೌಟ್ ಆಗುತ್ತಾ ವಿಪಕ್ಷಗಳ ತಂತ್ರ?
ಬಿಜೆಪಿ ವಿರುದ್ಧ ಒಂದಾಗಲು ವಿರೋಧ ಪಕ್ಷಗಳು ಸಭೆ ನಡೆಸಲು ಹಲವು ತಿಂಗಳಿಂದಲೂ ಪ್ಲ್ಯಾನ್ ಮಾಡುತ್ತಿವೆ. ಆದರೆ ಅದು ವರ್ಕೌಟ್ ಆಗುತ್ತಲೇ ಇಲ್ಲ. ಹೀಗೆ ಒಂದು ಸಭೆಗಾಗಿ ಈಗ ಪರದಾಡುತ್ತಿರುವ ವಿರೋಧ ಪಕ್ಷಗಳು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಮೋದಿ ವಿರುದ್ಧ ಗೆಲುವು ಸಾಧಿಸುತ್ತಾವ? ಎಂಬ ಅನುಮಾನ ಎಲ್ಲೆಲ್ಲೂ ಕಾಡ್ತಿದೆ. ಬಿಜೆಪಿ ಕೂಡ ವಿಪಕ್ಷಗಳ ಎಲ್ಲಾ ನಡೆಯನ್ನ ಅತಿ ಸೂಕ್ಷ್ಮವಾಗಿ ಗಮನಿಸುತ್ತಿದೆ. ಈ ಮಧ್ಯೆ ಉತ್ತರ ಪ್ರದೇಶದಲ್ಲಿ ಅಖಿಲೇಶ್ ಯಾದವ್ ಬೇರೆಯದ್ದೇ ರಣತಂತ್ರ ಹೂಡಲು ಸಜ್ಜಾಗಿದ್ದು, ಇದು ಯಾವ ಮಟ್ಟಿಗೆ ವರ್ಕೌಟ್ ಆಗಬಹುದು? ಅನ್ನೋ ಡೌಟ್ ಕೂಡ ಕಾಡುತ್ತಿದೆ.

ಮಾಜಿ ದೋಸ್ತಿಗಳ ಜೊತೆ ಮತ್ತೆ ದೋಸ್ತಿ!
ಇಲ್ಲಿ ವಿರೋಧ ಪಕ್ಷಗಳು ಬಿಜೆಪಿ ವಿರುದ್ಧ ಒಂದಾಗುತ್ತಿವೆ. ಆದರೆ ಈ ಸಂದರ್ಭದಲ್ಲೇ ಬಿಜೆಪಿ ಕೂಡ ಅಲರ್ಟ್ ಆಗಿದೆ. ಅದರಲ್ಲೂ ಕರ್ನಾಟಕ ವಿಧಾನಸಭೆಯ ಸೋಲು ಬಿಜೆಪಿ ನಾಯಕರಿಗೆ ಎಚ್ಚರಿಕೆಯ ಸಂದೇಶವನ್ನೂ ನೀಡಿದಂತೆ ಕಾಣುತ್ತಿದೆ. ಎಲ್ಲ ಕಾರಣಕ್ಕೆ ವಿಪಕ್ಷಗಳ ಒಗ್ಗಟ್ಟು ಮುರಿಯಲು ಬಿಜೆಪಿ ಯತ್ನಿಸುತ್ತಿದೆ ಅನ್ನೋ ಆರೋಪವೂ ಕೇಳಿಬಂದಿದೆ. ಅಲ್ಲದೆ ಟಿಡಿಪಿ ಹಾಗೂ ಅಕಾಲಿ ದಳದ ಜೊತೆ ಮೈತ್ರಿಗೆ ಮುಂದಾಗಿದೆ ಎಂಬ ಮಾತು ಕೇಳಿಬಂದಿದೆ. ಹೀಗಾಗಿ ಎಲ್ಲಾ ಬೆಳವಣಿಗೆ ಬಗ್ಗೆ ವಿಪಕ್ಷಗಳ ನಾಯಕರು ಅಲರ್ಟ್ ಆಗಿದ್ದು, ಅಖಿಲೇಶ್ ಯಾದವ್ ಈ ಸಂದರ್ಭದಲ್ಲೇ ಬೇರೆಯದ್ದೇ ತಂತ್ರ ಹೂಡಿರುವಂತೆ ಕಾಣುತ್ತಿದೆ.
ಹೀಗೆ ಲೋಕಸಭೆ ಚುನಾವಣೆಗೆ ಮೊದಲೇ ರಾಜಕೀಯ ಅಖಾಡ ರಂಗೇರಿದೆ. ಅತ್ತ ಗೆಲುವು ಸಾಧಿಸಲು ಕೇಂದ್ರ ಸರ್ಕಾರ ರಣತಂತ್ರ ಹೆಣೆಯುತ್ತಿದ್ದರೆ, ಮೋದಿ ಸರ್ಕಾರಕ್ಕೆ ಈ ಬಾರಿ ಸೋಲಿನ ರುಚಿ ತೋರಿಸಬೇಕು ಅನ್ನೋದೆ ವಿರೋಧ ಪಕ್ಷದ ನಾಯಕರ ಚಾಲೆಂಜ್. ಇದೇ ಕಾರಣಕ್ಕೆ ಅವಧಿ ಪೂರ್ವ ಅಂದರೆ ಲೋಕಸಭೆ ಮತದಾನ ಇದೇ ವರ್ಷದಲ್ಲಿ ನಡೆದು, ಫಲಿತಾಂಶ ಕೂಡ ಹೊರಬೀಳುತ್ತದೆ ಎನ್ನಲಾಗಿದೆ. ಹಾಗೇ ಇನ್ನೊಂದು ಕಡೆ ಈ ಮಾತನ್ನ ತಳ್ಳಿ ಹಾಕಲಾಗಿದೆ. ಅದೆಲ್ಲಾ ಏನೇ ಇರಲಿ, 2024ರ ಚುನಾವಣೆ ಅಖಾಡ ಹಿಂದಿನ ಎಲ್ಲಾ ಚುನಾವಣೆಗಿಂತ ರಂಗೇರುವುದು ಮಾತ್ರ ಗ್ಯಾರಂಟಿ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications