ಇಂಡಿಗೋ ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ 'ಮದ್ಯ'
ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನೊಬ್ಬ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಆರೋಪಿಯನ್ನು ರಾಜಿಂದರ್ ಸಿಂಗ್ ಎಂದು ಗುರುತಿಸಲಾಗಿದ್ದು, ವಿಮಾನ ಸಂಖ್ಯೆ 6E 1428 ರಲ್ಲಿ ದುಬೈನಿಂದ ಅಮೃತಸರಕ್ಕೆ ಪ್ರಯಾಣಿಸುತ್ತಿದ್ದರು. ಅವರನ್ನು ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಅಮೃತಸರ ವಿಮಾನ ನಿಲ್ದಾಣದಲ್ಲಿ ಬಂದಿಳಿದ ತಕ್ಷಣ ಬಂಧಿಸಲಾಗಿದೆ.
ಬಂಧಿತ ಪ್ರಯಾಣಿಕ ಪಂಜಾಬ್ನ ಜಲಂಧರ್ನ ಕೋಟ್ಲಿ ಗ್ರಾಮದ ನಿವಾಸಿಯಾಗಿದ್ದು, ವಿಮಾನದಲ್ಲಿ ಹೆಚ್ಚಿನ ಆಲ್ಕೋಹಾಲ್ ಸೇವಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮದ್ಯದ ಅಮಲಿನಲ್ಲಿ ಅವರು ಮಹಿಳಾ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾಗಿದೆ.

ಈ ವೇಳೆ ವಿಮಾನದಲ್ಲಿದ್ದ ಸಿಬ್ಬಂದಿಯೇ ಪರಿಸ್ಥಿತಿ ನಿಭಾಯಿಸಿದರು. ಲ್ಯಾಂಡ್ ಆದ ಬಳಿಕ ವಿಮಾನ ಭದ್ರತಾ ವ್ಯವಸ್ಥಾಪಕರು ಪೊಲೀಸರಿಗೆ ಸಮಸ್ಯೆಯನ್ನು ತಿಳಿದಿದ್ದಾರೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ವಿಮಾನದಲ್ಲಿ ಪ್ರಯಾಣಿಸುವ ಪ್ರಯಾಣಿಕರಿಂದ ಆಕ್ಷೇಪಾರ್ಹ ವರ್ತನೆಯ ಘಟನೆಗಳು ಕಳೆದ ಕೆಲವು ತಿಂಗಳುಗಳಲ್ಲಿ ಸಾಮಾನ್ಯವಾಗಿದೆ. ಕಳೆದ ತಿಂಗಳು, ನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್ಲೈನ್ಸ್ ವಿಮಾನದಲ್ಲಿ ಭಾರತೀಯ ವ್ಯಕ್ತಿಯೊಬ್ಬರು ಮದ್ಯದ ಅಮಲಿನಲ್ಲಿ, ವಾಗ್ವಾದದ ಸಮಯದಲ್ಲಿ ಇನ್ನೊಬ್ಬ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದರು.
ಕಳೆದ ವರ್ಷ ನವೆಂಬರ್ನಲ್ಲಿ ಇದೇ ರೀತಿಯ ಪ್ರಕರಣದಲ್ಲಿ, ಶಂಕರ್ ಮಿಶ್ರಾ ಎಂಬ ವ್ಯಕ್ತಿ, ಏರ್ ಇಂಡಿಯಾ ವಿಮಾನದಲ್ಲಿ ಕುಡಿದ ಸ್ಥಿತಿಯಲ್ಲಿದ್ದಾಗ ವೃದ್ಧೆಯೊಬ್ಬಳ ಮೇಲೆ ಮೂತ್ರ ವಿಸರ್ಜಿಸಿದ್ದಾನೆ ಎಂದು ಆರೋಪಿಸಲಾಗಿತ್ತು. ಆತನನ್ನು ಬಂಧಿಸಿ ನಂತರ ಜಾಮೀನು ನೀಡಲಾಗಿತ್ತು.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಡೇವಿಡ್ ಅಲನ್ ಬರ್ಕ್ ಎಂಬ 61 ವರ್ಷದ ಪ್ರಯಾಣಿಕ ಕೆಟ್ಟದಾಗಿ ವರ್ತಿಸಿದ್ದನು. ತನ್ನ ಪ್ರಯಾಣದ ಸಮಯದಲ್ಲಿ ಹೆಚ್ಚು ಮದ್ಯಪಾನ ಮಾಡಿ ಕ್ಯಾಬಿನ್ ಸಿಬ್ಬಂದಿಯೊಬ್ಬರಿಗೆ ಬಲವಾಂತವಾಗಿ ಚುಂಬಿಸಿದ್ದನು ಡೆಲ್ಟಾ ಫ್ಲೈಟ್ನಲ್ಲಿ ಏಪ್ರಿಲ್ 10 ರಂದು ಈ ಘಟನೆ ನಡೆದಿದೆ ಎಂದು ನ್ಯೂಯಾರ್ಕ್ ಪೋಸ್ಟ್ ವರದಿ ಮಾಡಿದೆ.
ಇನ್ನೂ ಏಪ್ರಿಲ್ನಲ್ಲಿ ಏರ್ ಇಂಡಿಯಾ ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನು ವಿಮಾನದಲ್ಲಿ ಅಶಿಸ್ತಿನಿಂದ ವರ್ತಿಸಿದ್ದಕ್ಕೆ ಎಫ್ಐಆರ್ ದಾಖಲಿಸಲಾಗಿತ್ತು. ದೆಹಲಿ-ಲಂಡನ್ AI 111 ವಿಮಾನದಲ್ಲಿ ಈ ಘಟನೆ ನಡೆದಿತ್ತು. ಈ ಕಾರಣದಿಂದ ಏರ್ ಇಂಡಿಯಾ ದೆಹಲಿ-ಲಂಡನ್ ವಿಮಾನವನ್ನು ದೆಹಲಿಗೆ ಹಿಂದಿರುಗಿಸಲಾಗಿತ್ತು. ಅಶಿಸ್ತಿನ ಪುರುಷ ಪ್ರಯಾಣಿಕರಿದ್ದ ಕಾರಣ ವಿಮಾನ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (IGIA) ಮರಳಿತ್ತು.
-
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್












Click it and Unblock the Notifications