ಲೈಬ್ರರಿಗೆ ಹುಡ್ಗೀರ್ ಬಂದ್ರೆ ಹುಡುಗರ ತಲೆ ಕೆಡುತ್ತಂತೆ!
ನವದೆಹಲಿ, ನ.11 : 'ವಿದ್ಯಾರ್ಥಿನಿಯರು ಗ್ರಂಥಾಲಯಕ್ಕೆ ಕಾಲಿಟ್ಟರೆ ಅಲ್ಲಿ ಓದುತ್ತಾ ಕುಳಿತ ಹುಡುಗರು ಅವರೆಡೆಗೆ ಆಕರ್ಷಿತರಾಗುತ್ತಾರೆ. ನಂತರ ಅವರ ಮನಸ್ಸು ಚಂಚಲವಾಗಿ ವ್ಯಾಸಂಗಕ್ಕೆ ಅಡ್ಡಿಯಾಗುತ್ತದೆ.' ಹೀಗೆಂದು ಹೇಳಿದ್ದಲ್ಲದೇ ಗ್ರಂಥಾಲಯಕ್ಕೆ ವಿದ್ಯಾರ್ಥಿನಿಯರು ಕಾಲಿಡಬಾರದು ಎಂದು ಆದೇಶವನ್ನು ಹೊರಡಿಸಲಾಗಿದೆ.
ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ ಉಪ ಕುಲಪತಿ ಜಮೀರುದ್ದೀನ್ ಶಾ ಇಂಥದ್ದೊಂದು ಗೊಂದಲಕಾರಿ ಆದೇಶ ಹೊರಡಿಸಿದ್ದು ವ್ಯಾಪಕ ವಿರೋಧ ಮತ್ತು ಟೀಕೆಗೆ ಗುರಿಯಾಗಿದೆ. ಹುಡುಗಿಯರು ವಿಶ್ವವಿದ್ಯಾಲಯದ ಮೌಲಾನಾ ಅಜಾದ್ ಗ್ರಂಥಾಲಯ ಪ್ರವೇಶಿಸಬಾರದು. ಪುಸ್ತಕಗಳನ್ನು ಪಡೆಯಲು ಆಗಮಿಸಬಾರದು ಎಂದು ಹೇಳಿದ್ದಾರೆ.[ಓದುಗರಿಲ್ಲದೆ ಧೂಳು ಹಿಡಿದಿದೆ ಕನ್ನಡ ಪುಸ್ತಕಗಳು]

ಈ ಬಗ್ಗೆ ಪ್ರತಿಕ್ರಿಯಿಸಿರುವ ಅಖಿಲ ಭಾರತ ಮಹಿಳಾ ಸಂಘಟನೆಯ ಕಾರ್ಯದರ್ಶಿ ಜಮ್ಗತಿ ಸಂಘ್ವನ್. ಇದೊಂದು ದುರದೃಷ್ಟಕರ ನಿರ್ಧಾರ. ಇಂಥ ಹೇಳಿಕೆಗಳನ್ನು ಜಾರಿ ಮಾಡುವವರ ವಿರುದ್ಧ ಕಾನೂನು ಹೋರಾಟ ಅನಿವಾರ್ಯವಾಗುತ್ತದೆ ಎಂದಿದ್ದಾರೆ.
ಹೇಳಿಕೆಯನ್ನು ತೀವ್ರವಾಗಿ ಖಂಡಿಸಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಬರ್ಖಾ ಶುಕ್ಲಾ, ಇದು ವಿಶ್ವವಿದ್ಯಾಲಯದ ವರ್ತನೆ ತೋರಿಸುತ್ತದೆ ಎಂದಿದ್ದಾರೆ. ವಿದ್ಯಾರ್ಥಿನಿಯರು ಗ್ರಂಥಾಲಯ ಪ್ರವೇಶಿಸಿದರೆ ಅವರೆಡೆಗೆ ಆಕರ್ಷಿತರಾಗುವ ಹುಡುಗರು ಓದೋದನ್ನು ಬಿಟ್ಟು ಗಲಾಟೆ ಮಾಡುತ್ತಾರೆ ಎಂದು ವಿವಿ ಕುಪಲಪತಿಯೇ ಹೇಳಿದ್ದಾರೆ. ಇದರ ಅರ್ಥ ವಿವಿಯ ವಾತಾವರಣ ಎಷ್ಟು ಹದಗೆಟ್ಟಿದೆ ಎಂಬುದನ್ನು ತೋರಿಸುತ್ತದೆ ಎಂದಿದ್ದಾರೆ.[ಮೊಘಲರು ಬೆಂಕಿ ಹಚ್ಚಿದ್ದ ವಿಶ್ವವಿದ್ಯಾಲಯ ಪುನರಾರಂಭ]
ಮಹಿಳಾ ಕಾಲೇಜಿನ ಗ್ರಂಥಾಲಕ್ಕೆ ಹೋಲಿಸಿದರೆ ಮೌಲಾನಾ ಅಜಾದ್ ಗ್ರಂಥಾಲಯದಲ್ಲಿ ಉತ್ತಮ ಪುಸ್ತಕಗಳಿವೆ. ಪುಸ್ತಕ ಪರಾಮರ್ಶೆಗೆ ವಿದ್ಯಾರ್ಥಿನಿಯರು ತೆರಳುತ್ತಿದ್ದರೂ ಅವರು ಸದಸ್ಯತ್ವ ಪಡೆದುಕೊಂಡಿಲ್ಲ. ಹಾಗಾಗಿ ಅವರನ್ನು ಬರದಂತೆ ತಡೆಯುವುದೇ ಆದೇಶದ ಹಿಂದಿನ ಉದ್ದೇಶ ಎಂದು ಶುಕ್ಲಾ ಆರೋಪಿಸಿದ್ದಾರೆ.
-
Udupi: ಉಡುಪಿ ಜಿಲ್ಲೆಗೆ 'ಸಂಪೂರ್ಣ ಸಾಕ್ಷರತಾ' ಸ್ಥಾನಮಾನ, ಶೀಘ್ರವೇ ಘೋಷಣೆ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
NHAI ನಿಂದ ವಿದ್ಯಾರ್ಥಿಗಳಿಗೆ ಇಂಟರ್ನ್ಶಿಪ್ ಅವಕಾಶ: ತಿಂಗಳಿಗೆ ₹20,000 ಸ್ಟೈಪೆಂಡ್, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ












Click it and Unblock the Notifications