Get Updates
Get notified of breaking news, exclusive insights, and must-see stories!

ಭ್ರಷ್ಟರೆಲ್ಲಾ ಒಂದೇ ವೇದಿಕೆಯಲ್ಲಿ ಸೇರುತ್ತಿದ್ದಾರೆ: ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ, ಮಾರ್ಚ್. 29: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಿರೋಧ ಪಕ್ಷಗಳ ವಿರುದ್ಧ ಕಿಡಿಕಾರಿದ್ದು, ಎಲ್ಲರನ್ನೂ ಎಲ್ಲಾ ಭ್ರಷ್ಟ ಮುಖಗಳು ಎಂದು ಕರೆದಿದ್ದಾರೆ. ಬಿಜೆಪಿಯು ಭ್ರಷ್ಟಾಚಾರದ ವಿರುದ್ಧ ಸಮರ ಸಾರುತ್ತಿರುವ ಕಾರಣ ಇವರೆಲ್ಲಾ ಒಂದೇ ವೇದಿಕೆಯಲ್ಲಿ ಒಗ್ಗೂಡಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ.

1984ರ ಗಲಭೆಯ ನಂತರ ನಡೆದ ಸಂಸತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬಹುಮತ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವಂತೆಯೇ ಬಿಜೆಪಿಯ ಬಗ್ಗೆ ಚಿಂತಿತರಾಗಿರುವ ಪ್ರತಿಪಕ್ಷಗಳು ಇಂತಹ ಕೃತ್ಯಕ್ಕೆ ಕೈ ಹಾಕುತ್ತಿವೆ ಎಂದು ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.

All corrupt now on one platform; PM Modi attack on Opposition

ದೆಹಲಿಯಲ್ಲಿ ನೂತನವಾಗಿ ನಿರ್ಮಿಸಲಾದ ಬಿಜೆಪಿ ಕೇಂದ್ರ ಕಚೇರಿ (ವಿಸ್ತರಣೆ) ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, "ಭಾರತದ ಉದ್ದಗಲಕ್ಕೂ, ಬಿಜೆಪಿ ಏಕೈಕ ಪ್ಯಾನ್-ಇಂಡಿಯಾ ರಾಜಕೀಯ ಪಕ್ಷವಾಗಿದೆ. ಕುಟುಂಬ ನಿರ್ವಹಣೆಯಲ್ಲಿ ನಡೆಯುವ ರಾಜಕೀಯ ಪಕ್ಷಗಳಿಗಿಂತ ಭಿನ್ನವಾಗಿ ಬಿಜೆಪಿ ಯುವಕರಿಗೆ ಅವಕಾಶಗಳನ್ನು ನೀಡುವ ರಾಜಕೀಯ ಪಕ್ಷವಾಗಿದೆ. ನಮಗೆ ಭಾರತದ ಮಹಿಳೆಯರ ಆಶೀರ್ವಾದವಿದೆ" ಎಂದಿದ್ದಾರೆ.

ಭಾರತೀಯ ಜನತಾ ಪಕ್ಷವನ್ನು "ಭಾರತದ ಅತ್ಯಂತ ಭವಿಷ್ಯದ ಪಕ್ಷ" ಎಂದು ಕರೆದಿರುವ ಪ್ರಧಾನಿ ಮೋದಿ, 2 ಸ್ಥಾನಗಳಿಂದ 303 ಲೋಕಸಭಾ ಸ್ಥಾನಗಳಿಗೆ ಏರಿರುವ ದಣಿವಿಲ್ಲದ ಮತ್ತು ನಿರಂತರ ಪ್ರಯಾಣವನ್ನು ಮತ್ತೆ ನೆನಪಿಸಿಕೊಂಡರು. ಜೊತೆಗೆ 1984 ರ ಸಿಖ್ ವಿರೋಧಿ ದಂಗೆ ಮತ್ತು ತುರ್ತು ಪರಿಸ್ಥಿತಿಯ ವಿಷಯಗಳನ್ನು ಪ್ರಸ್ತಾಪಿಸುವ ಮೂಲಕ ಪಿಎಂ ಮೋದಿ ಕಾಂಗ್ರೆಸ್ ವಿರುದ್ಧ ಕಟುವಾದ ದಾಳಿಯನ್ನು ಪ್ರಾರಂಭಿಸಿದರು.

All corrupt now on one platform; PM Modi attack on Opposition

"1984 ರ ಗಲಭೆಯ ನಂತರದ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಬಹುಮತ ಬಂದಿತ್ತು. ಅದು ತುಂಬಾ ಭಾವನಾತ್ಮಕವಾಗಿ ತುಂಬಿದ ವಾತಾವರಣ ಮತ್ತು ಆ ಬಿರುಗಾಳಿಯಲ್ಲಿ ನಾವು ಬಹುತೇಕ ನಾಶವಾಗಿದ್ದೇವೆ. ಆದರೆ, ನಾವು ಎಂದಿಗೂ ಭರವಸೆ ಕಳೆದುಕೊಳ್ಳಲಿಲ್ಲ. ನಾವು ತಳಮಟ್ಟದಲ್ಲಿ ಕೆಲಸ ಮಾಡಿದ್ದೇವೆ ಮತ್ತು ನಮ್ಮ ಸಂಘಟನೆಯನ್ನು ಬಲಪಡಿಸಿದ್ದೇವೆ" ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

"ನಮ್ಮ ಸಾಂವಿಧಾನಿಕ ಸಂಸ್ಥೆಗಳು ನಮ್ಮ ಅಡಿಪಾಯ, ಆದ್ದರಿಂದ ಭಾರತದ ಅಭಿವೃದ್ಧಿಯನ್ನು ತಡೆಯಲು ನಮ್ಮ ಅಡಿಪಾಯವನ್ನು ಗುರಿಯಾಗಿಟ್ಟುಕೊಂಡು ಮಾನಹಾನಿ ಮಾಡಲಾಗುತ್ತಿದೆ. ನಮ್ಮ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಕೊನೆಗೊಳಿಸಲು ಪಿತೂರಿಗಳನ್ನು ನಡೆಸಲಾಗುತ್ತಿದೆ" ಎಂದು ಪ್ರಧಾನಿ ಆರೋಪಿಸಿದ್ದಾರೆ.

"ಕಳೆದ 9 ವರ್ಷಗಳಲ್ಲಿ, ಬಿಜೆಪಿಯು ಭ್ರಷ್ಟಾಚಾರದ ವಿರುದ್ಧ ಅಭಿಯಾನವನ್ನು ನಡೆಸಿತು, ಭ್ರಷ್ಟ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿತು. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲಾ ಅದು ಭ್ರಷ್ಟಾಚಾರಕ್ಕೆ ದೊಡ್ಡ ಹೊಡೆತವನ್ನು ನೀಡುತ್ತದೆ. ಹೀಗಾಗಿ, ಭ್ರಷ್ಟಾಚಾರದಲ್ಲಿ ಮುಳುಗಿರುವವರೆಲ್ಲ ಒಂದೇ ವೇದಿಕೆಯಲ್ಲಿ ಸೇರುತ್ತಿದ್ದಾರೆ. ಕೆಲವು ಪಕ್ಷಗಳು 'ಭ್ರಷ್ಟಾಚಾರಿ ಬಚಾವೋ ಅಭಿಯಾನ' ಆರಂಭಿಸಿವೆ. ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಬಿಜೆಪಿಯನ್ನು ಬುಡ ಸಮೇತ ಕಿತ್ತು ಹಾಕಲು ಹಲವು ಪ್ರಯತ್ನಗಳು ನಡೆದರೂ ವಿಫಲವಾಗಿವೆ. ನನ್ನನ್ನು ಕಂಬಿಗಳ ಹಿಂದೆ ಹಾಕಲು ಬಹಳಷ್ಟು ಆದರೆ ಪ್ರತಿ ಬಾರಿಯೂ ವಿಫಲವಾಯಿತು" ಎಂದು ಪ್ರಧಾನಿ ಮೋದಿ ತಿಳಿಸಿದ್ದಾರೆ.

ಕೇಂದ್ರೀಯ ತನಿಖಾ ಸಂಸ್ಥೆಗಳು ಮತ್ತು ನ್ಯಾಯಾಲಯಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿದ್ದಕ್ಕಾಗಿ ಪ್ರತಿಪಕ್ಷಗಳ ಮೇಲೆ ದಾಳಿ ನಡೆಸಿರುವ ಪ್ರಧಾನಿ ಮೋದಿ, "ನಮ್ಮ ಸಂಸ್ಥೆಗಳ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಲಾಗುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ವ್ಯಕ್ತಿಗಳನ್ನು ಏಜೆನ್ಸಿಗಳು ತನಿಖೆಗೆ ಒಳಪಡಿಸಿದಾಗ ಏಜೆನ್ಸಿಗಳನ್ನು ಗುರಿಯಾಗಿಸಲಾಗುತ್ತದೆ. ನ್ಯಾಯಾಲಯವು ತೀರ್ಪು ನೀಡಿದಾಗ ನ್ಯಾಯಾಲಯಗಳನ್ನು ಪ್ರಶ್ನಿಸಲಾಗುತ್ತದೆ. ನ್ಯಾಯಾಂಗವನ್ನು ಪ್ರಶ್ನಿಸಲಾಗುತ್ತಿದೆ" ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

"ನೀವೆಲ್ಲರೂ ಇದಕ್ಕೆ ಸಾಕ್ಷಿಯಾಗಿದ್ದೀರಿ. ಪಿಎಂಎಲ್‌ಎ ಅಡಿಯಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ 5,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿತ್ತು. ಒಂಬತ್ತು ವರ್ಷಗಳಲ್ಲಿ ಬಿಜೆಪಿ ಆಡಳಿತದಲ್ಲಿ 1,10,000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಮಾಹಿತಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+