ಅಕ್ರಮ ಮದ್ರಸಾ ಮೇಲೆ ಕಣ್ಣಿಡಲು ಐಬಿಗೆ ಸೂಚನೆ
ಬರ್ದ್ವಾನ್ ಸೇರಿದಂತೆ ಅನೇಕ ಸ್ಫೋಟ ಪ್ರಕರಣಗಳಲ್ಲಿ ಅಕ್ರಮ ಮದ್ರಸಾಗಳ ಪಾತ್ರ ಸಾಬೀತಾಗಿದೆ. ಇಲ್ಲಿಯೇ ಭಯೋತ್ಪಾದನೆಯ ಬೀಜ ಬಿತ್ತಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ದೇಶದ ಎಲ್ಲ ಅಕ್ರಮ ಮದ್ರಸಾಗಳ ಕುರಿತು ಸಮೀಕ್ಷೆ ನಡೆಸಿ ವರದಿ ನೀಡಬೇಕೆಂದು ಕೇಂದ್ರ ಸರ್ಕಾರ ಇಂಟೆಲಿಜೆನ್ಸ್ ಬ್ಯೂರೋ (ಐಬಿ)ಗೆ ಸೂಚಿಸಿದೆ.
ಮದ್ರಸಾ ಆರಂಭಿಸಲು ರಾಜ್ಯ ಸರ್ಕಾರದ ಅನುಮತಿ ಪಡೆಯಬೇಕಾಗುತ್ತದೆ. ಅನುಮತಿ ಪಡೆದ ಮದ್ರಸಾಗಳ ನಿರ್ವಹಣೆಗೆ ಸರ್ಕಾರ ಸಹಾಯಧನವನ್ನೂ ನೀಡುತ್ತದೆ. ಆದರೆ, ಅನುಮತಿ ಪಡೆಯದೆ ಆರಂಭವಾಗುವ ಮದ್ರಸಾಗಳು ನಂತರ ಸಹಾಯಧನವೂ ಇಲ್ಲದೆ ಮುನ್ನಡೆಸಲ್ಪಡುತ್ತಿವೆ. ಆದ್ದರಿಂದಲೇ ಇಲ್ಲಿ ಗುಪ್ತವಾಗಿ ಬೇರೆಯದೇ ಚಟುವಟಿಕೆಗಳು ನಡೆಯುತ್ತಿವೆ ಎಂಬ ಅನುಮಾನ ವ್ಯಕ್ತವಾಗಿದೆ.

ಅಕ್ರಮ ಮದ್ರಸಾ ನಡೆಸಲು ಬರುತ್ತೆ ವಿದೇಶಿ ನಿಧಿ
ಕೇಂದ್ರ ಗೃಹ ಸಚಿವಾಲಯಕ್ಕೆ ವರದಿ ನೀಡಿರುವ ಇಂಟೆಲಿಜೆನ್ಸ್ ಬ್ಯೂರೋ, ಅಕ್ರಮ ಮದ್ರಸಾಗಳ ನಿರ್ವಹಣೆಗೆ ವಿದೇಶಗಳಿಂದ ಹಣ ಬರುತ್ತಿವೆ ಎಂದು ತಿಳಿಸಿದೆ. [ಮದ್ರಸಾ ಎಂದರೇನು? #banmadrasa ಏಕೆ?]
ಹಲವು ವರ್ಷಗಳಿಂದ ಅನೇಕ ದೇಶಗಳು ಪರೋಕ್ಷವಾಗಿ ಅಕ್ರಮ ಮದ್ರಸಾಗಳಿಗೆ ಆರ್ಥಿಕ ಸಹಾಯ ನೀಡಿವೆ. ಇಂತಹ ಮದ್ರಸಾಗಳು ಭಯೋತ್ಪಾದಕರ ಶಿಬಿರಗಳಂತಾಗಿವೆ ಎಂದು ಐಬಿ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ. [ಸ್ಫೋಟ ಆರೋಪಿಗೆ ಆಶ್ರಯ: ದೆಹಲಿ ಪೇದೆ ವಿಚಾರಣೆ]
ಮದ್ರಸಾಗಳ ಸಮೀಕ್ಷೆ: ಪಶ್ಚಿಮ ಬಂಗಾಳದಲ್ಲಿ ಹಲವು ಅಕ್ರಮ ಮದ್ರಸಾಗಳಿದ್ದು, ಅವು ಭಯೋತ್ಪಾದನೆಗೆ ಸಹಕರಿಸುತ್ತಿವೆ ಎಂಬುದು ಬರ್ದ್ವಾನ್ ಸ್ಫೋಟ ಪ್ರಕರಣದಲ್ಲಿ ಸಾಬೀತಾಗಿದೆ. ಈ ಮದ್ರಸಾಗಳಲ್ಲಿ ಆಧುನಿಕ ಶಿಕ್ಷಣವನ್ನು ಅಳವಡಿಸಲಾಗಿದೆಯೇ ಎಂಬುದರ ಕುರಿತು ಸಮೀಕ್ಷೆ ನಡೆಸಲಾಗುತ್ತದೆ.
ದೇಶದ ಎಲ್ಲ ಮದ್ರಸಾಗಳನ್ನೂ ಸಮೀಕ್ಷೆಗೊಳಪಡಿಸಲಾಗುವುದು. ಅಕ್ರಮವಾಗಿ ನಡೆಯುತ್ತಿರುವುದನ್ನು ಮುಚ್ಚಿಸಲಾಗುವುದು ಎಂದು ಗೃಹ ಸಚಿವಾಲಯ ತಿಳಿಸಿದೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications