Manipur violence: ಸಹಜಸ್ಥಿತಿಯತ್ತ ಮಣಿಪುರ: ಇಂದಿನಿಂದ ಎಲ್ಲಾ ಶಾಲೆಗಳು ಪುನರಾರಂಭ
ಇಂಫಾಲ ಅಕ್ಟೋಬರ್ 6: ಎಲ್ಲಾ ರಾಜ್ಯ ಸರ್ಕಾರ/ರಾಜ್ಯ ಸರ್ಕಾರಿ ಅನುದಾನಿತ/ಖಾಸಗಿ ಅನುದಾನ ರಹಿತ ಶಾಲೆಗಳನ್ನು ಅಕ್ಟೋಬರ್ 6ರಿಂದ ಪುನರಾರಂಭಿಸಲಾಗುವುದು ಎಂದು ಮಣಿಪುರ ಸರ್ಕಾರ ಗುರುವಾರ ಹೇಳಿದೆ. ರಾಜಧಾನಿ ಇಂಫಾಲದಲ್ಲಿ ಹೊಸ ಹಿಂಸಾಚಾರದಿಂದಾಗಿ ರಾಜ್ಯ ಶಿಕ್ಷಣ ಇಲಾಖೆಯು ಈ ಶಾಲೆಗಳನ್ನು ಸೆಪ್ಟೆಂಬರ್ 27 ಮತ್ತು ಸೆಪ್ಟೆಂಬರ್ 29 ರಂದು ತಾತ್ಕಾಲಿಕವಾಗಿ ಮುಚ್ಚಲು ನಿರ್ದೇಶಿಸಿತ್ತು.
ಮೇ 3 ರಂದು ಈಶಾನ್ಯ ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ಭುಗಿಲೆದ್ದ ನಂತರ ಮಣಿಪುರದಲ್ಲಿ ಶಾಲೆಗಳನ್ನು ಮುಚ್ಚಲಾಯಿತು. ಹಿಂಸಾಚಾರದಿಂದಾಗಿ ಒಂದೆರಡು ತಿಂಗಳ ಕಾಲ ಮುಚ್ಚಲ್ಪಟ್ಟ ನಂತರ ಜುಲೈನಲ್ಲಿ ಮಣಿಪುರದಾದ್ಯಂತ ಶಾಲೆಗಳನ್ನು ಪುನಃ ತೆರೆಯಲಾಯಿತು. ಕಳೆದ ಸೆಪ್ಟೆಂಬರ್ 27 ರಂದು ಇಬ್ಬರು ವಿದ್ಯಾರ್ಥಿಗಳು ನಾಪತ್ತೆಯಾಗಿ ಅವರು ಕೊಲ್ಲಲ್ಪಟ್ಟರು ಎಂದು ಕಂಡುಬಂದ ನಂತರ ನ್ಯಾಯಕ್ಕಾಗಿ ಒತ್ತಾಯಿಸಿ ವಿದ್ಯಾರ್ಥಿಗಳ ಆಂದೋಲನದಿಂದಾಗಿ ಮತ್ತೆ ಶಾಲೆಗಳನ್ನು ಮುಚ್ಚಲಾಯಿತು.

ಮಣಿಪುರದ ಎಲ್ಲಾ ರಾಜ್ಯ ಸರ್ಕಾರ/ರಾಜ್ಯ ಸರ್ಕಾರಿ ಅನುದಾನಿತ/ಖಾಸಗಿ ಅನುದಾನ ರಹಿತ ಶಾಲೆಗಳು 6ನೇ ಅಕ್ಟೋಬರ್ 2023 ರಿಂದ ಪುನರಾರಂಭಗೊಳ್ಳಲಿವೆ ಎಂದು ರಾಜ್ಯ ಶಿಕ್ಷಣ ನಿರ್ದೇಶಕ (ಶಾಲೆಗಳು) ಎಲ್ ನಾದಕುಮಾರ್ ಸಿಂಗ್ ಗುರುವಾರ ಆದೇಶದಲ್ಲಿ ತಿಳಿಸಿದ್ದಾರೆ.
ಸರ್ಕಾರದ ಅಧಿಸೂಚನೆಯು ಹೀಗೆ ಹೇಳುತ್ತದೆ, "ಮಣಿಪುರದಲ್ಲಿರುವ ಎಲ್ಲಾ ರಾಜ್ಯ ಸರ್ಕಾರ/ ರಾಜ್ಯ ಸರ್ಕಾರಿ ಅನುದಾನಿತ/ಖಾಸಗಿ ಅನುದಾನರಹಿತ ಶಾಲೆಗಳು ಅಕ್ಟೋಬರ್ 6ರಿಂದ ಪುನಃ ತೆರೆಯಲ್ಪಡುತ್ತವೆ. ಇದನ್ನು ಸರ್ಕಾರದ ಅನುಮೋದನೆಯೊಂದಿಗೆ ಹೊರಡಿಸಲಾಗಿದೆ'' ಎಂದು ತಿಳಿಸಿದೆ.
ಜುಲೈ 6 ರಂದು ನಾಪತ್ತೆಯಾಗಿದ್ದ ಇಬ್ಬರು ವಿದ್ಯಾರ್ಥಿಗಳಾದ ಲುವಾಂಗ್ಬಿ ಲಿಂಥೋಯಿಂಗಂಬಿ ಹಿಜಾಮ್ (17) ಮತ್ತು ಫಿಜಾಮ್ ಹೇಮಂಜಿತ್ (20) ಅವರ ಮೃತದೇಹಗಳ ಫೋಟೋಗಳು ವೈರಲ್ ಆದ ಬಳಿಕ ಶಾಲೆಗಳನ್ನು ಮುಚ್ಚಲಾಯಿತು. ಈ ಫೋಟೋಗಳು ಸೆಪ್ಟೆಂಬರ್ 25 ರಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡು ಪ್ರದೇಶದಲ್ಲಿ ಹೊಸ ಘರ್ಷಣೆಗಳು ನಡೆದವು. ಅಕ್ಟೋಬರ್ 1 ರಂದು ಇಬ್ಬರು ವಿದ್ಯಾರ್ಥಿಗಳ ಹತ್ಯೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ನೇತೃತ್ವದ ಭದ್ರತಾ ಪಡೆಗಳ ತಂಡವು ನಾಲ್ವರನ್ನು ಬಂಧಿಸಿದೆ.
ಇಬ್ಬರು ವಿದ್ಯಾರ್ಥಿಗಳು ನಾಪತ್ತೆ!
ಜುಲೈನಲ್ಲಿ ನಾಪತ್ತೆಯಾದ ಇಬ್ಬರು ವಿದ್ಯಾರ್ಥಿಗಳ ಶವಗಳನ್ನು ತೋರಿಸುವ ಫೋಟೋಗಳು ಸೆಪ್ಟೆಂಬರ್ 26 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು, ಮಣಿಪುರ ಸರ್ಕಾರವು ಶೀಘ್ರದಲ್ಲೇ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿತ್ತು.
"ವಿದ್ಯಾರ್ಥಿಗಳಾದ ಫಿಜಾಮ್ ಹೇಮಂಜಿತ್ ಮತ್ತು ಹಿಜಾಮ್ ಲಿಂತೋಯಿಂಗಂಬಿ ಅವರ ಅಪಹರಣ ಮತ್ತು ಹತ್ಯೆಗೆ ಕಾರಣವಾದ ಕೆಲವು ಪ್ರಮುಖ ಆರೋಪಿಗಳನ್ನು ಇಂದು ಚುರಾಚಂದ್ಪುರದಿಂದ ಬಂಧಿಸಲಾಗಿದೆ" ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಎಕ್ಸ್ (ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.
ರಾಜ್ಯ ಈ ಹಿಂದೆ ತಿಂಗಳುಗಟ್ಟಲೆ ಜನಾಂಗೀಯ ಹಿಂಸಾಚಾರಕ್ಕೆ ಸಾಕ್ಷಿಯಾಗಿತ್ತು. ಇದರಿಂದಾಗಿ ಮೇ 4ರಿಂದ ಶಾಲೆಗಳನ್ನು ಮುಚ್ಚಲಾಗಿತ್ತು. ಎರಡು ತಿಂಗಳ ವಿರಾಮದ ನಂತರ 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ಸಾಮಾನ್ಯ ತರಗತಿಗಳನ್ನು ಜುಲೈ 4ರಂದು ಪುನರಾರಂಭಿಸಲಾಗಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications