ಮುಂಬೈ ವಿಮಾನ ನಿಲ್ದಾಣದಲ್ಲಿ ದಿಢೀರ್ ಸ್ಥಗಿತಗೊಂಡ ಸೇವೆಗಳು, ಕೌಂಟರ್ಗಳಲ್ಲಿ ಸರತಿ ಸಾಲು, ಪ್ರಯಾಣಿಕರ ಪರದಾಟ
ಮುಂಬೈ, ನವೆಂಬರ್ 12: ಮುಂಬೈನ T2 ವಿಮಾನ ನಿಲ್ದಾಣದಲ್ಲಿ ಪ್ರಸ್ತುತ ಎಲ್ಲಾ ವ್ಯವಸ್ಥೆಗಳು ಸ್ಥಗಿತಗೊಂಡಿವೆ. ಪ್ರಯಾಣಿಕರು ಬ್ಯಾಗೇಜ್ ಡ್ರಾಪ್ಗಾಗಿ ಸುಮಾರು ಒಂದು ಗಂಟೆ ಕಾಯುತ್ತಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆ ಡಿಐಜಿ ಶ್ರೀಕಾಂತ್ ಕಿಶೋರ್ ಮಾತನಾಡಿ, ಎಲ್ಲಾ ಕೌಂಟರ್ಗಳಲ್ಲಿ ಸರತಿ ಸಾಲು ಇದೆ. ಆಪ್ಟಿಕ್ ಫೈಬರ್ ಕೇಬಲ್ ಹಾಳಾಗಿದ್ದರಿಂದ ಸಿಸ್ಟಮ್ ಬ್ಲ್ಯಾಕ್ ಔಟ್ ಆಗಿದೆ ಎಂದು ಅವರು ಮಾಹಿತಿ ನೀಡಿದರು.
ಎಲ್ಲಾ ವಿಮಾನಯಾನ ಸಂಸ್ಥೆಗಳ ಮೇಲೆ ಇದು ಪರಿಣಾಮ ಬೀರಿವೆ ಎಂದು ವಿಸ್ತಾರಾ ವಕ್ತಾರ ತಿಳಿಸಿದ್ದಾರೆ.
ಆಕಾಶ ಏರ್ನ ವಕ್ತಾರರು ಸಹ ವಿಮಾನಯಾನ ಸೇವೆಗಳ ಮೇಲೆ ಆಗಿರುವ ಪರಿಣಾಮವನ್ನು ದೃಢಪಡಿಸಿದ್ದಾರೆ.

ವಿಮಾನ ನಿಲ್ದಾಣ ನಿರ್ವಾಹಕರು ಈ ಸಮಸ್ಯೆಯನ್ನು ಆದಷ್ಟು ಬೇಗನೆ ಸರಿಪಡಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
'ನಾವು ಪ್ರಯಾಣಿಕರ ಅಗತ್ಯಗಳಿಗೆ ಅನುಗುಣವಾಗಿ ಸಹಾಯ ಮಾಡುತ್ತಿದ್ದೇವೆ' ಎಂದು ವಿಮಾನ ನಿಲ್ದಾಣದ ವಕ್ತಾರರು ಹೇಳಿದರು.
We understand that delays are certainly uncomfortable. Our team is working diligently to minimize the inconvenience. They'll be in touch with you for further updates.
— Air India (@airindiain) December 1, 2022
ಜನರು ತಮ್ಮ ಸಂಕಷ್ಟಗಳನ್ನು ಟ್ವಿಟರ್ನಲ್ಲಿ ಹಂಚಿಕೊಂಡಿದ್ದಾರೆ. ಏರ್ ಇಂಡಿಯಾದ ಅನೇಕ ಬಳಕೆದಾರರಿಗೆ ಪ್ರತಿಕ್ರಿಯಿಸಿದೆ. ಅವರ ತಂಡವು, ಅನಾನುಕೂಲತೆಯನ್ನು ಮೊಟಕುಗೊಳಿಸಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ ಎಂದು ತಿಳಿಸಿದೆ.
'ವಿಳಂಬವು ಖಂಡಿತವಾಗಿಯೂ ಅಹಿತಕರವೆಂದು ನಾವು ಅರ್ಥಮಾಡಿಕೊಂಡಿದ್ದೇವೆ. ನಮ್ಮ ತಂಡವು ಅನಾನುಕೂಲತೆಯನ್ನು ಕಡಿಮೆ ಮಾಡಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದೆ. ಹೆಚ್ಚಿನ ಅಪ್ಡೇಟ್ಗಾಗಿ ಅವರು ನಿಮ್ಮೊಂದಿಗೆ ಸಂಪರ್ಕದಲ್ಲಿರುತ್ತಾರೆ' ಎಂದು ಏರ್ ಇಂಡಿಯಾ ಟ್ವೀಟ್ ಮಾಡಿದೆ.
ಮುಂಬೈ ವಿಮಾನದ ನಿಲ್ದಾಣದ ಅಧಿಕಾರಿಗಳ ಪ್ರಕಾರ ಕೇಬಲ್ ಹಾಳಾಗಿದ್ದರಿಂದ ಸಿಸ್ಟಮ್ನಲ್ಲಿ ವ್ಯತ್ಯಯ ಉಂಟಾಗಿದೆ. ಆದರೆ, ಅಡಚಣೆಗೆ ನಿಜವಾದ ಕಾರಣಗಳನ್ನು ತನಿಖೆ ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.
-
War Updates: ಇರಾನ್ಗೆ ಟ್ರಂಪ್ ವಾರ್ನಿಂಗ್: ತೈಲ ಮಾರ್ಗ ಬಂದ್ ಮಾಡಿದರೆ ದೇಶವೇ ಸರ್ವನಾಶ, ಇಂದಿನ ಪ್ರಮುಖಾಂಶಗಳು -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications