ಮಹಿಳಾ ಪೈಲಟ್ ಗಳ ನೇತೃತ್ವದಲ್ಲಿ ಸ್ಯಾನ್ ಫ್ರಾನ್ಸಿಸ್ಕೊ-ಬೆಂಗಳೂರು ವಿಮಾನಯಾನ ಆರಂಭ
ನವದೆಹಲಿ, ಜನವರಿ 09: ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಸ್ಯಾನ್ ಫ್ರಾನ್ಸಿಸ್ಕೊ-ಬೆಂಗಳೂರು ನಡುವೆ ನೇರ ವಿಮಾನ ಯಾನ ಸೇವೆ ಆರಂಭಿಸಿದ್ದು, ಶನಿವಾರ ರಾತ್ರಿ ಸ್ಯಾನ್ ಫ್ರಾನ್ಸಿಸ್ಕೊದಿಂದ ಮೊದಲ ವಿಮಾನ ಸಂಚಾರ ಆರಂಭವಾಗಲಿದೆ. ಮಹಿಳಾ ಪೈಲಟ್ ಗಳೇ ಈ ವಿಮಾನ ಯಾನವನ್ನು ನಿರ್ವಹಿಸುತ್ತಿರುವುದು ವಿಶೇಷವಾಗಿದೆ.
ಈ ಬಗ್ಗೆ ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರತಿಕ್ರಿಯಿಸಿ, "ಏರ್ ಇಂಡಿಯಾದ ಮಹಿಳಾ ಶಕ್ತಿ ವಿಶ್ವದಲ್ಲೇ ಎತ್ತರಕ್ಕೆ ಹಾರಲಿದೆ" ಎಂದು ಶ್ಲಾಘಿಸಿದ್ದಾರೆ. ಏರ್ ಇಂಡಿಯಾದ ಮಹಿಳಾ ಪೈಲಟ್ ಗಳ ತಂಡ ಸ್ಯಾನ್ ಫ್ರಾನ್ಸಿಸ್ಕೊ-ಬೆಂಗಳೂರು ನಡುವಿನ ವಿಮಾನ ಯಾನವನ್ನು ಆರಂಭಿಸಲಿದೆ ಎಂದು ತಿಳಿಸಿದ್ದಾರೆ.
ಕ್ಯಾಪ್ಟನ್ ಝೋಯಾ ಅಗರ್ ವಾಲ್ ನೇತೃತ್ವದಲ್ಲಿ ಮಹಿಳಾ ತಂಡ ಶನಿವಾರ ಮೊದಲ ವಿಮಾನ ಸಂಚಾರ ಆರಂಭಿಸಲಿದೆ. ಕ್ಯಾಪ್ಟನ್ ಪಾಪಗರಿ ತನ್ಮಯ್, ಕ್ಯಾಪ್ಟನ್ ಆಕಾಂಕ್ಷ ಸೋನಾವಾರ್, ಕ್ಯಾಪ್ಟನ್ ಶಿವಾನಿ ಮನಹಾಸ್ ಅವರನ್ನೊಳಗೊಂಡ ಈ ತಂಡ ವಿಮಾನ ಸಂಚಾರದ ಸಾರಥ್ಯ ವಹಿಸಲಿದೆ ಎಂದು ಹರ್ದೀಪ್ ಸಿಂಗ್ ಪುರಿ ಟ್ವೀಟ್ ಮಾಡಿದ್ದಾರೆ.

ಸ್ಯಾನ್ ಫ್ರಾನ್ಸಿಸ್ಕೊ-ಬೆಂಗಳೂರು ನಡುವಿನ ವೈಮಾನಿಕ ಅಂತರ ವಿಶ್ವದ ಅತ್ಯಂತ ದೀರ್ಘ ವಾಯು ಮಾರ್ಗ ಎನಿಸಿಕೊಂಡಿದೆ. 16 ಸಾವಿರ ಕಿಲೋ ಮೀಟರ್ ಅಂತರವನ್ನು ಈ ಮಾರ್ಗ ಒಳಗೊಂಡಿದೆ. ವಿಮಾನ ಉತ್ತರ ಧೃವವನ್ನು ಹಾದು ಅಟ್ಲಾಂಟಿಕ್ ಮಾರ್ಗದ ಮೂಲಕ ಬೆಂಗಳೂರು ತಲುಪಲಿದೆ.
ಮೊದಲ ವಿಮಾನ ಎಐ 176 ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊದಿಂದ ಶನಿವಾರ ರಾತ್ರಿ ಹೊರಡಿಲಿದ್ದು, ಸೋಮವಾರ ಮುಂಜಾನೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾಣ ನಿಲ್ದಾಣದಲ್ಲಿ ಇಳಿಯಲಿದೆ. ಒಟ್ಟು 238 ಸೀಟುಗಳಿರುವ ಬೋಯಿಂಗ್ 777-200 ಎಲ್ ಆರ್ ವಿಮಾನಗಳನ್ನು ಏರ್ ಇಂಡಿಯಾ ಕಾರ್ಯಾಚರಣೆ ನಡೆಸಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications