ಗಲ್ಲು ಶಿಕ್ಷೆ ತಪ್ಪಿಸಿಕೊಂಡ ಕೋಲಿಗೆ ಜೀವಾವಧಿ ಜೈಲುವಾಸ
ಅಲಹಾಬಾದ್, ಜ.28: ನಿಥಾರಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ, ನಂತರ ಅವರನ್ನು ಅಮಾನವೀಯವಾಗಿ ಹತ್ಯೆ ಮಾಡಿದ ಪಾತಕಿ ಸುರೀಂದರ್ ಕೋಲಿ ಗಲ್ಲು ಶಿಕ್ಷೆಯನ್ನು ತಪ್ಪಿಸಿಕೊಂಡಿದ್ದಾನೆ. ತನಗೆ ನೀಡಿದ ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಂತೆ ಅಲಹಾಬಾದ್ ಕೋರ್ಟಿಗೆ ಕೋಲಿ ಮನವಿ ಸಲ್ಲಿಸಿದ್ದ. ಇದಕ್ಕೆ ಕೋರ್ಟ್ ಬುಧವಾರ ಸಮ್ಮತಿ ಸೂಚಿಸಿದೆ.
ಗಾಜಿಯಾಬಾದ್ ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶದಂತೆ 42 ವರ್ಷದ ಅತ್ಯಾಚಾರಿ, ಹಂತಕ ಕೋಲಿಯನ್ನು 2014ರ ಸೆಪ್ಟೆಂಬರ್ 12ರಂದೇ ಮೀರತ್ ಜೈಲಿನಲ್ಲಿ ಗೆಲ್ಲಿಗೇರಿಸಬೇಕಾಗಿತ್ತು. ಸೆ.2 ರಂದು ಕೋಲಿಗೆ ಡೆತ್ ವಾರೆಂಟ್ ಜಾರಿಗೊಳಿಸಲಾಗಿತ್ತು.
ಅದರೆ, ನಿಥಾರಿ ಸರಣಿ ಕೊಲೆ ಪಾತಕಿ ಸುರಿಂದರ್ ಕೋಲಿ ಪುನರ್ ಪರಿಶೀಲನೆ ಮನವಿಯನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿ, ಅಕ್ಟೋಬರ್ 29, 2014ರ ತನಕ ಆತನ ಗಲ್ಲುಶಿಕ್ಷೆ ಜಾರಿಗೊಳಿಸದಂತೆ ತಡೆಯಾಜ್ಞೆ ನೀಡಿತ್ತು.[ನಿಥಾರಿ ಸರಣಿ ಹಂತಕ, ನರಭಕ್ಷಕನಿಗೆ ಡೆತ್ ವಾರೆಂಟ್]

ಅದರೆ, ಗಲ್ಲುಶಿಕ್ಷೆಯನ್ನು ಜೀವಾವಧಿ ಶಿಕ್ಷೆಯನ್ನಾಗಿ ಪರಿವರ್ತಿಸುವಂತೆ ಕೋಲಿ ಅಲಹಾಬಾದ್ ಕೋರ್ಟಿಗೆ ಅರ್ಜಿ ಹಾಕಿಕೊಂಡಿದ್ದ. ಕೋಲಿಗೆ ಜೀವಾವಧಿ ಜೈಲುವಾಸವನ್ನೇ ನೀಡುವಂತೆ ಪ್ರಜಾಪ್ರಭುತ್ವ ಹಕ್ಕುಗಳ ಹೋರಾಟ ಸಂಸ್ಥೆ(ಪಿಯುಡಿಆರ್) ಕೂಡಾ ಮನವಿ ಮಾಡಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾ. ಚಂದ್ರಚೂಡ ಹಾಗೂ ಜಸ್ಟೀಸ್ ಪಿಕೆಎಸ್ ಬಗೇಲ್ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ತೀರ್ಪು ನೀಡಿದೆ. [ವಿಚಾರಣಾಧೀನ ಕೈದಿ ಬಿಡುಗಡೆ : ಲಾಭ ಯಾರಿಗೆ?]
ಡಿಸೆಂಬರ್ 2009ರಲ್ಲಿ ಪಂಧೇರ್ ಬಂಗಲೆಯಲ್ಲಿ ಕೋಲಿ ಸುಮಾರು 19 ಮಂದಿ ಬಾಲಕಿಯರ ಮೇಲೆ ಅತ್ಯಾಚಾರ ನಡೆಸಿ, ಹತ್ಯೆ ನಂತರ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ.ಇದಲ್ಲದೆ ಮೃತ ಬಾಲಕಿಯರ ದೇಹವನ್ನು ಭಕ್ಷಿಸುವಷ್ಟು ಇತ ಕ್ರೂರಿಯಾಗಿದ್ದ. [ನಿತಾರಿ ಸರಣಿ ಹತ್ಯಾಕಾಂಡ : ಮೊನಿಂದರ್ ನಿರ್ದೋಷಿ]
ದೆಹಲಿಯ ಹೊರವಲಯದಲ್ಲಿರುವ ನೋಯ್ಡಾ ಪರಿಸರದ ನಿವಾಸಿಯಾಗಿದ್ದ ರಿಂಪಾ 2005ರಲ್ಲಿ ನಿಗೂಢವಾಗಿ ನಾಪತ್ತೆಯಾಗಿದ್ದಳು. 2006ರಲ್ಲಿ ಪಂಧೇರ್ನ ನಿವಾಸದ ಹಿಂದಿರುವ ಚರಂಡಿಯಲ್ಲಿ ಹಲವಾರು ಮಾನವ ಅವಶೇಷಗಳು ಪತ್ತೆಯಾದ ನಂತರ ಸರಣಿ ಕಗ್ಗೊಲೆ ಪ್ರಕರಣ ಬೆಳಕಿಗೆ ಬಂದಿತ್ತು.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications