ಅಲೋಕ್ ವರ್ಮಾ ವಿರುದ್ಧ ಆರೋಪ ಹಾಸ್ಯಾಸ್ಪದ: ಸುಬ್ರಹ್ಮಣಿಯನ್ ಸ್ವಾಮಿ
ನವದೆಹಲಿ, ಅಕ್ಟೋಬರ್ 26: ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ವಿರುದ್ಧ ಮಾಡಲಾಗುತ್ತಿರುವ ಆರೋಪ 'ಹಾಸ್ಯಾಸ್ಪದ' ಎಂದು ಬಿಜೆಪಿ ವಕ್ತಾರ ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಮೇಲೆ ಶಿಸ್ತುಕ್ರಮವೆಂದು ಹೇಳಿ ಅವರನ್ನು ಕಡ್ಡಾಯ ರಜೆಗೆ ಕಳುಹಿಸಲಾಗಿದೆ. ಆದರೆ ಇದನ್ನು ಸುಬ್ರಹ್ಮಣಿಯನ್ ಸ್ವಾಮಿ ಅವರು ಖಂಡಿಸಿದ್ದಾರೆ.
ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಮೇಲೆ ಪ್ರಕರಣ ದಾಖಲಿಸಿ ಬಂದಿಸಲು ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಮುಂದಾಗಿದ್ದರು. ಆದರೆ ಕ್ಷಿಪ್ರ ಬೆಳವಣಿಗೆಯಲ್ಲಿ ಅಲೋಕ್ ವರ್ಮಾ ಹಾಗೂ ರಾಕೇಶ್ ಅಸ್ಥಾನ ಅವರುಗಳನ್ನು ಕೇಂದ್ರ ಸರ್ಕಾರವು ಕಡ್ಡಾಯ ರಜೆಯ ಮೇಲೆ ಕಳಿಸಿದೆ.

ತಮ್ಮದೇ ಪಕ್ಷದ ನಿರ್ಧಾರವನ್ನು ಕಠುವಾಗಿ ಟೀಕಿಸಿರುವ ಸುಬ್ರಹ್ಮಣಿಯನ್ ಸ್ವಾಮಿ, ಇದು ಪಕ್ಷದ ಭ್ರಷ್ಟಾಚಾರ ನಿರ್ಮೂಲನೆ ಉದ್ದೇಶಕ್ಕೆ ತಡೆ ಒಡ್ಡುತ್ತದೆ ಎಂದಿದ್ದಾರೆ. ಕೇಂದ್ರವು ಅಲೋಕ್ ವರ್ಮಾ ಮೇಲೆ ಮಾಡಿರುವ ಆರೋಪವು ಹಾಸ್ಯಾಸ್ಪದ ಎಂದು ತಮ್ಮದೇ ಪಕ್ಷದ ನಿರ್ಣಯವನ್ನು ಸ್ವಾಮಿ ಖಂಡಿಸಿದ್ದಾರೆ.
ಮೋದಿ ಅವರನ್ನು ಸಹ ಟೀಕಿಸಿರುವ ಅವರು, ಮೋದಿ ಅವರು ವಿವಿಧ ಪ್ರಮುಖರನ್ನು ಭೇಟಿ ಮಾಡಲು ಬಹು ಸಮಯ ವ್ಯಯಿಸುತ್ತಾರೆ. ಆದರೆ ಅವರ ಸುತ್ತಲಿನ ಅಧಿಕಾರಿಗಳು ಎಷ್ಟು ಪ್ರಾಮಾಣಿಕರು ಎಂದು ತಿಳಿದುಕೊಳ್ಳುವ ಪ್ರಯತ್ನ ಅವರು ಮಾಡಿದ್ದಾರೆಯೇ? ಎಂದು ಸ್ವಾಮಿ ಪ್ರಶ್ನಿಸಿದ್ದಾರೆ.
ಆ ಮೂಲಕ ಮೋದಿ ಅವರ ಸುತ್ತ-ಮುತ್ತಲಿನ ಅಧಿಕಾರಿಗಳಲ್ಲಿ ಕೆಲವರು ಭ್ರಷ್ಟರು ಇದ್ದಾರೆ ಅವರು ಮೋದಿ ಅವರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications