ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಮುಖ್ಯಸ್ಥರಾಗಿ ಅಲೋಕ್ ಜೋಶಿ ನೇಮಕ

ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (ಎನ್‌ಎಸ್‌ಎಬಿ) ಪರಿಷ್ಕರಿಸಿದೆ. RAW ಮಾಜಿ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ಅದರ ಹೊಸ ಮುಖ್ಯಸ್ಥರನ್ನಾಗಿ ಮತ್ತು ಇತರ ಆರು ಸದಸ್ಯರನ್ನು ನೇಮಿಸಿದೆ. ಪಾಕಿಸ್ತಾನದ ಮೇಲೆ ಯುದ್ಧ ವಾತಾವರಣ ಸೃಷ್ಟಿಯಾಗಿರುವ ಸಂದರ್ಭದಲ್ಲೇ ಕೇಂದ್ರವು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪುನರ್ ರಚಿಸುವ ಮೂಲಕ ಮಹತ್ವದ ಹೆಜ್ಜೆ ಇಟ್ಟಿದೆ. ಪಹಲ್ಗಾಮ್ ದಾಳಿಯ ನಂತರ ಪ್ರಧಾನಿ ಮೋದಿ ತಮ್ಮ ನಿವಾಸದಲ್ಲಿ ಭದ್ರತೆಯ ಕುರಿತಾದ ಕ್ಯಾಬಿನೆಟ್ ಸಮಿತಿ (ಸಿಸಿಎಸ್) ಸಭೆ ನಡೆಸಿದ ನಂತರ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎರಡು ಪರಮಾಣು ಶಸ್ತ್ರಸಜ್ಜಿತ ರಾಷ್ಟ್ರಗಳಾದ ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ಸಮಯದ ನಡುವೆ ಈ ಮಹತ್ವದ ಬೆಳವಣಿಗೆ ನಡೆದಿದೆ. ಎನ್‌ಎಸ್‌ಎಬಿ ಏಳು ಸದಸ್ಯರನ್ನು ಒಳಗೊಂಡ ಅತ್ಯುನ್ನತ ಸಂಸ್ಥೆಯಾಗಿದ್ದು, ಇದು ಸರ್ಕಾರಕ್ಕೆ ಭದ್ರತೆಗೆ ಸಂಬಂಧಿಸಿದ ವಿಷಯಗಳಲ್ಲಿ ಪರಿಣಿತ ಮತ್ತು ಕಾರ್ಯತಂತ್ರವನ್ನು ಒದಗಿಸುತ್ತದೆ.

Alok Joshi Appointed As New Head of India National Security Advisory Board

ಎನ್‌ಎಸ್‌ಎಬಿ ಬಹುಶಿಸ್ತಿನ ಸಂಸ್ಥೆಯಾಗಿದ್ದು ಸರ್ಕಾರದ ಹೊರಗಿನ ಶ್ರೇಷ್ಠ ವ್ಯಕ್ತಿಗಳನ್ನು ಒಳಗೊಂಡಿದ್ದು, ರಾಷ್ಟ್ರೀಯ ಭದ್ರತಾ ಮಂಡಳಿಗೆ ದೀರ್ಘಕಾಲೀನ ವಿಶ್ಲೇಷಣೆಯನ್ನು ಒದಗಿಸುವ ಮತ್ತು ಅದರ ಗಂಭೀರ ಸಮಸ್ಯೆಗಳಿಗೆ ಪರಿಹಾರಗಳು ಮತ್ತು ನೀತಿ ಆಯ್ಕೆಗಳ ಶಿಫಾರಸು ಮಾಡುವ ಪ್ರಮುಖ ಜವಾಬ್ದಾರಿ ನಿರ್ವಹಿಸುತ್ತದೆ.

Take a Poll

ಅಲೋಕ್ ಜೋಶಿ ದೇಶದ ಅತ್ಯಂತ ಗೌರವಾನ್ವಿತ ಐಪಿಎಸ್ ಅಧಿಕಾರಿಗಳಲ್ಲಿ ಒಬ್ಬರೆಂದು ಕರೆಯಲಾಗಿದೆ. ಅವರು ರಾ ಮತ್ತು ಇತರ ಹುದ್ದೆಗಳಲ್ಲಿ ತಮ್ಮ ಅಧಿಕಾರಾವಧಿಯಲ್ಲಿ ವಿವಿಧ ಯಶಸ್ವಿ ಯೋಜನೆಗಳನ್ನು ನಿರ್ವಹಿಸಿದ್ದಾರೆ. ಅವರನ್ನು ಗುಪ್ತಚರ ಕಾರ್ಯಾಚರಣೆಗಳಲ್ಲಿ ಪರಿಣಿತರು ಎಂದು ಪರಿಗಣಿಸಲಾಗಿದೆ. ಮಂಡಳಿಯ ಇತರ ಸದಸ್ಯರಲ್ಲಿ ಮಿಲಿಟರಿ ಸೇವೆಗಳಿಂದ ನಿವೃತ್ತ ಅಧಿಕಾರಿಗಳಾದ ಮಾಜಿ ವೆಸ್ಟರ್ನ್ ಏರ್ ಕಮಾಂಡರ್ ಏರ್ ಮಾರ್ಷಲ್ ಪಿ.ಎಂ.ಸಿನ್ಹಾ, ಮಾಜಿ ದಕ್ಷಿಣ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಎ.ಕೆ.ಸಿಂಗ್ ಮತ್ತು ರಿಯರ್ ಅಡ್ಮಿರಲ್ ಮಾಂಟಿ ಖನ್ನಾ ಇದ್ದಾರೆ. ಭಾರತೀಯ ಪೊಲೀಸ್ ಸೇವೆಯಿಂದ ನಿವೃತ್ತರಾದ ರಾಜೀವ್ ರಂಜನ್ ವರ್ಮಾ ಮತ್ತು ಮನಮೋಹನ್ ಸಿಂಗ್, ನಿವೃತ್ತ ಐಎಫ್‌ಎಸ್ ಅಧಿಕಾರಿ ಬಿ.ವೆಂಕಟೇಶ್ ವರ್ಮಾ ಕೂಡ ಇದ್ದಾರೆ.

Alok Joshi Appointed As New Head of India National Security Advisory Board

ಪ್ರಧಾನಿಯವರ ಅಧ್ಯಕ್ಷತೆಯಲ್ಲಿ ಪ್ರಧಾನಿಯವರ ನಿವಾಸದಲ್ಲಿ ಭದ್ರತೆ ಕುರಿತ ಸಂಪುಟ ಸಮಿತಿ ಸಭೆಯನ್ನು ಕರೆಯಲಾಗಿತ್ತು. ಸಭೆಯಲ್ಲಿ ರಾಷ್ಟ್ರೀಯ ಸನ್ನದ್ಧತೆಯ ವಿವಿಧ ಅಂಶಗಳ ಕುರಿತು ಚರ್ಚಿಸಲಾಗಿದೆ. ಭಯೋತ್ಪಾದಕ ದಾಳಿಯ ನಂತರ ತಿರುಗೇಟು ನೀಡಲು ಕೈಗೊಂಡ ಸನ್ನದ್ಧತೆಯ ಪ್ರತಿಯೊಂದು ಅಂಶವನ್ನು ಈ ಸಭೆಯಲ್ಲಿ ಸರ್ಕಾರ ಪರಿಶೀಲಿಸಿದೆ.

ಎನ್‌ಎಸ್‌ಎಬಿ ಆಯ್ಕೆ ಹೇಗೆ?

ಎನ್‌ಎಸ್‌ಎಬಿಗೆ ಕೇಂದ್ರ ಸರ್ಕಾರವು ಅಧಿಕೃತ ಸರ್ಕಾರಿ ಕ್ಷೇತ್ರದ ಹೊರಗಿನ ಪ್ರತಿಷ್ಠಿತ ಮತ್ತು ಅನುಭವಿ ವ್ಯಕ್ತಿಗಳನ್ನು ಸಲಹಾ ಗುಂಪಿನ ಸದಸ್ಯರನ್ನಾಗಿ ನೇಮಕ ಮಾಡಿಕೊಳ್ಳುತ್ತದೆ. ಸಾಮಾನ್ಯವಾಗಿ ಕಾರ್ಯಕ್ಷಮತೆ ಮತ್ತು ವಿಶಿಷ್ಟ ದಾಖಲೆಗಳನ್ನು ಹೊಂದಿರುವ ಮಾಜಿ ಅಧಿಕಾರಿಗಳನ್ನೇ ಪರಿಗಣಿಸಲಾಗುತ್ತದೆ. ಈ ಮಂಡಳಿಯ ಸದಸ್ಯರಾಗಿ ಅಥವಾ ಅಧ್ಯಕ್ಷರಾಗಿ ನೇಮಕಗೊಂಡವರು ಮಿಲಿಟರಿ, ಶೈಕ್ಷಣಿಕ ಮತ್ತು ನಾಗರಿಕ ಸಮಾಜದ ಪ್ರತಿಷ್ಠಿತ ಸದಸ್ಯರಿಂದ ಆಯ್ಕೆಯಾಗಿರುತ್ತಾರೆ. ವಿದೇಶಾಂಗ ವ್ಯವಹಾರಗಳು, ರಕ್ಷಣೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಆರ್ಥಿಕ ವ್ಯವಹಾರಗಳಂತಹ ಕ್ಷೇತ್ರಗಳಲ್ಲಿ ಆಳವಾದ ಪರಿಣತಿ ಮತ್ತು ಅನುಭವ ಹೊಂದಿರುವವರನ್ನು ಆಯ್ಕೆ ಮಾಡಲಾಗುತ್ತದೆ.

ಮೋದಿ ಸಭೆಯಲ್ಲಿ ಚರ್ಚೆಯಾಗಿದ್ದೇನು?

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಒಂದು ದಿನದ ನಂತರ ಭದ್ರತೆ ಕುರಿತ ಸಂಪುಟ ಸಮಿತಿ ಸಭೆ ಸೇರಿದೆ. ಈ ಸಭೆಗೆ ನೀಡಿದ ವಿವರಣೆಯಲ್ಲಿ, ಭಯೋತ್ಪಾದಕ ದಾಳಿಯ ಗಡಿಯಾಚೆಗಿನ ಸಂಪರ್ಕಗಳನ್ನು ಉಲ್ಲೇಖಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆಗಳು ಯಶಸ್ವಿಯಾಗಿ ನಡೆದ ನಂತರ ಮತ್ತು ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಯತ್ತ ಅದರ ಸ್ಥಿರ ಪ್ರಗತಿಯ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ ಎಂದೂ ಚರ್ಚೆಯಲ್ಲಿ ಪ್ರಸ್ತಾಪವಾಗಿದೆ.

ಸಿಂಧೂ ಜಲ ಒಪ್ಪಂದವನ್ನು ಸ್ಥಗಿತಗೊಳಿಸುವುದು ಮತ್ತು ಅಟ್ಟಾರಿಯಲ್ಲಿನ ಸಮಗ್ರ ಚೆಕ್ ಪೋಸ್ಟ್ ಅನ್ನು ಮುಚ್ಚುವುದು ಸೇರಿದಂತೆ ಗಡಿಯಾಚೆಗಿನ ಭಯೋತ್ಪಾದನೆಗೆ ಭಾರತ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಹೈಕಮಿಷನ್‌ಗಳ ಬಲವನ್ನು ಕಡಿಮೆ ಮಾಡಲು ಭಾರತ ನಿರ್ಧರಿಸಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತಿಕ್ರಿಯೆಯನ್ನು ನಿರ್ಧರಿಸಲು ಸರ್ಕಾರ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯವನ್ನು ನೀಡಿದೆ ಎಂದು ವರದಿಯಾಗಿದೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 25 ಭಾರತೀಯರು ಹಾಗೂ ಒಬ್ಬ ನೇಪಾಳಿ ನಾಗರಿಕ ಸೇರಿದಂತೆ 26 ಪ್ರವಾಸಿಗರು ಸಾವನ್ನಪ್ಪಿದ ನಂತರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತಾ ಸಂಪುಟ ಸಮಿತಿ ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿನ ಒಟ್ಟಾರೆ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದೆ. ದಾಳಿಯ ಕುರಿತು ಉನ್ನತ ರಕ್ಷಣಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಒಂದು ದಿನದ ನಂತರ ಪ್ರಧಾನಿ ಮೋದಿ ಅವರ ನಿವಾಸದಲ್ಲಿ ಸಭೆ ಸೇರಲಾಗಿತ್ತು.

ಪಾಕಿಸ್ತಾನದ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗಳ ಕುರಿತು ಚರ್ಚಿಸಲು ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮಾತನಾಡಿದ್ದಾರೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. ನಿಯಂತ್ರಣ ರೇಖೆ (LOC) ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಅಪ್ರಚೋದಿತ ಕದನ ವಿರಾಮ ಉಲ್ಲಂಘನೆಗಳ ವಿರುದ್ಧ ಭಾರತ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದೆ. ನಿಯಂತ್ರಣ ರೇಖೆಯುದ್ದಕ್ಕೂ ಪಾಕಿಸ್ತಾನ ಸೇನೆಯ ಅಪ್ರಚೋದಿತ ಸಣ್ಣ ಶಸ್ತ್ರಾಸ್ತ್ರಗಳ ಗುಂಡಿನ ದಾಳಿಗೆ ಭಾರತೀಯ ಸೇನೆಯು ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸಿದೆ. ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಮತ್ತು ಪೂಂಚ್ ಜಿಲ್ಲೆಗಳ ಎದುರಿನ ಪ್ರದೇಶಗಳಲ್ಲಿ ಏಪ್ರಿಲ್ 27-28ರ ರಾತ್ರಿ ನಡೆದ ಕದನ ವಿರಾಮ ಉಲ್ಲಂಘನೆಗೆ ಸೇನೆಯು ತಕ್ಕ ಪ್ರತಿಕ್ರಿಯೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಿಂದ ಹೊರ ಹೋದ 1,465 ಪಾಕ್‌ ಪ್ರಜೆಗಳು

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಸರ್ಕಾರಿ ಆದೇಶದ ನಂತರ ಕಳೆದ ಆರು ದಿನಗಳಲ್ಲಿ 55 ರಾಜತಾಂತ್ರಿಕರು ಅವರ ಅವಲಂಬಿತರು ಮತ್ತು ಸಹಾಯಕ ಸಿಬ್ಬಂದಿ, ಪಾಕಿಸ್ತಾನಿ ವೀಸಾ ಹೊಂದಿರುವ ಎಂಟು ಭಾರತೀಯರು ಸೇರಿದಂತೆ 786 ಪಾಕಿಸ್ತಾನಿ ಪ್ರಜೆಗಳು ಅಟ್ಟಾರಿ-ವಾಘಾ ಗಡಿ ದಾಟುವ ಮೂಲಕ ಭಾರತವನ್ನು ತೊರೆದಿದ್ದಾರೆ. ಏಪ್ರಿಲ್ 24ರಿಂದ ಪಂಜಾಬ್‌ನಲ್ಲಿರುವ ಅಂತರರಾಷ್ಟ್ರೀಯ ಗಡಿ ದಾಟುವ ಮೂಲಕ ಪಾಕಿಸ್ತಾನದಿಂದ ಭಾರತಕ್ಕೆ ದೀರ್ಘಾವಧಿಯ ಭಾರತೀಯ ವೀಸಾ ಹೊಂದಿರುವ 151 ಪಾಕಿಸ್ತಾನಿ ನಾಗರಿಕರಲ್ಲದೆ, 25 ರಾಜತಾಂತ್ರಿಕರು ಮತ್ತು ಅಧಿಕಾರಿಗಳು ಸೇರಿದಂತೆ ಒಟ್ಟು 1,465 ಭಾರತೀಯರು ಗಡಿ ದಾಟಿದ್ದಾರೆ ಎಂದು ವರದಿಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+