ಅಲೋಕ್ ವರ್ಮಾ ಮಹಾನಿರ್ಗಮನದ ಹಿಂದೆ ನಡೆದಿದ್ದು ಏನು?
ನವದೆಹಲಿ, ಜನವರಿ 11: ಎಪ್ಪತ್ತೆರಡು ದಿನಗಳ ಹೋರಾಟದ ನಂತರ ಸಿಬಿಐ ನಿರ್ದೇಶಕ ಸ್ಥಾನಕ್ಕೆ ಮರಳಿದ ಒಂದೇ ದಿನದಲ್ಲಿ ಅಲೋಕ್ ವರ್ಮಾ ಅವರಿಗೆ ಮತ್ತೆ ಗೇಟ್ ಪಾಸ್ ನೀಡಲಾಗಿದೆ. ಅವರನ್ನು ಬೇರೆಯ ಇಲಾಖೆಗೆ ನಿರ್ದೇಶಕರಾಗಿ ನೇಮಿಸಲಾಗಿದೆ.
ಕೇಂದ್ರ ಸರ್ಕಾರವು ಕಡ್ಡಾಯ ರಜೆಯ ಮೇಲೆ ಕಳುಹಿಸಿದ್ದ ಅಲೋಕ್ ವರ್ಮಾ ಅವರನ್ನು ಸುಪ್ರಿಂಕೋರ್ಟ್ ಮೊನ್ನೆಯಷ್ಟೆ ಸಿಬಿಐ ನಿರ್ದೇಶಕರಾಗಿ ಮರುನಿಯೋಜನೆಗೊಳಿಸಿ ಆದೇಶ ಹೊರಡಿಸಿತ್ತು. ಆದರೆ ನಿನ್ನೆ ಪ್ರಧಾನಿ ಮೋದಿ, ನ್ಯಾಯಾಧೀಶ ಎಕೆ ಸಿಖ್ರಿ, ಕಾಂಗ್ರೆಸ್ನ ಸಂಸದ ಮಲ್ಲಿಕಾರ್ಜುನ ಖರ್ಗೆ ಅವರ ವಿಶೇಷ ಸಮಿತಿಯು ಅಲೋಕ್ ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ವಜಾಗೊಳಿಸಿ ಬೇರೆ ಇಲಾಖೆಗೆ ವರ್ಗ ಮಾಡಿತ್ತು.
ಬುಧವಾರವೇ ಈ ಸಮಿತಿ ಸಭೆ ಸೇರಿತ್ತು ಆದರೆ ಯಾವುದೇ ನಿರ್ಣಯಕ್ಕೆ ಬಂದಿರಲಿಲ್ಲ. ನಂತರ ಗುರುವಾರ ಸಭೆ ಸೇರಲಾಗಿ ಸಭೆಯ ಮುಂದೆ ಸಿವಿಸಿ (ಕೇಂದ್ರ ವಿಚಕ್ಷಣಾ ಸಮತಿ)ಯ ವರದಿಗಳನ್ನು ಇಡಲಾಯಿತು. ವರದಿ ಅವಲೋಕಿಸಿದ ಬಳಿಕ ಸುಪ್ರಿಂಕೋರ್ಟ್ ನ್ಯಾಯಾಧೀಶ ಎಕೆ ಸಿಖ್ರಿ ಅವರು ವರ್ಮಾ ಅವರನ್ನು ಸಿಬಿಐ ನಿರ್ದೇಶಕ ಸ್ಥಾನದಿಂದ ಸರಿಸಲು ಒಪ್ಪಿಗೆ ಸೂಚಿಸಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ವಿರೋಧ
ಆದರೆ ಇದಕ್ಕೆ ಆಕ್ಷೇಪಣೆ ಸಲ್ಲಿಸಿದ ಕಾಂಗ್ರೆಸ್ನ ಮಲ್ಲಿಕಾರ್ಜುನ ಖರ್ಗೆ ಅವರು, 'ಎಲ್ಲಿವೆ ಆರೋಪಗಳು?' ಸಿವಿಸಿ ಸಲ್ಲಿಸಿರುವ ವರದಿಯಲ್ಲಿನ ಆರೋಪಗಳಿಗೆ ಗಟ್ಟಿ ಆಧಾರಗಳಿಲ್ಲ ಎಂದ ಅವರು, ಅಲೋಕ್ ವರ್ಮಾ ಅವರನ್ನು ನಿರ್ದೇಶಕ ಸ್ಥಾನದಿಂದ ಸರಿಸುವುದಕ್ಕೆ ಆಕ್ಷೇಪಣೆ ವ್ಯಕ್ತಪಡಿಸಿದ್ದಾರೆ.

2:1 ಮತಗಳಿಂದ ನಿರ್ಣಯ
ಆ ನಂತರ ಸಮಿತಿಯ ನೇತೃತ್ವ ವಹಿಸಿದ್ದ ಪ್ರಧಾನಿ ಮೋದಿ ಅವರು ಹಾಗೂ ಸಿಖ್ರಿ ಅವರು ಅಲೋಕ್ ವರ್ಮಾ ಅವರನ್ನು ನಿರ್ದೇಶಕ ಸ್ಥಾನದಿಂದ ಕೈಬಿಡಲು ಒಪ್ಪಿಗೆ ಸೂಚಿಸಿದ್ದಾರೆ. ಅಂತಿಮವಾಗಿ 2:1 ಮತಗಳ ಆಧಾರದ ಮೇಲೆ ಅಲೋಕ್ ವರ್ಮಾ ಅವರನ್ನು ನಿರ್ದೇಶಕ ಸ್ಥಾನದಿಂದ ಕೆಳಗಿಳಿಸಿ ಬೇರೆ ಇಲಾಖೆಗೆ ವರ್ಗ ಮಾಡಲಾಗಿದೆ.

ಬೇರೆ ಇಲಾಖೆಗೆ ಅಲೋಕ್ ವರ್ಮಾ ವರ್ಗ
ಅಲೋಕ್ ವರ್ಮಾ ಅವರನ್ನು ಅಗ್ನಿಶಾಮಕ, ಸಾಗರೀಕ ಸಂರಕ್ಷಣೆ ಮತ್ತು ಹೋಮ್ ಗಾರ್ಡ್ ವಿಭಾಗಕ್ಕೆ ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ನಾಗೇಶ್ವರ ರಾವ್ ಅವರು ಮತ್ತೆ ಸಿಬಿಐನ ಪ್ರಭಾರಿ ನಿರ್ದೇಶಕರಾಗಿ ನೇಮಕಗೊಂಡಿದ್ದಾರೆ.

'ಪೂರ್ವನಿಯೋಜಿತ ಮಾದರಿಯ ಸಭೆ'
ಸಭೆಯ ನಂತರ ಮಾತನಾಡಿದ ಖರ್ಗೆ ಅವರು, ಪೂರ್ವನಿಯೋಜಿತ ರೀತಿಯಲ್ಲಿ ಸಭೆಯಲ್ಲಿ ವಿಚಾರಳನ್ನು ಮಂಡಿಸಲಾಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ಸಿಖ್ರಿ ಬಗ್ಗೆ ಕೇಳಲಾದ ಪ್ರಶ್ನೆಗೆ 'ಅವರು ರಂಜನ್ ಗೊಗಾಯ್ ಅವರ ಪ್ರತಿನಿಧಿಯಾಗಿ ಸಭೆಯಲ್ಲಿ ಇದ್ದರೆ ಹೊರತು, ನ್ಯಾಯಮೂರ್ತಿಯಾಗಿ ಅಲ್ಲ' ಎಂದು ಖಾರವಾದ ಉತ್ತರ ನೀಡಿದ್ದಾರೆ.

ಬಿಜೆಪಿ ಸ್ವಾಗತ, ಕಾಂಗ್ರೆಸ್ ವಿರೋಧ
ಉನ್ನತ ಸಮಿತಿಯ ನಿರ್ಣಯವನ್ನು ಬಿಜೆಪಿ ಸ್ವಾಗತಿಸಿದ್ದರೆ ಕಾಂಗ್ರೆಸ್ ವಿರೋಧಿಸಿದೆ. ಹೊಸ ಸಿಬಿಐ ನಿರ್ದೇಶಕರನ್ನು ನೇಮಕ ಮಾಡುವ ಅಧಿಕಾರಿ ಇದೇ ಉನ್ನತ ಸಮಿತಿಗೆ ಇದ್ದು ಇದರಲ್ಲಿ ಮಲ್ಲಿಕಾರ್ಜುನ ಖರ್ಗೆ ಇದ್ದಾರೆ. ಹಾಗಾಗಿ ಹೊಸ ನಿರ್ದೇಶಕರ ನೇಮಕ ಬಿಜೆಪಿಗೆ ಸವಾಲಾಗಿರಲಿದೆ.

ಬಿಜೆಪಿಗೆ ಕಾಡಿದ್ದ ಭಯ
ಸುಪ್ರಿಂ ಆದೇಶದಂತೆ ಮತ್ತೆ ಸಿಬಿಐ ನಿರ್ದೇಶಕ ಸ್ಥಾನಕ್ಕೆ ಏರಿದ ಅಲೋಕ್ ವರ್ಮಾ ಕೆಲವೇ ಗಂಟೆಗಳಲ್ಲಿ ತಮ್ಮ ಆಪ್ತರ ವರ್ಗಾವಣೆ ಆದೇಶವನ್ನು ರದ್ದು ಗೊಳಿಸಿದರು. ಸಿಬಿಐ ವಿಶೇಷ ನಿರ್ದೇಶಕ ರಾಕೇಶ್ ಅಸ್ಥಾನಾ ಅವರನ್ನು ಬಂಧಿಸುವ ಸಾಧ್ಯತೆಯು ಇದೆ ಎಂಬ ಅನುಮಾನ ಬಿಜೆಪಿಗೆ ಇತ್ತು ಹಾಗಾಗಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗುತ್ತಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications