ಮಲ್ಯ, ನೀರವ್ ಮೋದಿ ಪರಾರಿಗೆ ಅಲೋಕ್ ವರ್ಮಾ ನೆರವು?
ನವದೆಹಲಿ, ಜನವರಿ 13: ಬಹುಕೋಟಿ ಹಗರಣಗಳ ರುವಾರಿಗಳಾದ ನೀರವ್ ಮೋದಿ ಹಾಗೂ ವಿಜಯ್ ಮಲ್ಯ ಅವರ ಪರಾರಿಗೆ ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಅವರು ಪರೋಕ್ಷವಾಗಿ ನೆರವಾಗಿದ್ದರು ಎಂಬ ಆರೋಪ ಕೇಳಿ ಬಂದಿದೆ. ಸಿ.ಶಿವಶಂಕರನ್ಗೆ ಸಿಬಿಐ ಮಾಜಿ ನಿರ್ದೇಶಕ ಅಲೋಕ್ ವರ್ಮಾ ಪರೋಕ್ಷವಾಗಿ ನೆರವಾಗಿದ್ದರು ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಪಿಎನ್ಬಿ ಹಗರಣದ ತನಿಖೆಗೆ ಸಂಬಂಧಿಸಿದ ಸೂಕ್ಷ್ಮ ದಾಖಲೆಗಳಿಂದ ಇಮೇಲ್ ಸೋರಿಕೆಯಲ್ಲೂ ಅಲೋಕ್ ವರ್ಮಾ ಅವರ ಪಾತ್ರವಿದೆ ಎಂದು ದೂರು ಕೇಂದ್ರೀಯ ವಿಚಕ್ಷಣ ದಳ (ಸಿವಿಸಿ)ದಲ್ಲಿ ದಾಖಲಾಗಿದೆ.
ಐಡಿಬಿಐ ಬ್ಯಾಂಕ್ಗೆ 600 ಕೋಟಿ ರು ವಂಚನೆ ಮಾಡಿರುವ ಏರ್ ಸೆಲ್ ಸ್ಥಾಪಕ ಸಿ ಶಿವಶಂಕರನ್ ನಾಪತ್ತೆಯಾದ ಬಳಿಕ ಹೊರಡಿಸಲಾದ ಲುಕ್ ಔಟ್ ನೋಟಿಸ್ ಪ್ರಭಾವ ತಗ್ಗಿಸುವುದರಲ್ಲೂ ಅಲೋಕ್ ವರ್ಮಾ ಅವರು ನೆರವಾಗಿದ್ದರು ಎಂದು ಹೇಳಲಾಗಿದೆ.

ಇದೇ ರೀತಿ ಉದ್ಯಮಿ ವಿಜಯ್ ಮಲ್ಯ ಲುಕ್ಔಟ್ ನೋಟಿಸ್ ಪ್ರಭಾವ ಸಡಿಲಗೊಳಿಸಿದ ಸಿಬಿಐ ಜಂಟಿ ನಿರ್ದೇಶಕ ಎ.ಕೆ. ಶರ್ಮ ಕೂಡ ಅಲೋಕ್ ವರ್ಮಾ ಅವರ ಆಪ್ತವಲಯದವರು ಎಂದು ತಿಳಿದು ಬಂದಿದೆ. ಮಲ್ಯಗೆ ಸಂಬಂಧಿತ ಪ್ರಕರಣದಲ್ಲಿಯೂ ಅಲೋಕ್ ಹಸ್ತಕ್ಷೇಪದ ಬಗ್ಗೆ ತನಿಖೆ ನಡೆಯುವ ಸಾಧ್ಯತೆಯಿದೆ. ಈ ಆರೋಪಗಳಿಗೆ ಸಂಬಂಧಿಸಿ ಸಿಬಿಐನಿಂದ ಸಿವಿಸಿ ಅಧಿಕಾರಿಗಳು ವಿವರಣೆ ಕೇಳಿದ್ದಾರೆ. ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ವಿರುದ್ಧದ ಏರ್ಸೆಲ್-ಮ್ಯಾಕ್ಸಿಸ್ ಹಗರಣದಲ್ಲಿ ಶಿವಶಂಕರನ್ ದೂರುದಾರರಾಗಿದ್ದಾರೆ. ಅವರು ಪರಾರಿಯಾಗಿರುವುದು ಚಿದಂಬರಂಗೆ ಸಹಕಾರಿಯಾಗಲಿದೆ ಎಂಬ ಆರೋಪವಿದೆ.
ಇದಲ್ಲದೆ, ಸುಧಾಂಶು ಖರೆ ಅವರನ್ನು ಸಿಬಿಐನ ಲಕ್ನೋ ಬ್ರ್ಯಾಂಚಿಗೆ ವರ್ಗಾವಣೆ ಮಾಡುವುದರಲ್ಲಿ ಹಾಗೂ ಉತ್ತರಪ್ರದೇಶದ ಎಟಿಎಸ್ ಹೆಚ್ಚುವರಿ ಎಸ್ ಪಿ ರಾಜೇಶ್ ಸಹ್ನಿ ನಿಗೂಢ ಸಾವು ಪ್ರಕರಣ ಸೇರಿದಂತೆ ಐದಾರು ಕೇಸುಗಳು ಈಗ ಅಲೋಕ್ ವರ್ಮಾ ಅವರ ಮೇಲೆ ಹೊರಸಲಾಗಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications